
ಬೆಂಗಳೂರು, (ಡಿ, 25): ರಾಜ್ಯದಲ್ಲಿ 2ನೇ ಹಂತದ ಗ್ರಾಮ ಪಂಚಾಯತ್ ಚುನಾವಣಾ ಕಾವು ತೀವ್ರಗೊಂಡಿದ್ದು, ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.
ಇದೇ 27ರ ಭಾನುವಾರ ಮತದಾನ ನಡೆಯಲಿದ್ದು, ಮತದಾನ ಅಂತ್ಯಕ್ಕೂ 48 ಗಂಟೆಗಳ ಮುನ್ನ ಅಂದರೆ ಇಂದು (ಶುಕ್ರವಾರ) ಸಂಜೆ ಪ್ರಚಾರ ಕೊನೆಗೊಂಡಿದೆ.
ಶುಕ್ರವಾರ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾಗಿರುವ ಕಾರಣ ಅಭ್ಯರ್ಥಿಗಳು ಬಿರುಸಿನ ಪ್ರಚಾರದಲ್ಲಿ ತೊಡಗಿ ಮತದಾರರನ್ನು ಸೆಳೆಯಲು ನಾನಾ ರೀತಿಯಲ್ಲಿ ಕಸರತ್ತು ನಡೆಸಿದರು.
ಕೊಟ್ಟಿದ್ದ ಒಂದು ಚಿಹ್ನೆ, ಬ್ಯಾಲೆಟ್ ಪೇಪರ್ನಲ್ಲಿ ಬೇರೊಂದು ಚಿಹ್ನೆ: ಅಭ್ಯರ್ಥಿ ಶಾಕ್..!
ರಾಜ್ಯದ 109 ತಾಲ್ಲೂಕುಗಳ 2709 ಗ್ರಾಮಪಂಚಾಯತ್ ಗಳಿಗೆ ಮತದಾನ ನಡೆಯಲಿದೆ. ಒಟ್ಟು 43,291 ಸ್ಥಾನಗಳ ಪೈಕಿ 39,378 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಚುನಾವಣಾ ಕಣದಲ್ಲಿ 1,05,431 ಅಭ್ಯರ್ಥಿಗಳಿದ್ದಾರೆ.
ಇನ್ನು 3697 ಅಭ್ಯರ್ಥಿಗಳು ಇದಾಗಲೇ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 27ರ ಭಾನುವಾರ ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.