
ಬೆಂಗಳೂರು, (ಸೆ.26): ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಹೊಸ ಪದಾಧಿಕಾರಿಗಳನ್ನ ನೇಮಕ ಮಾಡಿದ್ದಾರೆ.
ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಮ್ ಮಾಧವ್, ಪಿ ಮುರಳಿಧರ್ ರಾವ್, ಅನಿಲ್ ಜೈನ್, ಸರೋಜ್ ಪಾಂಡೆ ಜಾಗಕ್ಕೆ ಹೊಸಬರ ನೇಮಕವಾಗಿದೆ.
"
ಪದಾಧಿಕಾರಿಗಳ ನೇಮಕದಲ್ಲಿ ಕರ್ನಾಟಕದ ಕೆಲ ನಾಯಕರುಗಳಿಗೆ ಮಹತ್ವದ ಹುದ್ದೆಗಳನ್ನ ನೀಡಲಾಗಿದ್ದು, ಅದರಲ್ಲೂ ಪ್ರಮುಖವಾಗಿ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನ ನೇಮಕ ಮಾಡಲಾಗಿದೆ.
‘ಸಿಎಂ ಬದಲಾವಣೆ’ ಎಲ್ಲಿಗೆ ಬಂತು? ಇನ್ನೂ 15 ದಿನ ಶಾ ಸಿಗೋದಿಲ್ಲ..!
ಬಿ.ಎಲ್. ಸಂತೋಷ್, ಸಂಘಟನೆಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗಿ ಕಾರ್ಯ ಮುಂದುವರಿಯಲಿದ್ದಾರೆ. ಇನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸಿ.ಟಿ.ರವಿ ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರನ್ನ ರಾಷ್ಟ್ರೀಯ ವಕ್ತಾರರಾಗಿ ನೇಮಕ ಮಾಡಲಾಗಿದೆ.
ಸಿ.ಟಿ ರವಿ ಅವರು 4 ವರ್ಷ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಆಗಿ ಅನುಭವ ಇದೆ. ಹಾಗೂ ಸಂಘದ ಹಿನ್ನಲೆಯುಳ್ಳವರು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾ ಕಾರ್ಯದರ್ಶಿ ಆಗಿ ನೇಮಕವಾಗಿದ್ದಾರೆ.
ಒಟ್ಟಿನಲ್ಲಿ ರಾಷ್ಟ್ರೀಯ ಬಿಜೆಪಿಯ ಪದಾಧಿಕಾರಿಗಳ ನೇಮಕದಲ್ಲಿ ಪಕ್ಷ ಸಂಘಟನೆ ದೃಷ್ಟಿಯಿಂದ ಕರ್ನಾಟಕದವರಿಗೆ ಅಗ್ರಪಾಲು ಸಿಕ್ಕಂತಾಗಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.