
ತುಮಕೂರು, (ಜೂನ್.14): ರಾಜ್ಯ ಬಿಜೆಪಿಯಲ್ಲಿ ನಾಕಯತ್ವ ಬದಲಾವಣೆ ಚರ್ಚೆ ಜೋರಾಗುತ್ತಿದೆ. ಇದರ ಮಧ್ಯೆ ಸಿಎಂ ಯಡಿಯೂರಪ್ಪರ ಬೆಂಬಲಕ್ಕೆ ವೀರಶೈವ-ಲಿಂಗಾಯತ ಮಠದ ಸ್ವಾಮೀಜಿಗಳು ನಿಂತಿದ್ದಾರೆ.
ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆ ತಿಪಟೂರಿನ ಷಡಕ್ಷರಿ ಮಠದಲ್ಲಿ ಇಂದು (ಸೋಮವಾರ) 10ಕ್ಕೂ ಹೆಚ್ಚು ಮಠಾಧೀಶರು ಸುದ್ದಿಗೋಷ್ಠಿ ನಡೆಸಿದರು.
ರಾಜ್ಯದ ಮುಖ್ಯಮಂತ್ರಿ ಸ್ಥಾನದಿಂದ ಬಿ ಎಸ್ ಯಡಿಯೂರಪ್ಪ ಅವರನ್ನು ಕೆಳಗಿಳಿಸಬಾರದು ಎಂದು ವೀರಶೈವ ಲಿಂಗಾಯತ ಮಠಾಧೀಶರು ಬಿಜೆಪಿ ಹೈಕಮಾಂಡ್ಗೆ ಒಕ್ಕೊರಲಿನ ಒತ್ತಾಯದ ಸಂದೇಶ ರವಾನಿಸಿದರು.
ಮಹತ್ವದ ನಿರ್ಧಾರ ಕೈಗೊಂಡ ಶಾಸಕರ ನಿಯೋಗ: ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಕೆ ಬಿರುಸು
ಸಿಎಂ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲವು ವ್ಯಕ್ತಿಗಳು ಸಿಎಂ ಸ್ಥಾನಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳಿಂದ ಮಾನಸಿಕವಾಗಿ ನೋವುಂಟಾಗುತ್ತಿದೆ. ಆದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬಿಎಸ್ವೈ ಅವರು ಕಾರಣ ಎಂದರು.
ಸಿಎಂ ಸ್ಥಾನದಿಂದ BSY ಕೆಳಗಿಳಿಸಲು ಹುನ್ನಾರ ನಡೆಯುತ್ತಿದೆ. ಸಿಎಂ ಯಡಿಯೂರಪ್ಪಗೆ ವಯಸ್ಸಾಗಿದೆ, ನಡೆಯಲು ಆಗಲ್ಲ. ಕಿವಿ ಕೇಳಿಸುವುದಿಲ್ಲ, ಉಸಿರಾಡಲು ಆಗಲ್ಲವೆಂದು ಅಪಪ್ರಚಾರ ನಡೆದಿದೆ. ಕರುಣಾನಿಧಿ ವ್ಹೀಲ್ಚೇರ್ನಲ್ಲಿ ಕುಳಿತು ಆಡಳಿತ ಮಾಡಿಲ್ವೇ? ನಮ್ಮ ಯಡಿಯೂರಪ್ಪಗೆ ಅಷ್ಟೊಂದು ವಯಸ್ಸಾಗಿದೆಯೇ? ಬಿಎಸ್ವೈ ಅಧಿಕಾರ ಪೂರ್ಣಗೊಳಿಸುವವರೆಗೆ ಅಡ್ಡಿಪಡಿಸಬಾರದು ಎಂದರು.
ಯಡಿಯೂರಪ್ಪ ಕರ್ನಾಟಕದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದವರು. ಅಂಥವರನ್ನು ತುಳಿಯಲು, ಮೂಲೆಗುಂಪು ಮಾಡಲು ಪಿತೂರಿ ನಡೆದಿದೆ ಎಂದು ಮಠಾಧೀಶರು ಆರೋಪಿಸಿದರು.
ಸುದ್ದಿಗೋಷ್ಟಿಯಲ್ಲಿ ಜಂಗಮ ಮಠದ ಸಿದ್ದಲಿಂಗ ಮಹಾಸ್ವಾಮೀಜಿ, ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿಗಳು, ಬೆಳ್ಳಾವಿ ಕಾರದ ವೀರಬಸವ ಮಹಾಸ್ವಾಮಿಗಳು, ವಿರಕ್ತಮಠದ ಶಶಿಶೇಖರ ಬಸವ ಮಹಾಸ್ವಾಮಿಗಳು, ಕುಣಿಗಲ್ ಮಠದ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿಗಳು, ಹೊನ್ನವಳ್ಳಿ ಮಠದ ಶಿವಪ್ರಕಾಶ ಶಿವಾಚಾರ್ಯ ಮಹಾಸ್ವಾಮೀಜಿಗಳು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.