ಕರ್ನಾಟಕ ವಿಧಾನ ಪರಿಷತ್‌ನ 4 ಕ್ಷೇತ್ರಗಳಿಗೆ ಚುನಾವಣೆ‌ ಘೋಷಣೆ

Published : Sep 29, 2020, 02:33 PM IST
ಕರ್ನಾಟಕ ವಿಧಾನ ಪರಿಷತ್‌ನ 4 ಕ್ಷೇತ್ರಗಳಿಗೆ ಚುನಾವಣೆ‌ ಘೋಷಣೆ

ಸಾರಾಂಶ

ದಿನಾಂಕ 30-06-2020ರಂದು ಕೊನೆಗೊಳ್ಳುತ್ತಿರುವ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದ್ದು, ಈ ನಾಲ್ಕು ಪದವೀಧರ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಚುನಾವಣಾ ದಿನಾಂಕ ಘೋಷಣೆ ಮಾಡಿದೆ.

ನವದೆಹಲಿ, (ಸೆ.29): ಕರ್ನಾಟಕ ವಿಧಾನ‌ಪರಿಷತ್‌ನ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರದ ಸ್ಥಾನಗಳಿಗೆ ಚುನಾವಣೆ‌ ಘೋಷಣೆಯಾಗಿದೆ.‌

ಆಗ್ನೇಯ ಪದವೀಧರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು‌ ಶಿಕ್ಷಕರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಕೇಂದ್ರ ಚುನಾವಣೆ ಆಯೋಗ ಚುನಾವಣೆ ಘೋಷಿಸಿದೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ

ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆಯ ಅಧಿಸೂಚನೆ‌ ಅಕ್ಟೋಬರ್ 1ರಂದು ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ತಿಳಿಸಿದೆ.

 ಪದವೀಧರ ಕ್ಷೇತ್ರದ ಸದಸ್ಯರಾದ ಆರ್.ಚೌಡರೆಡ್ಡಿ, ಎಸ್.ವಿ. ಸಂಕನೂರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಶರಣಪ್ಪ ಮಟ್ಟೂರ ಹಾಗೂ ಪುಟ್ಟಣ್ಣ ಸದಸ್ಯರಾಗಿದ್ದರು. ಆದ್ರೆ, ಇದೀಗ ಇವರ ಅವಧಿ ದಿನಾಂಕ 30-06-2020ರಂದು ಕೊನೆಗೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣೆ ಘೋಷಣೆ ಮಾಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!