ಜೆಡಿಎಸ್‌ ಅಹೋರಾತ್ರಿ ಧರಣಿ ವಾಪಸ್: ಸಿಎಂ ಬೊಮ್ಮಾಯಿ ಮನವೊಲಿಕೆ

Published : Sep 23, 2022, 01:00 AM IST
ಜೆಡಿಎಸ್‌ ಅಹೋರಾತ್ರಿ ಧರಣಿ ವಾಪಸ್: ಸಿಎಂ ಬೊಮ್ಮಾಯಿ ಮನವೊಲಿಕೆ

ಸಾರಾಂಶ

ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ನಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದ ಜೆಡಿಎಸ್‌ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದಿದ್ದು, ಶುಕ್ರವಾರ ಸದನದಲ್ಲಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.  

ವಿಧಾನಸಭೆ (ಸೆ.23): ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ನಲ್ಲಿ ಆಗಿರುವ ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಎಚ್‌.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಅಹೋರಾತ್ರಿ ಧರಣಿಗೆ ಮುಂದಾಗಿದ್ದ ಜೆಡಿಎಸ್‌ ಸದಸ್ಯರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನವೊಲಿಕೆ ಹಿನ್ನೆಲೆಯಲ್ಲಿ ಧರಣಿ ಹಿಂಪಡೆದಿದ್ದು, ಶುಕ್ರವಾರ ಸದನದಲ್ಲಿ ಹೋರಾಟ ಮುಂದುವರೆಸುವುದಾಗಿ ಹೇಳಿದ್ದಾರೆ.

ಬಿಎಂಎಸ್‌ ಎಜುಕೇಷನಲ್‌ ಟ್ರಸ್ಟ್‌ನಲ್ಲಿ ಆಜೀವ ಟ್ರಸ್ಟಿ ನೇಮಕದಲ್ಲಿ ವ್ಯಾಪಕ ಅಕ್ರಮ ನಡೆದಿದ್ದು, ಇದಕ್ಕೆ ಪ್ರೋತ್ಸಾಹ ನೀಡಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ್‌ ತಲೆದಂಡ ಆಗಬೇಕು ಹಾಗೂ ಪ್ರಕರಣದ ಬಗ್ಗೆ ಸಮಗ್ರ ತನಿಖೆಗೆ ವಹಿಸಬೇಕು ಎಂದು ಎಚ್‌.ಡಿ. ಕುಮಾರಸ್ವಾಮಿ ಅವರು ಆಗ್ರಹ ಮಾಡಿದ್ದರು. ಇದನ್ನು ತಳ್ಳಿ ಹಾಕಿದ ಸಚಿವ ಅಶ್ವತ್ಥ ನಾರಾಯಣ್‌ ಯಾವುದೇ ರೀತಿಯ ಅಕ್ರಮ ಆಗಿಲ್ಲ, ಹೀಗಾಗಿ ತನಿಖೆಯ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ವೇಳೆ ಉಂಟಾಗಿದ್ದ ಜಟಾಪಟಿಯ ನಡುವೆ ಸ್ಪೀಕರ್‌ ಸದನವನ್ನು ಶುಕ್ರವಾರಕ್ಕೆ ಮುಂದೂಡಿದ್ದರು.

ಇಂದು ಭ್ರಷ್ಟಾಚಾರಿಗಳ ಹೆಸರು ಬಯಲು: ಕಾಂಗ್ರೆಸ್‌ಗೆ ತಿರುಗೇಟು ಕೊಟ್ಟ ಸಿಎಂ

ಇದರಿಂದ ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿ ವಿಧಾನಸಭೆಯಲ್ಲೇ ಬೀಡು ಬಿಟ್ಟಿದ್ದ ಕುಮಾರಸ್ವಾಮಿ ಹಾಗೂ ಸದಸ್ಯರು ರಾತ್ರಿ ವಾಸ್ತವ್ಯಕ್ಕೆ ಅಗತ್ಯ ಸಿದ್ಧತೆಯನ್ನೂ ಮಾಡಿಕೊಂಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಹೋರಾತ್ರಿ ಧರಣಿ ಹಿಂಪಡೆಯುವಂತೆ ಮನವೊಲಿಸಿದ್ದಾರೆ.

ಸಿಎಂ ಉತ್ತರದ ಭರವಸೆ: ಪ್ರಕರಣದ ಬಗ್ಗೆ ಶುಕ್ರವಾರ ಖುದ್ದು ನಾನೇ ಉತ್ತರ ನೀಡುತ್ತೇನೆ. ಜತೆಗೆ ಶುಕ್ರವಾರ ಚರ್ಚೆಗೂ ಅವಕಾಶ ನೀಡಲಾಗುವುದು. ಹೀಗಾಗಿ ಅಹೋರಾತ್ರಿ ಧರಣಿಯನ್ನು ಹಿಂಪಡೆಯಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಅಹೋರಾತ್ರಿ ಧರಣಿ ಹಿಂಪಡೆದರು ಎಂದು ತಿಳಿದುಬಂದಿದೆ.

ವಕ್ಫ್ ಆಸ್ತಿ ಕಬಳಿಕೆಯ ವರದಿ ಸದನದಲ್ಲಿ ಮಂಡನೆ: ಸಿಎಂ ಬೊಮ್ಮಾಯಿ

ಶುಕ್ರವಾರವೂ ಹೋರಾಟ ಮುಂದುವರೆಸುತ್ತೇವೆ
ಮುಖ್ಯಮಂತ್ರಿಗಳ ಭರವಸೆ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ ಹಿಂಪಡೆದಿದ್ದೇವೆ. ಶುಕ್ರವಾರವೂ ಸದನದಲ್ಲಿ ನಮ್ಮ ಹೋರಾಟ ಮುಂದುವರೆಯಲಿದೆ. ಅಕ್ರಮದ ವಿರುದ್ಧ ತನಿಖೆ ನಡೆಸುವ ಭರವಸೆ ನೀಡುವವರೆಗೂ ನಮ್ಮ ಹೋರಾಟ ಕೈಬಿಡಲ್ಲ.
- ಎಚ್‌.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ