ಗ್ರಾಮ ಪಂಚಾಯಿತಿ ಆಯ್ತು ಇದೀಗ ಮತ್ತೊಂದು ಎಲೆಕ್ಷನ್‌ಗೆ ರಣಕಹಳೆ ಊದಿದ ಬಿಜೆಪಿ

Published : Jan 03, 2021, 06:34 PM ISTUpdated : Jan 03, 2021, 06:42 PM IST
ಗ್ರಾಮ ಪಂಚಾಯಿತಿ ಆಯ್ತು ಇದೀಗ ಮತ್ತೊಂದು ಎಲೆಕ್ಷನ್‌ಗೆ ರಣಕಹಳೆ ಊದಿದ ಬಿಜೆಪಿ

ಸಾರಾಂಶ

ಗ್ರಾಮ ಪಂಚಾಯಿತಿ ಚುನಾವನೆ ಮುಗಿಯುತ್ತಿದ್ದಂತೆಯೇ ಇದೀಗ ಬಿಜೆಪಿ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ರಣಕಹಳೆ ಊದಿದೆ.

ಶಿವಮೊಗ್ಗ, (ಜ.03): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 140ರಿಂದ 150 ಸೀಟುಗಳನ್ನು ಗೆಲ್ಲಲು ಬಿಜೆಪಿ ಪ್ಲಾನ್ ಮಾಡಿದೆ. ಈ ಹಿನ್ನೆಲೆಯಲ್ಲಿ ಇದಕ್ಕಾಗಿ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆ ನಡೆಸಿದೆ.

ಹೌದು... ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಮಾಡಿತ್ತು. ಇದೀಗ  ರಾಜ್ಯದಲ್ಲಿ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಜನವರಿ 11, 12 ಮತ್ತು 13 ರಂದು ಜನಸೇವಕ ಯಾತ್ರೆ ನಡೆಸಲು ಬಿಜೆಪಿ ತೀರ್ಮಾನ ಮಾಡಿದೆ.

ಯಡಿಯೂರಪ್ಪನವರ ಮುಂದಿನ ಗುರಿ ಏನು? ಕಾರ್ಯಕಾರಣಿ ಸಭೆಯಲ್ಲಿ ಬಹಿರಂಗ..!

ಒಟ್ಟು ಐದು ತಂಡಗಳಲ್ಲಿ ಮೂವತ್ತು ಜಿಲ್ಲೆಗಳಲ್ಲಿ ಜನಸೇವಕ ಯಾತ್ರೆ ನಡೆಯಲಿದೆ. ಮತ್ತೆ ಸಚಿವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿಯನ್ನ ಬಿಜೆಪಿ ವಹಿಸಿದೆ. ಮೊದಲ ತಂಡದ ನೇತೃತ್ವವನ್ನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಹಿಸಿಕೊಂಡಿದ್ದರೆ, ಎರಡನೇ ತಂಡದ ನೇತೃತ್ವವನ್ನ ಸಚಿವ ಕೆ.ಎಸ್. ಈಶ್ವರಪ್ಪ ಹೆಗಲಿಗೆ ನೀಡಲಾಗಿದೆ.

ಮೂರನೇ ತಂಡದ ನೇತೃತ್ವವನ್ನು ಡಿಸಿಎಂ ಗೋವಿಂದ ಕಾರಜೋಳ ವಹಿಸಿಕೊಂಡಿದ್ದು, ನಾಲ್ಕನೇ ತಂಡದ ನೇತೃತ್ವ ಸಚಿವ ಜಗದೀಶ್ ಶೆಟ್ಟರ್ ಹೊರಲ್ಲಿದ್ದಾರೆ. ಹಾಗೂ ಐದನೇ ತಂಡದ ನೇತೃತ್ವವನ್ನು ಡಿಸಿಎಂ‌ ಡಾ. ಅಶ್ವಥ್ ನಾರಾಯಣ ವಹಿಸಿಕೊಂಡಿದ್ದರೆ. ಜೊತೆಗೆ ಹಲವು ಸಚಿವರನ್ನು ಜನ ಸೇವಕ ಯಾತ್ರೆಯ ತಂಡದಲ್ಲಿ ಸೇರಿಸಿಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!