Resort Politics: ಹುಟ್ಟುಹಬ್ಬದ ನೆಪವೊಡ್ಡಿ ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ತಂಗಿದ ಬಿಜೆಪಿ ನಾಯಕರು!

Published : Jul 01, 2023, 08:18 PM ISTUpdated : Jul 01, 2023, 08:19 PM IST
Resort Politics: ಹುಟ್ಟುಹಬ್ಬದ ನೆಪವೊಡ್ಡಿ ಚಿಕ್ಕಮಗಳೂರು ರೆಸಾರ್ಟ್‌ನಲ್ಲಿ ತಂಗಿದ ಬಿಜೆಪಿ ನಾಯಕರು!

ಸಾರಾಂಶ

ಹುಟ್ಟು ಹಬ್ಬದ ನೆಪ ಬಿಜೆಪಿ ನಾಯಕರು ಕಾಫಿನಾಡಿನ ಖಾಸಗಿ ರೆಸಾರ್ಟ್ ನಲ್ಲಿ ತಂಗಿ ಪ್ರತಿಪಕ್ಷ ನಾಯಕನ ಆಯ್ಕೆ ಸೇರಿದಂತೆ ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆ ಮಹತ್ವ ಪಡೆದ ಸಭೆ ನಡೆಸಿದ್ದಾರೆ.  

ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ 

ಚಿಕ್ಕಮಗಳೂರು (ಜು.1): ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಮುಖಂಡರುಗಳು ಜೂ.30ರಂದು ತಡರಾತ್ರಿಯಿಂದ ಮಧ್ಯಾಹ್ನದ ತನಕ ಕಾಫಿ ನಾಡಿನ ರೆಸಾರ್ಟ್‌ನಲ್ಲಿ ಬೀಡುಬಿಟ್ಟಿದ್ದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ಶಾಸಕರಾದ ಮುನಿರಾಜು, ವಿ.ಸುನೀಲ್ ಕುಮಾರ್, ಶಾಸಕ ರಾಜುಗೌಡ ಸೇರಿದಂತೆ ಹಲವು ಮುಖಂಡರು ಮುಳ್ಳಯ್ಯನಗಿರಿ ಸಮೀಪದ ( ಪ್ರೈಂ ರೋಸ್) ಖಾಸಗಿ  ರೆಸಾರ್ಟ್‌ನಲ್ಲಿ ತಂಗಿದ್ದರು. ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಆರ್ ಅಶೋಕ್ ಹುಟ್ಟುಹಬ್ಬಕ್ಕೆ ಪ್ರತಿ ವರ್ಷವೂ ಚಿಕ್ಕಮಗಳೂರಿಗೆ ಬರುತ್ತೇನೆ. ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್, ಸನ್ಮಾನ ಎಲ್ಲವೂ ಇರುತ್ತದೆ. ಆದರ ಬದಲಾಗಿ ಪ್ರಕೃತಿಯ ನಡುವೆ ಹುಟ್ಟು ಹಬ್ಬ ಆಚರಿಸಿಕೊಳ್ಳುವುದು ಇಷ್ಟ ಅದಕ್ಕಾಗಿ ಇಲ್ಲಗೆ ಬರುತ್ತೇನೆ ಎಂದರು. ಮೊದಲು ಇಲ್ಲಿಗೆ ಬಂದು ನಂತರ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸುತ್ತೇನೆ. ಕಳೆದ ಬಾರಿ ಸಿ.ಟಿ.ರವಿ ಅವರ ಜೊತೆ ಚಿಕ್ಕಮಗಳೂರು ನಗರದ ಶ್ರೀರಾಮ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದೆ. ಈ ಬಾರಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೂ ನಮ್ಮ ಜೊತೆಗಿದ್ದಾರೆ ಎಂದರು.

ವಿಪಕ್ಷ ನಾಯಕನ ಆಯ್ಕೆ ಮಾಡದ ಬಿಜೆಪಿಗೆ ಇದಕ್ಕಿಂತ ವೈಫಲ್ಯ ಬೇಕಾ?: ಸಚಿವ ಕೃಷ್ಣ ಬೈರೇಗೌಡ

ಕುತೂಹಲ ಮೂಡಿಸಿದ ಸಮಾಲೋಚನೆ:
ವಿಧಾನಸಭೆ ವಿರೋಧಪಕ್ಷದ ನಾಯಕನ ಆಯ್ಕೆ ಕುರಿತು ಬಿಜೆಪಿಯಲ್ಲಿ ಪ್ರಕ್ರಿಯೆಗಳು ಬಿರುಸುಗೊಂಡ ಸಂದರ್ಭದಲ್ಲಿ ಮಾಜಿ ಸಿಎಂ ಸೇರಿದಂತೆ ಹಲವು ಪ್ರಮುಖರು ಒಂದೆಡೆ ಸೇರಿ ಸಮಾಲೋಚನೆ ನಡೆಸಿದ್ದು ಚರ್ಚೆಗೆ ಗ್ರಾಸವಾಯಿತು.

ಶಂಕಿತ ಉಗ್ರರ ವಿಚಾರಣೆಯಲ್ಲಿ ಕರಾಳ ಸತ್ಯ, ರಾಜ್ಯದಲ್ಲಿ ರೋಬೋಟ್ ಮೂಲಕ ವಿದ್ವಂಸ

ರೆಸಾರ್ಟ್‌ನಲ್ಲಿ ಯಾವುದೇ ರಾಜಕೀಯ ನಡೆದಿಲ್ಲ : ಮಾಜಿ ಸಿಎಂ 
ರೆಸಾರ್ಟ್‌ನಲ್ಲಿ ಯಾವುದೇ ರಾಜಕೀಯ ನಡೆದಿಲ್ಲ. ರಾಜಕೀಯ ಮಾತನಾಡೋಕೆ ಇಲ್ಲಿಗೆ ಬರಬೇಕಿಲ್ಲ. ಬೆಂಗಳೂರಿನಲ್ಲೇ ಮಾತನಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರೆಸಾರ್ಟ್ ನಿಂದ ತೆರಳುವ ವೇಳೆಯಲ್ಲಿ ಸುದ್ದಿಗಾರರೊಂದಿಗೆ ಮಾತಾಡಿ  ವಿಧಾನಸಭೆ ವಿರೋಧಪಕ್ಷದ ನಾಯಕನ ಆಯ್ಕೆ ಬಗ್ಗೆ ನಾಳೆ ಸಂಜೆ ಒಳಗಾಗಿ ಗೊತ್ತಾಗಲಿದೆ. ಅಧಿವೇಶನದಲ್ಲಿ ಚರ್ಚಿಸಲು ಸಾಕಷ್ಟು ವಿಷಯಗಳಿವೆ. ಸರ್ಕಾರ ಬಂದು ಒಂದೂವರೆ ತಿಂಗಳಲ್ಲಿ ಬಹಳಷ್ಟು ನಿರ್ಣಯಗಳನ್ನು ತೆಗೆದುಕೊಂಡಿದ್ದಾರೆ. ಕ್ಯಾಬಿನೆಟ್‌ನಲ್ಲಿ ಹಲವು ವಿಷಯಗಳಿಗೆ ನಿರ್ಣಯ ತೆಗೆದುಕೊಂಡಿದ್ದಾರೆ. ಗ್ಯಾರಂಟಿಗಳನ್ನು ಗೊಂದಲದ ಗೂಡಾಗಿಸಿದ್ದಾರೆ. ಇದೆಲ್ಲರ ಬಗ್ಗೆ ಖಂಡಿತವಾಗಿ ಸದನದಲ್ಲಿ ವಿಸ್ತೃತವಾಗಿ ಚರ್ಚಿಸುತ್ತೇವೆ ಎಂದರು.ಗೃಹಜ್ಯೋತಿ ಮೊದಲು 200 ಯುನಿಟ್ ಎಂದರು, ನಂತರ ವರ್ಷದ ಸರಾಸರಿ ಎಂದರು ಈ ರೀತಿ ಬಹಳ ಗೊಂದಲಗಳಿವೆ, ವಿದ್ಯುತ್ ಬಿಲ್ ಹೆಚ್ಚಿಸಿ ಈಗಾಗಲೆ ಶಾಕ್ ಕೊಟ್ಟಿದ್ದಾರೆ ಇದೆಲ್ಲದರ ಬಗ್ಗೆ ಚರ್ಚಿಸುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ