Karnataka Election Exit poll ಸಮೀಕ್ಷೆ ಬಳಿಕ ಹಿರಿ ಹಿರಿ ಹಿಗ್ಗಿದ ಕಾಂಗ್ರೆಸ್, ಸರ್ಕಾರ ರಚಿಸುವ ವಿಶ್ವಾಸದಲ್ಲಿ ಬಿಜೆಪಿ!

Published : May 10, 2023, 10:29 PM ISTUpdated : May 10, 2023, 10:33 PM IST
Karnataka Election Exit poll ಸಮೀಕ್ಷೆ ಬಳಿಕ ಹಿರಿ ಹಿರಿ ಹಿಗ್ಗಿದ ಕಾಂಗ್ರೆಸ್, ಸರ್ಕಾರ ರಚಿಸುವ ವಿಶ್ವಾಸದಲ್ಲಿ ಬಿಜೆಪಿ!

ಸಾರಾಂಶ

ಚುನಾವಣೋತ್ತರ ಸಮೀಕ್ಷೆಗಳು ಹೊರಬಿದ್ದ ಬೆನ್ನಲ್ಲೇ ರಾಜಕೀಯ ಪಕ್ಷಗಳ ಚಟುವಟಿಕೆ ಗರಿಗೆದರಿದೆ. ಹಲವು ಸಮೀಕ್ಷೆಗಳು ಅತಂತ್ರ ವಿಧಾನಸಭೆ ಎಂದಿದೆ. ಆದರೆ ಆಕ್ಸಿಸ್ ಮೈ ಇಂಡಿಯಾ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದೆ.

ಬೆಂಗಳೂರು(ಮೇ.10): ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಯಾರಿಗೆ ಗೆಲುವು? ಈ ಕುತೂಹಲ ಇದೀಗ ಹೆಚ್ಚಾಗಿದೆ. ಚುನಾವಣೋತ್ತರ ಸಮೀಕ್ಷೆ ಬಹಿರಂಗೊಂಡ ಬಳಿಕ ಕಾಂಗ್ರೆಸ್ ಹಿರಿ ಹಿಗ್ಗಿದ್ದರೆ, ಬಿಜೆಪಿ ಅಧಿಕಾರ ರಚಿಸುವ ವಿಶ್ವಾಸದಲ್ಲಿದೆ. ಆಕ್ಸಿಸ್ ಮೈ ಇಂಡಿಯಾ - ಟಿವಿಟಿಎನ್ ಮತಗಟ್ಟೆ ಎಕ್ಸಿಟ್ ಪೋಲ್‌ನಲ್ಲಿ ಕಾಂಗ್ರೆಸ್ 122 ರಿಂದ 140 ಸ್ಥಾನ ಗೆಲ್ಲಲಿದೆ ಎಂದಿದೆ. ಇಂದು ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಮತದಾನವಾಗಿದೆ. ಇನ್ನು ಶೇಕಡ 65.69 ರಷ್ಟು ಮತದಾನವಾಗಿದೆ. ಭಾರತೀಯ ಜನತಾ ಪಕ್ಷ 62-80 ಸ್ಥಾನಗಳನ್ನು ಮತ್ತು ಜೆಡಿಎಸ್ 20-25 ಸ್ಥಾನಗಳನ್ನು ಪಡೆದುಕೊಳ್ಳಲಿದೆ ಎಂದು  ಆಕ್ಸಿಸ್ ಮೈ ಇಂಡಿಯಾ - ಟಿವಿಟಿಎನ್ ಮತಗಟ್ಟೆ ನಿರ್ಗಮನ ಸಮೀಕ್ಷೆ ಭವಿಷ್ಯ ನುಡಿದಿದೆ. 

ಬಿಜೆಪಿ: 62 ರಿಂದ 80 ಸ್ಥಾನ
ಕಾಂಗ್ರೆಸ್:122 ರಿಂದ 140 ಸ್ಥಾನ
ಜೆಡಿಎಸ್:20 ರಿಂದ 25 ಸ್ಥಾನ
ಇತರರು: 0-3 ಸ್ಥಾನ 

ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಅತಂತ್ರ ವಿಧಾನಸಭೆ ಎಂದಿದೆ. ಆದರೆ ಬಿಜೆಪಿ ನಾಯಕರು ಈ ಬಾರಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಆಡಳಿತದ ಸರ್ಕಾರ ರಚನೆಯಾಗಲಿದೆ ಅನ್ನೋ ವಿಶ್ವಾಸದಲ್ಲಿದ್ದಾರೆ.

Karnataka Elections 2023 LIVE: ಎಕ್ಸಿಟ್ ಪೋಲ್‌ನಲ್ಲಿ ಸಿಕ್ತು ಅತಂತ್ರ ಸರ್ಕಾರದ ಸೂಚನೆ...

ವೋಟ್ ಶೇರ್: ಚುನಾವಣೆ ನಡೆದ ಕರ್ನಾಟಕ ರಾಜ್ಯದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ಲಾಭವಾಗಲಿದೆ ಎಂದು ಅಂದಾಜಿಸಲಾಗಿದ್ದು, ಪಕ್ಷ  ಶೇಕಡ 42.5 ರಷ್ಟು ಮತ ಪಾಲನ್ನು ಪಡೆಯಲಿದೆ. ಭಾರತೀಯ ಜನತಾ ಪಕ್ಷ ಶೇಕಡ 34.5 ಮತ್ತು ಜನತಾ ದಳ (ಜಾತ್ಯತೀತ) ಶೇಕಡ 16.5 ಮತಗಳನ್ನು ಪಡೆಯುವ ನಿರೀಕ್ಷೆ ಇದೆ. ಇತರರು (ಬಿಎಸ್ಪಿ, ಎಎಪಿ, ಕೆಆರ್‍ಎಸ್, ಎಸ್‍ಡಿಪಿಐ, ಎಐಎಂಐಎಂ, ಸಿಪಿಐ, ಸಿಪಿಎಂ, ಐನ್‍ಡಿ & ಇತರರು) ಶೇಕಡ 6.5 ಮತ ಪಾಲನ್ನು ಪಡೆಯುವ ನಿರೀಕ್ಷೆಯಿದೆ.

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಪ್ರಸ್ತುತ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಭಾವನೆ ದಟ್ಟವಾಗಿ ಇರುವುದನ್ನು ನಾವು ಗಮನಿಸಿದ್ದೇವೆ. ಮುಸ್ಲಿಂ ಮತ್ತು ಕುರಬ ಮತಗಳ ಕ್ರೋಢೀಕರಣದ ಜೊತೆಗೆ ಬಿಜೆಪಿ ಮತ್ತು ಜೆಡಿಎಸ್‍ನಿಂದ ಕಾಂಗ್ರೆಸ್‍ಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಮತಗಳು ಗಣನೀಯವಾಗಿ ವರ್ಗಾವಣೆಯಾಗಿರುವುದರಿಂದ ಕಾಂಗ್ರೆಸ್ ಪಕ್ಷ ಸಂಭಾವ್ಯ ಗೆಲುವಿಗೆ ಸಿದ್ಧವಾಗಿದೆ. ಈ ಪಲ್ಲಟಕ್ಕೆ ಆಡಳಿತ ವಿರೋಧಿ ಅಂಶ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆರ್ಥಿಕವಾಗಿ ಹಿಂದುಳಿದವರು ಮತ್ತು ಈ ನಿರ್ದಿಷ್ಟ ಜಾತಿ ಗುಂಪುಗಳ ನಿರಂತರ ಜನಪ್ರಿಯತೆ  ಕಾರಣವಾಗಲಿದೆ ಎಂದು ಸಮೀಕ್ಷಾ ಸಂಸ್ಥೆ ಹೇಳಿದೆ.

Karnataka election Exit Poll ಮುಂಬೈ ಕರ್ನಾಟಕದಲ್ಲಿ ಬಿಜೆಪಿ, ಹಳೇ ಮೈಸೂರಿನಲ್ಲಿ ಕಾಂಗ್ರೆಸ್ ಪ್ರಾಬಲ್ಯ!

ಈ ಚುನಾವಣೋತ್ತರ ಸಮೀಕ್ಷೆಯನ್ನು 37,058 ಮಂದಿಯನ್ನು ಸಂಪರ್ಕಿಸಿ, ಕ್ರೋಢೀಕರಿಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ . ಈ ಮಾದರಿ ಪೈಕಿ ಶೇಕಡ 61 ಗ್ರಾಮೀಣ ಮತದಾರರನ್ನು ಪ್ರತಿನಿಧಿಸುತ್ತದೆ. ಶೇಕಡ 39 ನಗರ ಮತದಾರರನ್ನು ಪ್ರತಿನಿಧಿಸುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ವಿಧಾನಸಭೆಯಲ್ಲಿ ಸಿಎಂ ಕುರ್ಚಿಯದ್ದೇ ಗುದ್ದಾಟ: ಬೈರತಿ 'ಕಿಂಗ್ ಅಲೈವ್' ಅಂದಿದ್ದು ಯಾಕೆ? ಆರ್ ಅಶೋಕ್, ಬೈರತಿ ವಾಕ್ಸಮರ!
ವಿಧಾನಸಭೆಯಲ್ಲಿ 'ಉತ್ತರ ಕರ್ನಾಟಕ' ವಿವಾದ: ಶಿವಲಿಂಗೇಗೌಡರ ಮಾತುಗಳಿಗೆ ಗರಂ ಆದ ಯತ್ನಾಳ್, ಗ್ಯಾರಂಟಿ, ಗುಂಡಿ ವಿಚಾರಕ್ಕೆ ಜಟಾಪಟಿ!