ಜಾರಕಿಹೊಳಿ ಸಿ.ಡಿ. ಕೇಸ್: ಮಹಾನಾಯಕಿಯನ್ನು ಎಳೆದು ತಂದ ಬಿಜೆಪಿ!

By Suvarna NewsFirst Published Mar 16, 2021, 4:19 PM IST
Highlights

ರಾಸಲೀಲೆ ಸಿ.ಡಿ. ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಪಕ್ಷಗಳ ಟ್ವಿಟರ್​  ಆರೋಪ-ಪ್ರತ್ಯಾರೋಪಗಳ ಸಮರ ನಡೆಯುತ್ತಿದ್ದು, ಹಳೆಯ ವಿಚಾರಗಳನ್ನು ಸಹ ಮುನ್ನೆಲೆಗೆ ತಂದು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ.

ಬೆಂಗಳೂರು, (ಮಾ.16): ರಮೇಶ್​ ಜಾರಕಿಹೊಳಿ ರಾಸಲೀಲೆ ಸಿ.ಡಿ ಪ್ರಕರಣದ ಹಿಂದೆ ಮಹಾನ್ ನಾಯಕರೊಬ್ಬರ ಕೈವಾಡ ಇದೆ ಎಂಬ ಆರೋಪ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದ್ದು, ಆ ಮಹಾನ್ ನಾಯಕ ಯಾರು ಎನ್ನುವ ಚರ್ಚೆ ಶುರುವಾಗಿದೆ.

ಈ ಬಗ್ಗೆ ಕರ್ನಾಟಕ ಬಿಜೆಪಿಯ ಅಧಿಕೃತ ಟ್ವಿಟರ್​ ಹ್ಯಾಂಡಲ್​ನಲ್ಲಿ ಕಾಂಗ್ರೆಸ್​ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಕಾಲೆಳೆಯಲಾಗಿದ್ದು, ಕಾಂಗ್ರೆಸ್-ಬಿಜೆಪಿ ನಡುವಿನ ಟ್ವೀಟ್​ ಸಮರದ ಕಾವು ಮತ್ತಷ್ಟು ಏರಿದೆ.

'ಸೆಕ್ಸ್ CD ಕೇಸ್:ಯಡಿಯೂರಪ್ಪನವರತ್ತ ಏಕೆ ಪರೋಕ್ಷವಾಗಿ ಗುರಿ ಇಡುತ್ತಿದ್ದೀರಿ'?

'ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ. ಏನಿದೆಲ್ಲಾ? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ'. ಎಂದು ಬಿಜೆಪಿಯ ಅಧಿಕೃತ ಅಕೌಂಟ್​ನಲ್ಲಿ ಟ್ವೀಟ್​ ಮಾಡಲಾಗಿದೆ. 

ಈ ಟ್ವೀಟ್​ನಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್​ ಅವರ ಹೇಳಿಕೆಗಳನ್ನು ಲಗತ್ತಿಸಲಾಗಿದ್ದು, ಮಹಾನಾಯಕ ಹಾಗೂ ಮಹಾನಾಯಕಿ ಎಂದು ಇಬ್ಬರೆಡೆಗೂ ಬೊಟ್ಟು ಮಾಡಿದಂತಾಗಿದೆ.

ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ, ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ.

ಏನಿದೆಲ್ಲಾ!?

ಬೆಂಕಿಯಿಲ್ಲದೆ ಹೊಗೆಯಾಡುವುದೇ?

ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ. pic.twitter.com/MGdRfAyXDq

— BJP Karnataka (@BJP4Karnataka)

ಇತ್ತ ಕಾಂಗ್ರೆಸ್​ ಪಕ್ಷದವರು ಸಹ ತಮ್ಮ ಟ್ವಿಟರ್​ ಖಾತೆಯಲ್ಲಿ ಬಿಜೆಪಿ ವಿರುದ್ಧ ಒಂದರ ಹಿಂದೊಂದು ಟ್ವೀಟ್​ ಮಾಡುತ್ತಿದ್ದು, 'ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ ವಾಮ ಮಾರ್ಗದ ಸರ್ಕಾರ. ನಿಮ್ಮವರೇ ಹೇಳಿದಂತೆ ಬ್ಲಾಕ್ಮೇಲ್‌ ಸಂಪುಟ. ಹನಿಟ್ರಾಪ್‌ ಮೂಲಕ ಆಪರೇಷನ್ ಕಮಲ. ಯತ್ನಾಳ್ ಹೇಳಿದಂತೆ ಬಿಎಸ್​ವೈ ಫ್ಯಾಮಿಲಿ ಸರ್ಕಾರ. 'ದಂಡ'ದ ಸರ್ಕಾರಕ್ಕೆ 'ಮಾನ' ಎಲ್ಲಿದೆ? ತಾಕತ್ತಿದ್ದರೆ ಆಪರೇಷನ್ ಕಮಲದ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ'. ಎಂದು ಬಿಜೆಪಿಗೆ ತಿರುಗೇಟು ನೀಡಿದೆ. 

ನಿಮ್ಮ ಶ್ರೀನಿವಾಸ್ ಪ್ರಸಾದ್ ಹೇಳಿದಂತೆ ವಾಮಮಾರ್ಗದ ಸರ್ಕಾರ.

ನಿಮ್ಮವರೇ ಹೇಳಿದಂತೆ ಬ್ಲಾಕ್ಮೇಲ್‌ ಸಂಪುಟ.

ಹನಿಟ್ರಾಪ್‌ ಮೂಲಕ ಆಪರೇಷನ್ ಕಮಲ.

ಯತ್ನಾಳ್ ಹೇಳಿದಂತೆ ಫ್ಯಾಮಿಲಿ ಸರ್ಕಾರ.

'ದಂಡ'ದ ಸರ್ಕಾರಕ್ಕೆ 'ಮಾನ' ಎಲ್ಲಿದೆ ?

ತಾಕತ್ತಿದ್ದರೆ ಆಪರೇಷನ್ ಕಮಲದ ಸರ್ಕಾರವನ್ನು ವಿಸರ್ಜಿಸಿ ಚುನಾವಣೆಗೆ ಬನ್ನಿ. https://t.co/Zq2Dzh68QN

— Karnataka Congress (@INCKarnataka)
click me!