Ticket Fight: ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ ಮಾಜಿ ಸಚಿವ ಸೊಗಡು ಶಿವಣ್ಣ!

Published : Mar 10, 2023, 01:24 PM IST
Ticket Fight:  ಜೋಳಿಗೆ ಹಿಡಿದು ಪ್ರಚಾರ ಆರಂಭಿಸಿದ ಮಾಜಿ ಸಚಿವ ಸೊಗಡು ಶಿವಣ್ಣ!

ಸಾರಾಂಶ

ಠೇವಣಿ ಹಣ ಸಂಗ್ರಹಿಸಲು ಜೋಳಿಗೆ ಹಿಡಿದು. ಮಟೆ ಬಾರಿಸುತ್ತ ಮತದಾರರ ಮುಂದೆ ಹೋಗಲು ವಿನೂತನ ಪ್ರಯತ್ನ ನಡೆಸಲು ಸಿದ್ಧತೆ ನಡೆಸಿರುವ ಮಾಜಿ ಸಚಿವ ಸೊಗಡು ಶಿವಣ್ಣ(Sogadu shivanna) ಸದ್ಯ ಕ್ಷೇತ್ರದಲ್ಲಿ ಇವರದ್ದೇ ಸುದ್ದಿಯಾಗಿದೆ.

ತುಮಕೂರು (ಮಾ.10) : ಠೇವಣಿ ಹಣ ಸಂಗ್ರಹಿಸಲು ಜೋಳಿಗೆ ಹಿಡಿದು. ಮಟೆ ಬಾರಿಸುತ್ತ ಮತದಾರರ ಮುಂದೆ ಹೋಗಲು ವಿನೂತನ ಪ್ರಯತ್ನ ನಡೆಸಲು ಸಿದ್ಧತೆ ನಡೆಸಿರುವ ಮಾಜಿ ಸಚಿವ ಸೊಗಡು ಶಿವಣ್ಣ(Sogadu shivanna) ಸದ್ಯ ಕ್ಷೇತ್ರದಲ್ಲಿ ಇವರದ್ದೇ ಸುದ್ದಿಯಾಗಿದೆ.

ವಿನೂತನ ಪ್ರಚಾರದ ಮೂಲಕ ತುಮಕೂರು ನಗರದ ಬಿಜೆಪಿ ಟಿಕೆಟ್ ಫೈಟ್(Ticket fight) ಜೋರಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ಜೋಳಿಗೆ ಹಿಡಿದು ಮತದಾರನ ಮುಂದೆ ಹೋಗುತ್ತಿದ್ದು ಒಂದು ಜೋಳಿಗೆಗೆ ನೋಟು, ಇನ್ನೊಂದು ಜೋಳಿಗೆಗೆ ವೋಟು ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.

ಬಿಎಸ್‌ವೈ ಮದುವೆ ಸಿಡಿ,ಡೈರಿ ಡಿಕೆಶಿಗೆ ಕೊಟ್ಟಿದ್ದೆ : ಪದ್ಮನಾಭ ಪ್ರಸನ್ನ

1977 ರಲ್ಲಿ ವಾಕ್ ಸ್ವಾತಂತ್ರ ಕಿತ್ತುಕೊಂಡಿದ್ದಾರೆಂದು ಜೋಳಿಗೆ ಹಿಡಿದು ಜೈಲಿಗೆ ಹೋಗಿದ್ದೆ. ಮತದಾರರು ನೀಡಿರುವ ಜೋಳಿಗೆಗಳು ಇವಾಗಿವೆ. ಭಾನುವಾರ ಕಾಳಮ್ಮ ದುರ್ಗಮ್ಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಜೋಳಿಗೆ ಹಿಡಿದು ಪ್ರಚಾರ ಆರಂಭಿಸಲಾಗುವುದು. ಠೇವಣಿಗಾಗಿ ಜನರಿಂದಲ್ಲೇ ಹಣ ಸಂಗ್ರಹಿಸಲು ಜೋಳಿಗೆ ಹಿಡಿದಿದ್ದು, ಪ್ರತಿ ದಿನ ತುಮಕೂರು ನಗರದ ಒಂದೊಂದು ವಾರ್ಡ್ ನಲ್ಲಿ ಓಡಾಟ ಮಾಡುತ್ತಾ ಪ್ರಚಾರ ನಡೆಸುತ್ತೇನೆ ಎಂದರು.

ಹಿಂದು, ಮುಸ್ಲಿಂ, ಕ್ರೈಸ್ತರನ್ನು ಸಮಾನವಾಗಿ ನೋಡಿದ ಕಾಂಗ್ರೆಸ್‌: ಮಲ್ಲಿಕಾರ್ಜುನ ಖರ್ಗೆ

ನಾನು ಮಾಡಿರುವ ಕಾಯಕವನ್ನು ಹೇಳಿಕೊಂಡು  ಪ್ರಚಾರ ನಡೆಸುತ್ತೇನೆ. ಹಿರಿಯರ ಮಾತಿಗೆ ಬೆಲೆ ಕೊಟ್ಟು 2018 ರಲ್ಲಿ ಟಿಕೆಟ್ ಬಿಟ್ಟು ಕೊಟ್ಟಿದ್ದೆ. ಆದರೆ ಈ ಬಾರಿ ಬಿಜೆಪಿ(Karnataka BJP)ಯಿಂದ ತುಮಕೂರು ನಗರ ಅಭ್ಯರ್ಥಿ ನಾನೇ ಎಂದು ಹೇಳಿದರು.
ಇದೇ ವೇಳೆ ಸೊಗಡು ಶಿವಣ್ಣ ಅವರ ಜೋಳಿಗೆಗೆ ಬೆಂಬಲಿಗರು ಹಣ ಹಾಕಿ ಬೆಂಬಲ ಸೂಚಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ