Karnataka election 2023: ಸಾಹುಕಾರನ ಮರಾಠಾ ಅಸ್ತ್ರಕ್ಕೆ ಹೆಬ್ಬಾಳ್ಕರ್ ಪಂಚಮಸಾಲಿ ಪ್ರತ್ಯಾಸ್ತ್ರ!

Published : Apr 08, 2023, 09:22 AM ISTUpdated : Apr 08, 2023, 09:23 AM IST
Karnataka election 2023: ಸಾಹುಕಾರನ ಮರಾಠಾ ಅಸ್ತ್ರಕ್ಕೆ ಹೆಬ್ಬಾಳ್ಕರ್ ಪಂಚಮಸಾಲಿ ಪ್ರತ್ಯಾಸ್ತ್ರ!

ಸಾರಾಂಶ

ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾ ರಾಜಕಾರಣದಲ್ಲಿ ಪ್ರಭಾವ ಹೊಂದಿದ ನಾಯಕರು. ಈ ಇಬ್ಬರು ಈ ಹಿಂದೆ ಒಂದೇ ಪಕ್ಷದಲ್ಲಿದ್ದರು, ಆಪ್ತರೂ ಆಗಿದ್ದರು. ಕಳೆದ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿಗೆ ಶ್ರಮಿಸಿದ್ದ ರಮೇಶ ಇಂದು ಅದೇ ಹೆಬ್ಬಾಳ್ಕರ್ ಸೋಲಿಸುವ ಪಣ ತೊಟ್ಟಿದ್ದಾರೆ. 

ಅನಿಲ್ ಕಾಜಗಾರ, ಏಷ್ಯಾನೆಟ್ ಸುವರ್ಣ ನ್ಯೂಸ್

ಬೆಳಗಾವಿ (ಏ.8) : ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜಿಲ್ಲಾ ರಾಜಕಾರಣದಲ್ಲಿ ಪ್ರಭಾವ ಹೊಂದಿದ ನಾಯಕರು. ಈ ಇಬ್ಬರು ಈ ಹಿಂದೆ ಒಂದೇ ಪಕ್ಷದಲ್ಲಿದ್ದರು, ಆಪ್ತರೂ ಆಗಿದ್ದರು. ಕಳೆದ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿಗೆ ಶ್ರಮಿಸಿದ್ದ ರಮೇಶ ಇಂದು ಅದೇ ಹೆಬ್ಬಾಳ್ಕರ್ ಸೋಲಿಸುವ ಪಣ ತೊಟ್ಟಿದ್ದಾರೆ. 

ಲಕ್ಷ್ಮಿ(Lakshmi hebbalkar MLA) ಮಣಿಸಲು ಮರಾಠಾ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ರಮೇಶ(Ramesh jarkiholi)ಗೆ ಇದೀಗ ಹೆಬ್ಬಾಳ್ಕರ್ ಪಂಚಮಸಾಲಿ(Panchamasali community) ಪ್ರತ್ಯಾಸ್ತ್ರ ಪ್ರಯೋಗಿಸಿ ಶಾಕ್ ಕೊಟ್ಟಿದ್ದಾರೆ. ರಮೇಶ ಜಾರಕಿಹೊಳಿ ಪ್ರಭಾವಿ ನಾಯಕರಾಗಿದ್ರೆ ಇತ್ತ ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ(Dr Mahantesh kadadi) ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿದವರು. ಹೀಗಾಗಿ ಈ ಸಲ ಗೋಕಾಕ ಕ್ಷೇತ್ರ ಅಕ್ಷರಶಃ ರಣಾಂಗಣವಾಗುವ ಮುನ್ಸೂಚನೆಗಳು ಸಿಗುತ್ತಿವೆ.

ಬೆಳಗಾವಿ ಡಿಫೆರೆಂಟ್ ಪಾಲಿಟಿಕ್ಸ್: ಬಿಜೆಪಿ ಸೈಲೆಂಟ್‌ - ಕಾಂಗ್ರೆಸ್‌ ವೈಲೆಂಟ್‌

ರಮೇಶಗೆ ಶಾಕ್ ಕೊಟ್ಟ ಹೆಬ್ಬಾಳ್ಕರ್!

ಈ ಹಿಂದೆ ಜಿಲ್ಲಾ ರಾಜಕಾರಣದಲ್ಲಿ ಆಪ್ತರಾಗಿದ್ದ ರಮೇಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಈಗ ಬದ್ಧವೈರಿಗಳಂತೆ ಕಾದಾಡುತ್ತಿದ್ದಾರೆ. 2016ರಲ್ಲಿ ಸಿದ್ದರಾಮಯ್ಯ(Siddaramaiah) ನೇತೃತ್ವದ ಸರ್ಕಾರದಲ್ಲಿ ರಮೇಶ ಜಾರಕಿಹೊಳಿಗೆ ಸಚಿವ ಸ್ಥಾನ ದೊರಕಿಸಿಕೊಡುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಾತ್ರವೂ ಇತ್ತು. ಅದೇ ರೀತಿ 2018ರ ವಿಧಾನಸಭೆ ಚುನಾವಣೆ(Assembly election)ಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿಗೆ ರಮೇಶ ಶ್ರಮವೂ ಇತ್ತು. ಅಷ್ಟರ ಮಟ್ಟಿಗೆ ಉಭಯ ನಾಯಕರು ಆಪ್ತರಾಗಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಇಂದು ರಮೇಶ ಬಿಜೆಪಿಯಲ್ಲಿ ಲಕ್ಷ್ಮಿ ಕಾಂಗ್ರೆಸ್‍ನಲ್ಲಿದ್ದಾರೆ. ಈ ಚುನಾವಣೆಯಲ್ಲಿ ಲಕ್ಷ್ಮಿ ಮಣಿಸುವ ಶಪಥ ಮಾಡಿರುವ ರಮೇಶ ಮರಾಠ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. 

ಬೆಳಗಾವಿ ಗ್ರಾಮೀಣದಲ್ಲಿ ಮರಾಠಾ ಮತಗಳೇ ನಿರ್ಣಾಯಕ. ಈ ಕಾರಣಕ್ಕೆ ತಮ್ಮ ಆಪ್ತ ಹಾಗೂ ಮರಾಠಾ ಸಮುದಾಯ(Maratha community)ದ ನಾಗೇಶ ಮನ್ನೋಳ್ಕರ್‍(Nagesh mannolkar) ಟಿಕೆಟ್ ನೀಡುವಂತೆ ರಮೇಶ ಹೈಕಮಾಂಡ್ ಮಟ್ಟದಲ್ಲಿ ಕಸರತ್ತು ನಡಿಸಿದ್ದಾರೆ. ರಮೇಶ ಮಾಡುತ್ತಿರುವ ವಾಗ್ದಾಳಿ, ಆರೋಪಕ್ಕೆಲ್ಲ ಮೌನವೇ ಉತ್ತರ ಎಂಬಂತೆ ಲಕ್ಷ್ಮಿ ತಮ್ಮ ಪಾಲಿಗೆ ಪ್ರಚಾರದಲ್ಲಿ ತೊಡಗಿದ್ದರು. ಪದೆ ಪದೇ ಗ್ರಾಮೀಣ ಕ್ಷೇತ್ರಕ್ಕೆ ಎಂಟ್ರಿ ಕೊಡ್ತಿದ್ದ ರಮೇಶಗೆ ಇದೀಗ ಹೆಬ್ಬಾಳ್ಕರ್ ಸೈಲೆಂಟ್ ಆಗಿಯೇ ಶಾಕ್ ಕೊಟ್ಟಿದ್ದಾರೆ. ರಮೇಶ ವಿರುದ್ಧ ಲಿಂಗಾಯತ ಅಭ್ಯರ್ಥಿ ಕಣಕ್ಕಿಳಿಸುವಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಯಶಸ್ವಿ ಆಗಿದ್ದಾರೆ.    

ಮರಾಠಾ ಅಸ್ತ್ರಕ್ಕೆ ಪಂಚಮಸಾಲಿ ಪ್ರತ್ಯಾಸ್ತ್ರ

ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿನಿಧಿಸುವ ಬೆಳಗಾವಿ ಗ್ರಾಮೀಣ(Belgum rural constituency)ದಲ್ಲಿ ಹೇಗೆ ಮರಾಠಾ ಸಮುದಾಯ ನಿರ್ಣಾಯಕವೋ? ಅದೇ ರೀತಿ ರಮೇಶ ಜಾರಕಿಹೊಳಿ ಪ್ರತಿನಿಧಿಸುವ ಗೋಕಾಕ ಕ್ಷೇತ್ರದಲ್ಲಿ ಲಿಂಗಾಯತ ಅದರಲ್ಲೂ ಪಂಚಮಸಾಲಿ ಲಿಂಗಾಯತ ಮತಗಳೇ ನಿರ್ಣಾಯಕವಾಗಿವೆ. ಬೆಳಗಾವಿ ಗ್ರಾಮೀಣದಲ್ಲಿ 95 ಸಾವಿರ ಮರಾಠಾ ಸಮುದಾಯದ ಮತಗಳಿದ್ದರೆ ಗೋಕಾಕದಲ್ಲಿ 90 ಸಾವಿರ ಲಿಂಗಾಯತ ಅದರಲ್ಲೂ 75 ಸಾವಿರ ಪಂಚಮಸಾಲಿ ಮತಗಳಿವೆ. ತಮ್ಮ ವಿರುದ್ಧ ಮರಾಠ ಅಸ್ತ್ರ ಹೆಣೆಯುತ್ತಿದ್ದ ರಮೇಶಗೆ ಭರ್ಜರಿ ತಿರುಗೇಟು ನೀಡಿರುವ ಹೆಬ್ಬಾಳ್ಕರ್ ಇದೀಗ ಪಂಚಮಸಾಲಿ ಪ್ರತ್ಯಾಸ್ತ್ರ ಪ್ರಯೋಗಿಸಿದ್ದಾರೆ. ಗೋಕಾಕ ಕಾಂಗ್ರೆಸ್ ಅಭ್ಯರ್ಥಿ ಡಾ. ಮಹಾಂತೇಶ ಕಡಾಡಿ ಗೋಕಾಕಿನ ಖ್ಯಾತ ವೈದ್ಯರಾಗಿದ್ದು, 13 ವರ್ಷಗಳಿಂದ ಗೋಕಾಕಿನಲ್ಲೇ ಪ್ರಾಕ್ಟಿಸ್ ಮಾಡ್ತಿದ್ದಾರೆ. ನರ್ಸಿಂಗ್ ಕಾಲೇಜನ್ನೂ ನಡೆಸುತ್ತಿರುವ ಡಾ. ಮಹಾಂತೇಶ ಈ ಕ್ಷೇತ್ರಕ್ಕೆ ಅಚ್ಛರಿ ಅಭ್ಯರ್ಥಿ ಆಗಿದ್ದರೂ ಎಲ್ಲರಿಗೂ ಚಿರಪರಿಚಿತರೇ ಆಗಿದ್ದಾರೆ. ಈ ಕಾರಣಕ್ಕೆ ಕಾಂಗ್ರೆಸ್ ಹೈಕಮಾಂಡ್ ಅಲೆದು ತೂಗಿ ರಮೇಶ ವಿರುದ್ಧ ಡಾ. ಮಹಾಂತೇಶ ಅವರನ್ನು ಕಣಕ್ಕಿಳಿಸಿದೆ. ಅದರಲ್ಲೂ ದೆಹಲಿಯಲ್ಲಿ ಬೀಡು ಬಿಟ್ಟು ಹೈಕಮಾಂಡ್ ಎದುರು ಹಠ ಸಾಧಿಸಿ ಡಾ. ಮಹಾಂತೇಶ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆ ಮೂಲಕ ರಮೇಶಗೆ ಸೈಲೆಂಟ್ ಆಗಿಯೇ ಪಂಚ್ ಕೊಟ್ಟಿದ್ದಾರೆ.

ತಂತ್ರ-ಕುತಂತ್ರ ಮಾಡಲ್ಲ; ಅಭಿವೃದ್ಧಿಯೇ ನನ್ನ ಮಂತ್ರ: ಲಕ್ಷ್ಮೀ ಹೆಬ್ಬಾಳಕರ

ಸತೀಶ ಜಾರಕಿಹೊಳಿಗೂ ಶಾಕ್?

2019ರಲ್ಲಿ ಗೋಕಾಕ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಿದ್ದ ಅಶೋಕ ಪೂಜಾರಿ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ(satish jarkiholi) ಮರಳಿ ಕಾಂಗ್ರೆಸ್‍ಗೆ ಸೆಳೆದಿದ್ದರು. ಈ ಸಲ ಅಶೋಕ ಪೂಜಾರಿಗೆ ಗೋಕಾಕ ಕಾಂಗ್ರೆಸ್ ಟಿಕೆಟ್ ನೀಡುವಂತೆಯೇ ಸತೀಶ ಪಟ್ಟು ಹಿಡಿದಿದ್ದರು. ಅಲ್ಲದೇ ಈ ಸಲವೂ ತಮಗೆ ಟಿಕೆಟ್ ಸಿಗುತ್ತೆ ಎಂದೂ ಅಶೋಕ ಪೂಜಾರಿ ವಿಶ್ವಾಸದಲ್ಲಿದ್ದರು. ಜಾರಕಿಹೊಳಿ ಕುಟುಂಬದ ಜೊತೆಗೆ ಅಶೋಕ ಪೂಜಾರಿ ಚುನಾವಣೆಯಲ್ಲಿ ಮಿಲಾಪಿ ಮಾಡಿಕೊಳ್ಳುತ್ತಾರೆ ಎಂಬ ಅಪಸ್ವರಗಳು ಪೂಜಾರಿ ವಿರುದ್ಧ ಕೇಳಿ ಬಂದಿದ್ದವು. ಈ ಕಾರಣಕ್ಕೆ ಧರ್ಮಸ್ಥಳಕ್ಕೆ ಕೆಲ ದಿನಗಳ ಹಿಂದೆ ತೆರಳಿದ್ದ ಅಶೋಕ ಪೂಜಾರಿ, ಆಣೆ ಪ್ರಮಾಣ ಮಾಡಿದ್ದರು. ಆ ಮೂಲಕ ಗೋಕಾಕ ಕ್ಷೇತ್ರದ ಲಿಂಗಾಯತರ ವಿಶ್ವಾಸ ಸಾಧಿಸಲು ಪ್ರಯತ್ನಿಸಿದ್ದರು. ಅಶೋಕ ಪೂಜಾರಿಗೆ ಕಾಂಗ್ರೆಸ್ ಟಿಕೆಟ್ ಸಿಗದಿರುವುದು ಅವರಿಗಷ್ಟೇ ಅಲ್ಲ, ಖುದ್ದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿಗೂ ಶಾಕ್ ಆಗಿದೆ ಎನ್ನಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌
ದಲಿತ ಸಮುದಾಯಕ್ಕೆ ಸಿಎಂ ಹುದ್ದೆ ಕೊಡಿ ಎಂದು ಸಮಯ ಬಂದಾಗ ಕೇಳುವೆ: ಸಚಿವ ಮಹದೇವಪ್ಪ