ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಮಹತ್ವದ ಸಭೆ ಕರೆದ ಬಿಜೆಪಿ

Published : Jul 21, 2021, 08:27 PM IST
ನಾಯಕತ್ವ ಬದಲಾವಣೆ ಚರ್ಚೆ ಮಧ್ಯೆ ಮಹತ್ವದ ಸಭೆ ಕರೆದ ಬಿಜೆಪಿ

ಸಾರಾಂಶ

* ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರು * ಇತ್ತ  ಮಹತ್ವದ ಸಭೆ ಕರೆದ ರಾಜ್ಯ ಬಿಜೆಪಿ * ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿರುವ ಸಭೆ

ಚಿತ್ರದುರ್ಗ, (ಜು.21): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರನ್ನು ಬದಲಾಯಿಸಲಾಗುತ್ತದೆ ಎನ್ನುವ ಸುದ್ದಿ ರಾಜ್ಯ ರಾಜಕಾರಣಲ್ಲಿ ಸಂಚಲನವನ್ನೇ ಸೃಷ್ಟಿಸಿದೆ.

ಇದರ ಮಧ್ಯೆ ರಾಜ್ಯ ಬಿಜೆಪಿ ಮಹತ್ವದ ಸಭೆಯೊಂದನ್ನು ಕರೆದಿರುವುದು ಭಾರೀ ಕುತೂಹಲ ಮೂಡಿಸಿದೆ. ಜು. 24ರಂದು  ರಾಜ್ಯ ಬಿಜೆಪಿ ಸಭೆ ಕರೆದಿರುವ ಬಗ್ಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಶಾಸಕಾಂಗ ಸಭೆ ರದ್ದಾದ ಬೆನ್ನಲ್ಲೇ ಬಿಜೆಪಿಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ

ಈ ಬಗ್ಗೆ ಚಿತ್ರದುರ್ಗದಲ್ಲಿ ಇಂದು (ಬುಧವಾರ)  ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಇದೇ ತಿಂಗಳ 24 ರಂದು ಇಂಡಿಯನ್ ಇಂಟರ್‌ನ್ಯಾಷನಲ್ ಕಾಲೇಜಿನಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆಯು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ಕುರಿತು ಹಾಗೂ ಪಕ್ಷದ ಮುಂದಿನ ರೂಪುರೇಷಗಳ ಬಗ್ಗರ ಚರ್ಚ ನಡೆಯಲಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಕುರಿತು ಕೂಡಾ ಮಾತುಕತೆ ನಡೆಯಲಿದೆ ಎಂದು ವಿವರಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮವನ್ನು ಬೂತ್ ಅಧ್ಯಕ್ಷರು ಆಯೋಜಿಸುವಂತೆ ಮಾಡುತ್ತೇವೆ. ರಾಜ್ಯದಲ್ಲಿ 30 ಮನ್ ಕೀ ಬಾತ್ ಕಾರ್ಯಕ್ರಮ‌ ನಡೆಯಲಿವೆ. ಸೆಪ್ಟಂಬರ್ 1ರಿಂದ 15 ಗ್ರಾ.ಪಂ ಸದಸ್ಯರ ಜಿಲ್ಲಾ ಸಮಾವೇಶ ನಡೆಸುತ್ತೇವೆ. ಅಕ್ಟೋಬರ್‌ನಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ರಾಜ್ಯ ಮಟ್ಟದ ಸಮಾವೇಶ ನಡೆಸುತ್ತೇವೆ ಎಂದು ವಿವರಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ