ಬೀದರ್: ವಿಧಾನಸಭಾ ಚುನಾವಣೆ ಹಿನ್ನೆಲೆ: ಮೂವರ ವಿರುದ್ಧ ಗೂಂಡಾ ಕಾಯ್ದೆ, 11 ಜನರ ಗಡಿಪಾರಿಗೆ ಶಿಫಾರಸ್ಸು

Published : Mar 31, 2023, 11:49 AM IST
ಬೀದರ್:  ವಿಧಾನಸಭಾ ಚುನಾವಣೆ ಹಿನ್ನೆಲೆ: ಮೂವರ ವಿರುದ್ಧ ಗೂಂಡಾ ಕಾಯ್ದೆ, 11 ಜನರ ಗಡಿಪಾರಿಗೆ ಶಿಫಾರಸ್ಸು

ಸಾರಾಂಶ

ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸ್‌ ಇಲಾಖೆ ಸಜ್ಜಾಗಿದೆ. ಚುನಾವಣೆ ಸಂದರ್ಭ ಗದ್ದಲ, ಗೊಂದಲ ಸೃಷ್ಟಿಸುವ ಹಿನ್ನೆಲೆಯುಳ್ಳ 492 ಜನರ ವಿರುದ್ಧ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಅಲ್ಲದೆ ಇನ್ನೂ 617 ಜನರ ಮೇಲೆ ನಿಗಾವಹಿಸಿ ಈ ಪೈಕಿ 561 ಜನರಿಂದ ಶಾಂತಿಯುತ ವರ್ತನೆಯ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್‌ಎಲ್‌ ತಿಳಿಸಿದ್ದಾರೆ.

ಬೀದರ್‌ (ಮಾ.31) : ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾಗುತ್ತಿರುವ 1504 ಮತದಾನ ಕೇಂದ್ರಗಳ ಪೈಕಿ 348 ಆಪತ್ತು ಜನಕ ಹಾಗೂ ಮತದಾನಕ್ಕೆ ಆಗಮಿಸಲು ಮತದಾರ ಹೆದರಿಕೆ ಪಡುವಂತಹ 24 ಮತದಾನ ಕೇಂದ್ರಗಳನ್ನು ದುರ್ಬಲ ಎಂದು ಗುರುತಿಸಲಾಗಿದ್ದು ಸೂಕ್ತ ಹೆಚ್ಚುವರಿ ಪೊಲೀಸ್‌ ಬಂದೋಬಸ್‌್ತ ಮೂಲಕ ಮತದಾರರು ನಿರ್ಭಯವಾಗಿ ಮತದಾನ ಮಾಡಲು ಅವಕಾಶ ಕಲ್ಪಿಸುತ್ತೇವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್‌ಎಲ್‌(District Superintendent of Police Chennabasavanna SL) ತಿಳಿಸಿದರು.

ಅವರು ಚುನಾವಣೆ(Assembly election) ಘೋಷಣೆಯಾದ ಪ್ರಯುಕ್ತ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಪೊಲೀಸ್‌ ಇಲಾಖೆ ಸಜ್ಜಾಗಿದೆ. ಚುನಾವಣೆ ಸಂದರ್ಭ ಗದ್ದಲ, ಗೊಂದಲ ಸೃಷ್ಟಿಸುವ ಹಿನ್ನೆಲೆಯುಳ್ಳ 492 ಜನರ ವಿರುದ್ಧ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಅಲ್ಲದೆ ಇನ್ನೂ 617 ಜನರ ಮೇಲೆ ನಿಗಾವಹಿಸಿ ಈ ಪೈಕಿ 561 ಜನರಿಂದ ಶಾಂತಿಯುತ ವರ್ತನೆಯ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಬೀದರ್: ಪೊಲೀಸರ ಮೇಲೆ ಹಲ್ಲೆಗೆ ಯತ್ನ, ದರೋಡೆಕೋರರ ಮೇಲೆ ಫೈರಿಂಗ್‌

ಜಿಲ್ಲೆಯಲ್ಲಿ ಮೂರು ಜನರ ವಿರುದ್ಧ ಗೂಂಡಾ ಕಾಯ್ದೆ ಜಾರಿಗೆ ಜಿಲ್ಲಾಡಳಿತಕ್ಕೆ ಶಿಫಾರಸ್ಸು ಮಾಡಲಾಗಿತ್ತು. ಈ ಪೈಕಿ ಇಬ್ಬರ ವಿರುದ್ಧ ಕ್ರಮವಾಗಿದ್ದು ಇನ್ನೊಬ್ಬರ ಕಡತ ಜಿಲ್ಲಾಡಳಿತದ ಹಂತದಲ್ಲಿದೆ. ಇನ್ನು 11 ಜನರನ್ನು ಗಡಿಪಾರು ಮಾಡುವಂತೆ ಜಿಲ್ಲಾಡಳಿತಕ್ಕೆ ಸಲ್ಲಿಸಿದ ವರದಿಯಂತೆ ಇಬ್ಬರ ಗಡಿಪಾರಿಗೆ ಆದೇಶವಾಗಿದ್ದು ಇನ್ನೂ 9 ಜನರ ವಿರುದ್ಧ ಆದೇಶವನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಸ್ಥಾಪಿಸಲಾಗಿರುವ 38 ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ಸೌಲಭ್ಯಗಳನ್ನ ಕಲ್ಪಿಸಲಾಗಿದ್ದು ಉತ್ತಮವಾಗಿ ಕಾರ್ಯನಿರ್ವಹಿಸುವ ಚೆಕ್‌ಪೋಸ್ಟ್‌ಗಳಿಗೆ ಬಹುಮಾನ ನೀಡಲಾಗುತ್ತದೆ. ಅಲ್ಲದೆ ಚೆಕ್‌ಪೋಸ್ಟ್‌ಗಳ ಕಾರ್ಯನಿರ್ವಹಣೆ ಗಮನಿಸಲು ಪ್ರತಿಯೊಂದು ಕಡೆ ತಲಾ 2 ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಲೈವ್‌ ಸ್ಟ್ರೀಮಿಂಗ್‌ ವ್ಯವಸ್ಥೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ಮಾತನಾಡಿ, ಜಿಲ್ಲೆಯಾದ್ಯಂತ 2 ಕಡೆಗಳಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ 10,87,210ರು. ನಗದು, 7,68,122ರು. ಮೌಲ್ಯದ 5272.08ಲೀ. ಮದ್ಯ, 70,67,73,200ರು. ಮೌಲ್ಯದ 119,564ಕೆಜಿ ಗಾಂಜಾ ಮತ್ತು 220 ತಂಬಾಕು ಬ್ಯಾಗ್‌ಗಳನ್ನು ಅಲ್ಲದೆ 1,92,750ರು, ಮೌಲ್ಯದ 3411ಸೀರೆಗಳು ಸೇರಿದಂತೆ ಒಟ್ಟು 91,15,814ರು. ಮೌಲ್ಯದ ನಗದು ಹಾಗೂ ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಬೀದರ್: ಬಿಜೆಪಿ ಸದಸ್ಯರ ವಿರುದ್ಧ ಶಾಸಕ ಬಂಡೆಪ್ಪ ಆಕ್ರೋಶ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್