2013ರಲ್ಲಿ ಆದಂತೆ ಬಿಜೆಪಿ ಮತ್ತೆ ಇಬ್ಭಾಗ: ಹೀಗೊಂದು ಭವಿಷ್ಯ ..!

Published : Nov 30, 2020, 06:36 PM IST
2013ರಲ್ಲಿ ಆದಂತೆ ಬಿಜೆಪಿ ಮತ್ತೆ ಇಬ್ಭಾಗ: ಹೀಗೊಂದು ಭವಿಷ್ಯ ..!

ಸಾರಾಂಶ

ಶಿರಾ, ಆರ್.ಆರ್.ನಗರ ಉಪಚುನಾವಣೆ ಮುಗಿದ ಬಳಿಕ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಅದರಲ್ಲೂ ಗುಂಪುಗಾರಿಕೆಗಳು ಶುರುವಾಗಿದೆ.   

ಬೆಂಗಳೂರು, (ನ.30): ಒಳ ಜಗಳದಿಂದಾಗಿ ಬಿಜೆಪಿ 2013ರಲ್ಲಿ ಹೊಡೆದು ಹೋಳಾದಂತೆ ಮುಂದಿನ ದಿನಗಳಲ್ಲಿ ಮತ್ತೆ ಇಬ್ಬಾಗವಾಗಲಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ.

ಬೆಂಗಳೂರಿನ ಹೊರವಲಯದಲ್ಲಿರುವ ಖಾಸಗಿ ರೆಸಾರ್ಟ್‍ನಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕರ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್‍ಗೆ ಸೋಲಾಗಿರಬಹುದು. ಬಿಜೆಪಿ ಗೆದ್ದಿರಬಹುದು. ಆದರೆ, ಪರಿಸ್ಥಿತಿ ಹೀಗೆ ಇರುದಿಲ್ಲ ಎಂದು ಹೇಳಿದರು.

ಕಳಂಕದ ಖೆಡ್ಡಕ್ಕೆ ಬೀಳುತ್ತಿದೆ ಕಮಲ: 2008ರ ತಪ್ಪನ್ನೇ ಪುನರಾವರ್ತಿಸ್ತಿದ್ಯಾ ರಾಜ್ಯ ಬಿಜೆಪಿ ..?

ಕಾಂಗ್ರೆಸ್‍ನಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದು, ಅವು ಸರಿ ಹೋಗುತ್ತವೆ. ಆದರೆ, ಬಿಜೆಪಿಯಲ್ಲಿ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಪ್ರಯತ್ನಗಳು ನಡೆಯುತ್ತಿವೆ. ನಮಗಿಂತಲೂ ಅವರಲ್ಲೇ ಹೆಚ್ಚು ಭಿನ್ನಾಭಿಪ್ರಾಯಗಳಿವೆ. ಬಿಜೆಪಿಯ ಪರಿಸ್ಥಿತಿ ಹೀಗೆ ಇರುವುದಿಲ್ಲ. 2013ರಲ್ಲಿ ಯಡಿಯೂರಪ್ಪ, ಶ್ರೀರಾಮುಲು ಅವರು ಪ್ರತ್ಯೇಕ ಪಕ್ಷ ಕಟ್ಟಿಕೊಂಡಿದ್ದಾಗ ಬಿಜೆಪಿ ಹೊಡೆದು ಚೂರಾಗಿತ್ತು. ಮುಂದಿನ ದಿನಗಳಲ್ಲಿಯೂ ಅದೇ ರೀತಿಯ ವಾತಾವರಣ ನಿರ್ಮಾಣವಾಗಲಿದೆ ಎಂದರು.

ಬೇರೆ ಬೇರೆ ಕಾರಣಗಳಿಂದ ಬಿಜೆಪಿಯ ಶಾಸಕರು ಅನ್ಯ ಪಕ್ಷಗಳತ್ತ ಮುಖ ಮಾಡುತ್ತಾರೆ. ಬಿಜೆಪಿಯಲ್ಲಿ ಮತ್ತೆ ಹೀನಾಯ ಸ್ಥಿತಿ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ನಾವು ಈಗಿನಿಂದಲೇ ಮುಂದಿನ ಚುನಾವಣೆಗಳ ತಯಾರಿ ಆರಂಭಿಸಿದ್ದೇವೆ. ಪಕ್ಷ ಸಂಘಟನೆಯತ್ತ ಗಮನ ಕೊಟ್ಟಿದ್ದೇವೆ. ಇತ್ತೀಚೆಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಸೋಲಾಗಿದೆ. ಆದರೆ, ಅದೇ ಅಂತಿಮ ಅಲ್ಲ. ಸಾಮಾನ್ಯವಾಗಿ ಆಡಳಿತಾರೂಢ ಪಕ್ಷಕ್ಕೆ ಉಪ ಚುನಾವಣೆಯಲ್ಲಿ ಗೆಲುವು ಆಗುತ್ತದೆ. ಅದೇ ರೀತಿಯಲ್ಲಿ ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸದನದಲ್ಲಿ ಶಾ ಒತ್ತಡದಲ್ಲಿದ್ರು, ಕೈ ಕಂಪಿಸುತ್ತಿತ್ತು : ರಾಹುಲ್‌
ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ