'ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದಿಂದ ದೇಶದ ಅತಿದೊಡ್ಡ ಭೂ ಕಬಳಿಕೆ ಹಗರಣಕ್ಕೆ ಮುನ್ನಡಿ'

Published : Dec 08, 2020, 04:14 PM IST
'ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದಿಂದ ದೇಶದ ಅತಿದೊಡ್ಡ ಭೂ ಕಬಳಿಕೆ ಹಗರಣಕ್ಕೆ ಮುನ್ನಡಿ'

ಸಾರಾಂಶ

ಕೇಂದ್ರ ನರೇಂದ್ರ ಮೋದಿ ಹಾಗೂ ರಾಜ್ಯದ ಯಡಿಯೂರಪ್ಪ ಸರ್ಕಾರದ ವಿರುದ್ಧ ಕರ್ನಾಟಕ ಅಮ್ ಆದ್ಮಿ ಪಕ್ಷ ವಾಗ್ದಾಳಿ ನಡೆಸಿದೆ. ಅಲ್ಲದೇ ಗಂಭೀರ ಆರೋಪವನ್ನು ಸಹ ಮಾಡಿದೆ.

ಬೆಂಗಳೂರು (ಡಿ.08): ರೈತರ ಬದುಕನ್ನೇ ಕಿತ್ತುಕೊಳ್ಳುವ ಮೂರು ಮಸೂದೆಗಳ ತಿದ್ದುಪಡಿ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ದೇಶದ ಅತಿ ದೊಡ್ಡ ಭೂ ಕಬಳಿಕೆ ಹಗರಣಕ್ಕೆ ಮುನ್ನುಡಿ ಬರೆದಿದೆ ಎಂದು ಅಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದರು.

ಮೌರ್ಯ ವೃತ್ತದಲ್ಲಿ ನಡೆದ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿ, ರೈತರ ಜಮೀನು ಗುತ್ತಿಗೆ ಪಡೆದುಕೊಳ್ಳುವ ಕಂಪೆನಿಗಳು ನಿಧಾನಕ್ಕೆ ರೈತರ ಜಮೀನನ್ನೇ ಕಸಿಯುತ್ತವೆ. ಇದು ಇಡೀ ದೇಶದ ಭೂಮಿಯನ್ನು ಉಳ್ಳವರ ಕೈಗೆ ಕೊಡುವ ಹುನ್ನಾರ ಎಂದರು. ಈ ದೇಶದ ಬೆನ್ನೆಲುಬಾದ ರೈತನಿಗೆ ಅವಮಾನ ಮಾಡಿರುವ ಬಿಜೆಪಿ ಸರ್ಕಾರ ಈ ಕೂಡಲೇ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಅಂಬಾನಿ, ಅದಾನಿಗಳ ಸೇವಕರಂತೆ ಕೆಲಸ ಮಾಡುತ್ತಿರುವ ನೀವು ಈ ದೇಶದ ಮಕ್ಕಳೆ, ನೀವು ದೇಶ ಭಕ್ತರೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಪ್ಪು ಪಟ್ಟಿ ಹಾಕಿದರೇನು ಬಿಳಿ ಪಟ್ಟಿ ಹಾಕಿ ಪ್ರತಿಭಟಿಸಿದರೇನು? ಬಿಎಸ್‌ವೈ ವ್ಯಂಗ್ಯ 

ನಿಜವಾದ ದೇಶಭಕ್ತರು ನಮ್ಮ ಹಕ್ಕುಗಳನ್ನು ಕೇಳುತ್ತಿದ್ದೇವೆ, ನೀವು ನಮ್ಮ ಸೇವಕರು ನಮ್ಮ ಹಕ್ಕುಗಳನ್ನು ಕಿತ್ತುಕೊಳ್ಳುವ ಅಧಿಕಾರವಿಲ್ಲ ಎಂದು ಹೇಳಿದರು. ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ಭೇಟಿ ಮಾಡಲು ಹೊರಟ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿ ಇರಿಸಿದ ಕೇಂದ್ರ ಸರ್ಕಾರ ಧಮನಕಾರಿ ನೀತಿಯನ್ನು ಖಂಡಿಸಿದರು. ನರೇಂದ್ರ ಮೋದಿ ಅವರ ನೇತೃತ್ವದ ರಾಜ್ಯ ಸರ್ಕಾರ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ. ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರವೂ ಸಹ ಕೇಂದ್ರದ ತಾಳಕ್ಕೆ ಕುಣಿಯುತ್ತಿದ್ದು, ರೈತರ ಪರವಾಗಿ ನಿಂತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸಹ ಸಂಚಾಲಕ ವಿಜಯ್ ಶರ್ಮ, ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಲಕ್ಷ್ಮಿಕಾಂತ್ ರಾವ್, ಫಣಿರಾಜ್ ಎಸ್.ವಿ, ಮುಖ್ಯ ವಕ್ತಾರ ಶರತ್ ಖಾದ್ರಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!