ಬಿಜೆಪಿ-ಕಾಂಗ್ರೆಸ್ ಹಣದಿಂದ ಚುನಾವಣೆ ನಡೆಸಿವೆ; ಹಣವಿಲ್ಲದೆ 25 ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ: ಎಚ್‌ಡಿಕೆ

Published : May 12, 2023, 02:50 AM ISTUpdated : May 12, 2023, 02:52 AM IST
ಬಿಜೆಪಿ-ಕಾಂಗ್ರೆಸ್ ಹಣದಿಂದ ಚುನಾವಣೆ ನಡೆಸಿವೆ; ಹಣವಿಲ್ಲದೆ 25 ಕಡೆ ನಮ್ಮ ಪಕ್ಷಕ್ಕೆ ಹಿನ್ನಡೆ: ಎಚ್‌ಡಿಕೆ

ಸಾರಾಂಶ

ಉತ್ತರ ಕರ್ನಾಟಕ ಸೇರಿದಂತೆ ಹಲವೆಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಆದರೆ, ಕೊನೇ ಹಂತದಲ್ಲಿ ಅಭ್ಯರ್ಥಿಗಳ ನಿರೀಕ್ಷೆ ಮುಟ್ಟಲಾಗಲಿಲ್ಲ. ಕನಿಷ್ಠ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದಾಗಿ ಗೆಲ್ಲುವ ಕ್ಷೇತ್ರಗಳಲ್ಲಿ ಹಿನ್ನಡೆ ಅನು​ಭ​ವಿ​ಸು​ವಂತಾ​ಗಿದೆ ಎಂದು ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ರಾಮನಗರ (ಮೇ.12) : ಉತ್ತರ ಕರ್ನಾಟಕ ಸೇರಿದಂತೆ ಹಲವೆಡೆ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಆದರೆ, ಕೊನೇ ಹಂತದಲ್ಲಿ ಅಭ್ಯರ್ಥಿಗಳ ನಿರೀಕ್ಷೆ ಮುಟ್ಟಲಾಗಲಿಲ್ಲ. ಕನಿಷ್ಠ 25ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದಾಗಿ ಗೆಲ್ಲುವ ಕ್ಷೇತ್ರಗಳಲ್ಲಿ ಹಿನ್ನಡೆ ಅನು​ಭ​ವಿ​ಸು​ವಂತಾ​ಗಿದೆ ಎಂದು ಜೆಡಿಎಸ್‌ ನಾಯಕ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ (HD Kumaraswamy)ಹೇಳಿದರು.

ವಿಧಾ​ನ​ಸಭಾ ಚುನಾ​ವ​ಣೆ​(Karnataka assembly election)ಯಲ್ಲಿ ತಮ್ಮ ಪಕ್ಷದಿಂದ ಸ್ಪರ್ಧಿಸಿದ್ದ ಹಲವು ಅಭ್ಯರ್ಥಿಗಳಿಗೆ ಆರ್ಥಿಕ ಸಂಪನ್ಮೂಲದ ಸಹಕಾರ ಒದಗಿಸಲು ಸಾಧ್ಯವಾಗಲಿಲ್ಲ ಎಂಬ ನೋವು ಕಾಡು​ತ್ತಿದೆ. ಈ ವಿಚಾರದಲ್ಲಿ ತಾವು ವಿಫಲರಾಗಿರುವುದು ನೋವಾಗಿದೆ. ಹಣದ ಕೊರತೆ ಇರುವ ಕ್ಷೇತ್ರಗಳ ಅಭ್ಯರ್ಥಿಗಳು ಅನ್ಯ ಪಕ್ಷಗಳಿಗೆ ಬುಕ್‌ ಆಗಿಬಿಟ್ಟರು ಎಂದು ತಪ್ಪು ತಿಳಿಯಬಾರದು. ಅಭ್ಯರ್ಥಿಗಳ ವಿರುದ್ಧ ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಬಾರದು ಎಂದರು.

ಭಜರಂಗ ದಳ-ಪಿಎಫ್ಐ ನಿಷೇಧದಿಂದ ಏನು ಲಾಭ: ಕಾಂಗ್ರೆಸ್‌ ಪ್ರಣಾಳಿಕೆ ವಿರುದ್ದ ಎಚ್‌ಡಿಕೆ ವ್ಯಂಗ್ಯ

ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಹಣದಿಂದ ಚುನಾವಣೆ ನಡೆಸಿವೆ. ಹಣದ ಕೊರತೆಯಿಂದಾಗಿ ಪಕ್ಷದ ಅಭ್ಯರ್ಥಿಗಳಿಗೆ ತೊಂದರೆಯಾಗಿರಬಹುದು. ಆದರೂ ಕಾಂಗ್ರೆಸ್‌ ಮತ್ತು ಬಿಜೆ​ಪಿ​ಗಿಂತ ಮುಂದೆ ಇರು​ತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಮನಗರ, ಚನ್ನಪಟ್ಟಣ ಮತ್ತು ಮಾಗಡಿ ಕ್ಷೇತ್ರಗಳಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ ಕುಮಾ​ರ​ಸ್ವಾ​ಮಿ, ಹಾಗೊಮ್ಮೆ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬಂದರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಅಂತಹ ಪರಿಸ್ಥಿತಿ ಎದುರಾದರೆ ಆಗ ಅದರ ಬಗ್ಗೆ ಮಾತನಾಡುವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಎಂ ಬದಲಾವಣೆ ಚರ್ಚೆ ತೀವ್ರ: ಹೈಕಮಾಂಡ್‌ ಜೊತೆ ಡಿ.ಕೆ.ಶಿವಕುಮಾರ್‌ ಮಾತುಕತೆ
ಕಾಂಗ್ರೆಸ್‌ನ ಕಟ್ಟಾಳು ಶಾಮನೂರು ಶಿವಶಂಕರಪ್ಪ: ದಾವಣಗೆರೆಯ ಅಜೇಯ ರಾಜಕೀಯ ದಂತಕಥೆ