ಬಿಜೆಪಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಕರ್ನಾಟಕದ ಜನತೆಗೆ ಪ್ರಾಮಾಣಿಕ ಕೃತಜ್ಞತೆಗಳು: ಅಮಿತ್ ಶಾ

Published : May 14, 2023, 12:11 AM IST
ಬಿಜೆಪಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಕರ್ನಾಟಕದ ಜನತೆಗೆ ಪ್ರಾಮಾಣಿಕ ಕೃತಜ್ಞತೆಗಳು: ಅಮಿತ್ ಶಾ

ಸಾರಾಂಶ

ಇಷ್ಟು ವರ್ಷಗಳ ಕಾಲ ಬಿಜೆಪಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಕರ್ನಾಟಕದ ಜನತೆಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು ಎಂದು ಬಿಜೆಪಿಯ ಸೋಲೊಪ್ಪಿಕೊಂಡ ಅಮಿತ್‌ ಶಾ ಟ್ವೀಟ್ ಮಾಡಿದ್ದಾರೆ. 

ನವದೆಹಲಿ (ಮೇ 13, 2023): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಬಿಜೆಪಿಗೆ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಕ್ಕೆ ಕರ್ನಾಟಕದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.  ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪಕ್ಷವು ರಾಜ್ಯ ಮತ್ತು ಅದರ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು. 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಚುನಾವಣಾ ಪುನರುಜ್ಜೀವನವನ್ನು ಬಯಸಿದ ಕಾಂಗ್ರೆಸ್‌ ಶನಿವಾರದಂದು ಬಿಜೆಪಿಯನ್ನು ಅದರ ಏಕೈಕ ದಕ್ಷಿಣದ ಕೋಟೆಯಿಂದ ಉರುಳಿಸಿದೆ. 

“ಇಷ್ಟು ವರ್ಷಗಳ ಕಾಲ ಬಿಜೆಪಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ ಕರ್ನಾಟಕದ ಜನತೆಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿಯು ಕರ್ನಾಟಕದ ಜನರ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಶ್ರಮಿಸುವುದನ್ನು ಮುಂದುವರಿಸುತ್ತದೆ ಎಂದು ಬಿಜೆಪಿಯ ಸೋಲೊಪ್ಪಿಕೊಂಡ ಅಮಿತ್‌ ಶಾ ಟ್ವೀಟ್ ಮಾಡಿದ್ದಾರೆ. 

ಇದನ್ನು ಓದಿ: ‘ಮೋದಿ ಹೈ ತೋ ಮುಮ್ಕಿನ್‌ ಹೈ’ಗೆ ನಿರಾಸೆ; ಲೋಕಸಭೆ ಎಲೆಕ್ಷನ್‌ಗೆ ಇದು ದೊಡ್ಡ ಸಂದೇಶ: ಶರದ್‌ ಪವಾರ್

ಇನ್ನೊಂದೆಡೆ, ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಉತ್ತಮ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷದ "ಅದ್ಭುತ ಸಾಧನೆ"ಗಾಗಿ ಉತ್ತರ ಪ್ರದೇಶದ ಬಿಜೆಪಿ ಕಾರ್ಯಕರ್ತರನ್ನು ಕೇಂದ್ರ ಗೃಹ ಸಚಿವರು ಶ್ಲಾಘಿಸಿದ್ದಾರೆ. "ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಯ ಅದ್ಭುತ ಪ್ರದರ್ಶನಕ್ಕಾಗಿ ಎಲ್ಲಾ ಪಕ್ಷದ ಕಾರ್ಯಕರ್ತರು, @Bhupendraupbjp ಜೀ ಮತ್ತು ಇಡೀ ತಂಡಕ್ಕೆ ಅಭಿನಂದನೆಗಳು. “ಇದು @narendramodi ಅವರ ಮಾರ್ಗದರ್ಶನದಲ್ಲಿ @myogiadityathanath ಸರ್ಕಾರದ ಸಾರ್ವಜನಿಕ ಕಲ್ಯಾಣ ಕಾರ್ಯಗಳ ಅನುಮೋದನೆಯ ಮುದ್ರೆಯಾಗಿದೆ. ಬಿಜೆಪಿಯಲ್ಲಿ ನಿರಂತರ ನಂಬಿಕೆ ಇಟ್ಟಿದ್ದಕ್ಕಾಗಿ ಜನರಿಗೆ ಹೃತ್ಪೂರ್ವಕ ಕೃತಜ್ಞತೆಗಳು" ಎಂದು ಅಮಿತ್‌ ಶಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಯುಪಿಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಮೇಯರ್ ಚುನಾವಣೆಯಲ್ಲಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಭಾರಿ ಗೆಲುವಿಗೆ ಸಜ್ಜಾಗಿದೆ. ಬಿಜೆಪಿಯ ಉತ್ತರ ಪ್ರದೇಶ ಘಟಕವು ಭೂಪೇಂದ್ರ ಸಿಂಗ್ ಚೌಧರಿ ಅವರ ನೇತೃತ್ವದಲ್ಲಿದೆ.

ಇದನ್ನೂ ಓದಿ: Karnataka Assembly Election 2023: ಜನರ ಆಶೋತ್ತರಗಳನ್ನು ಕಾಂಗ್ರೆಸ್‌ ಈಡೇರಿಸಲಿಎಂದ ಮೋದಿ

16ನೇ ವಿಧಾನಸಭಾ ಚುನಾವಣೆಯು ಮೇ 10ರಂದು ಒಂದೇ ಹಂತದಲ್ಲಿ ನಡೆದಿತ್ತು. ರಾಜ್ಯದ ಎಲ್ಲೆಡೆ ಸ್ಥಾಪನೆಯಾದ 58,545 ಮತಗಟ್ಟೆಗಳಲ್ಲಿ 2615 ಅಭ್ಯರ್ಥಿಗಳ ಭವಿಷ್ಯವನ್ನು 3.8 ಕೋಟಿ ಮತದಾರರು ಬರೆದಿದ್ದು, ಒಟ್ಟಾರೆ ದಾಖಲೆಯುತ ಶೇ.73.19ರಷ್ಟು ಮತದಾನವಾಗಿತ್ತು. 224 ಅಭ್ಯರ್ಥಿಗಳು ರಾಜ್ಯ ವಿಧಾನಸಭೆಗೆ ಆಯ್ಕೆಯಾಗಲಿದ್ದು, ಸರಕಾರ ರಚಿಸಲು ಪಕ್ಷವೊಂದಕ್ಕೆ 113 ಬಲಾಬಲ ಪ್ರದರ್ಶಿಸಬೇಕು.

ಇದನ್ನೂ ಓದಿ: ಕಾಂಗ್ರೆಸ್‌ ದಿಗ್ವಿಜಯ: ಕಮಲಕ್ಕೆ ನಾಳೆಯ ಪಾಠ, ಟ್ರಬಲ್‌ ಎಂಜಿನ್‌ಗೆ ಸೋಲು ಎಂದ ಮಮತಾ ಬ್ಯಾನರ್ಜಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ಪ್ರೆಗ್ನಂಟ್ ಮಾಡಿ ಗರ್ಭಪಾತ ಮಾಡಿಸಿದ, Sorry ಅಮ್ಮಾ ಸಾಯ್ತಿದ್ದೀನಿ - ಯುವತಿ ಆತ್ಮ*ಹತ್ಯೆ