Karnataka assembly election: ಆತಂಕದಲ್ಲಿಯೇ ವಿಶ್ರಾಂತಿಗೆ ಜಾರಿರುವ ಅಭ್ಯರ್ಥಿಗಳು

By Kannadaprabha NewsFirst Published May 12, 2023, 3:30 AM IST
Highlights

ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಂತರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಫಲಿತಾಂಶ ಏನಾಗುತ್ತದೊ ಎಂಬ ಆತಂಕದಲ್ಲಿಯೇ ವಿಶ್ರಾಂತಿಗೆ ಶರಣಾಗಿದ್ದರೆ, ಕೆಲವರು ವಿಶ್ರಾಂತಿಯನ್ನು ಬಯಸದೆ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ರಾಮನಗರ (ಮೇ.12) : ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ನಂತರ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಫಲಿತಾಂಶ ಏನಾಗುತ್ತದೊ ಎಂಬ ಆತಂಕದಲ್ಲಿಯೇ ವಿಶ್ರಾಂತಿಗೆ ಶರಣಾಗಿದ್ದರೆ, ಕೆಲವರು ವಿಶ್ರಾಂತಿಯನ್ನು ಬಯಸದೆ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಚನ್ನಪಟ್ಟಣ ಕ್ಷೇತ್ರ(Channapattana constituency)​ದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ(HD Kumaraswamy) ಸದ್ಯ ಸಿಂಗಾಪುರಕ್ಕೆ ವಿಶ್ರಾಂತಿಗಾಗಿ ತೆರೆಳಿದ್ದಾರೆ. ಪ್ರತಿ ಬಾರಿ ಚುನಾವಣೆಯಲ್ಲಿ ಮತ ಚಲಾಯಿಸಿದ ನಂತರ ಸಂಜೆವರೆಗೂ ಕುಮಾರಸ್ವಾಮಿ ಕ್ಷೇತ್ರಾದ್ಯಂತ ಸಂಚರಿಸುತ್ತಿದ್ದರು. ಆದರೆ, ಈ ಬಾರಿ ಕ್ಷೇತ್ರ ಸಂಚಾರ ನಡೆಸದೆ ವಿಶ್ರಾಂತಿ ಬಯಸಿದ್ದಾರೆ. ಮತದಾನದ ದಿನ ಕೇತಗಾನಹಳ್ಳಿಯಲ್ಲಿ ಮತ ಚಲಾಯಿಸಿ ಕ್ಷೇತ್ರಗಳಲ್ಲಿ ಸಂಚರಿಸದೆ ವಾಪಸ್ಸಾಗಿದ್ದರು. ಬೆಂಗಳೂರು ಅಥವಾ ಬಿಡ​ದಿಯ ಕೇತ​ಗಾ​ನ​ಹ​ಳ್ಳಿ​ಯಲ್ಲಿ ಇದ್ದರೆ ಕುಮಾರಸ್ವಾಮಿ ಅವರಿಗೆ ವಿಶ್ರಾಂತಿ ಸಿಗುವು​ದಿಲ್ಲ. ಹೀಗಾಗಿ ಅವರು ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ.

Latest Videos

ಸ್ಟಾರ್‌ ಕ್ಷೇತ್ರಗಳ ಫಲಿತಾಂಶದ ಮೇಲೆ ಮತದಾರನ ಕಣ್ಣು!

ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಶಿವಕುಮಾರ್‌(DK Shivakumar) ಜಾಲಿ ಮೂಡ್‌ನಲ್ಲಿ​ದ್ದರು. ಕನ​ಕ​ಪು​ರ​ದ ಮನೆಯ​ಲ್ಲಿಯೇ ವಾಸ್ತವ್ಯ ಹೂಡಿದ್ದ ಶಿವ​ಕು​ಮಾರ್‌, ಬೆಳಗ್ಗೆ ಎದ್ದಾ​ಕ್ಷಣ ಗಡ್ಡ ಟ್ರಿಮ್‌ ಮಾಡಿ​ಸಿ​ಕೊಂಡು ಲಗುಬಗೆಯಿಂದ ರೆಡಿ​ಯಾದರು. ಸಹೋ​ದರ ಡಿ.ಕೆ.​ಸು​ರೇಶ್‌(DK Suresh) ಅವ​ರೊಂದಿಗೆ ಕನ​ಕ​ಪು​ರ​ದ​ಲ್ಲಿನ ವಾಸು ಹೋಟೆಲ್‌ಗೆ ತೆರಳಿ ಮಸಾಲೆ ದೋಸೆ ಸವಿ​ದರು. ಪಕ್ಷದ ಮುಖಂಡ​ರೊಂದಿಗೆ ಸಮಾ​ಲೋ​ಚನೆ ನಡೆ​ಸಿ​ದ​ ತರು​ವಾಯ ಕೋಡಿ​ಹ​ಳ್ಳಿಯ ಫಾಮ್‌ರ್‍ಹೌಸ್‌ಗೆ ತೆರಳಿ ತಾಯಿ ಗೌರಮ್ಮ ಅವ​ರಿಂದ ಆಶೀ​ರ್ವಾದ ಪಡೆದು ಬೆಂಗ​ಳೂ​ರಿಗೆ ತೆರ​ಳಿ​ದರು.

ಈ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ನಾಗ​ರಾಜು(JDS candidate Nagaraju) ಕನಕಪುರದ ತಮ್ಮ ನಿವಾಸದಲ್ಲಿ ಕಾಲ ಕಳೆದರು. ಬಿಜೆಪಿ ಅಭ್ಯರ್ಥಿ ಆರ್‌.ಅ​ಶೋಕ್‌ ತಮ್ಮ ಕಟುಂಬವರ್ಗದೊಡನೆ ಬೆಂಗಳೂರಿನ ನಿವಾಸದಲ್ಲಿ ವಿಶ್ರಾಂತಿ ಪಡೆದುಕೊಂಡರು ಎನ್ನಲಾಗಿದೆ.

ರಾಮನಗರ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಇಕ್ಬಾಲ್‌ ಹುಸೇನ್‌, ಜೆಡಿ​ಎಸ್‌ ಅಭ್ಯರ್ಥಿ ನಿಖಿಲ್‌ ಕುಮಾ​ರ​ಸ್ವಾ​ಮಿ​ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆ​ದರೆ, ಬಿಜೆಪಿ ಅಭ್ಯರ್ಥಿ ಗೌತಮ್‌ಗೌಡ ತಮ್ಮ ಕುಟುಂಬ ವರ್ಗದೊಂದಿಗೆ ಕಾಲ ಕಳೆದಿರುವುದಾಗಿ ತಿಳಿದುಬಂದಿದೆ.

ಮಾಗಡಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಎಚ್‌.ಸಿ.ಬಾಲಕೃಷ್ಣ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆದುಕೊಂಡರೆ, ಈ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಎ.ಮಂಜುನಾಥ್‌ ಬಿಡದಿ ಮನೆಯಲ್ಲಿ ಉಳಿ​ದು​ಕೊಂಡಿ​ದ್ದರು. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಸಾದ್‌ ಗೌಡ ತಮ್ಮ ಮನೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ.

ಸಮೀಕ್ಷೆ ಬೆನ್ನಲ್ಲೇ ಅತಂತ್ರ ವಿಧಾನಸಭೆ ಆತಂಕ, ಶುರುವಾಗಿದೆ ರಣತಂತ್ರ!

ಚನ್ನಪಟ್ಟಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್‌ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಗಂಗಾ​ಧರ್‌ ಬೆಂಗಳೂರಿನ ಮನೆ​ಯಲ್ಲಿ ಉಳಿ​ದು​ಕೊಂಡಿ​ದ್ದಾರೆ. ಮತದಾನ ಪ್ರಮಾಣದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು, ಬೂತ್‌ ಮಟ್ಟದಲ್ಲಿ ಆಗಿರುವ ಮತದಾನದ ವಿವರಗಳನ್ನು ಕಲೆ ಹಾಕಿ ತಮ್ಮ ಆಪ್ತರೇಷ್ಟರ ಜೊತೆ ಗೆಲುವಿನ ಲೆಕ್ಕಾಚಾರ ಹಾಕುತ್ತಿದ್ದಾರೆ.

click me!