ಕರ್ನಾಟಕ ಬಿಜೆಪಿಯ ಮತ್ತಿಬ್ಬರು ಶಾಸಕರುಗಳಿಗೆ ಕೊರೋನಾ ದೃಢ

Published : Sep 30, 2020, 03:56 PM ISTUpdated : Sep 30, 2020, 03:57 PM IST
ಕರ್ನಾಟಕ ಬಿಜೆಪಿಯ ಮತ್ತಿಬ್ಬರು ಶಾಸಕರುಗಳಿಗೆ ಕೊರೋನಾ ದೃಢ

ಸಾರಾಂಶ

ಇಷ್ಟು ದಿನ ಜನ ಸಾಮಾನ್ಯರನ್ನು ಕಾಡುತ್ತಿದ್ದ ಮಹಾಮಾರಿ ಕೊರೋನಾ ಇದೀಗ ರಾಜಕೀಯ ನಾಯಕರ ಬೆನ್ನುಬಿದ್ದಿದ್ದು, ಇದೀಗ ಇಬ್ಬರು ಶಾಸಕರುಗಳಿಗೆ ಸೋಂಕು ತಗುಲಿದೆ.

ಬೆಂಗಳೂರು, (ಸೆ.30): ಕರ್ನಾಟಕದ ಇಬ್ಬರು ಬಿಜೆಪಿ ಶಾಸಕರುಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ನವಲಗುಂದ ಶಾಸಕ ಪಾಟೀಲ ಮುನೇನಕೊಪ್ಪ ಹಾಗೂ ಬಸವನಗುಡಿ ಬಿಜೆಪಿ ಶಾಸಕ ರವಿ ಸುಬ್ರಮಣ್ಯ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಭಾನುವಾರ ಪರೀಕ್ಷೆಗೆ ಒಳಗಾಗಿದ್ದ ಶಾಸಕ ರವಿ ಸುಬ್ರಮಣ್ಯ ಅವರ ವರದಿ ಮಂಗಳವಾರ ಬಂದಿದ್ದು, ಆ ಮಾಹಿತಿಯನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅವರು ಶನಿವಾರ ನಡೆದ ವಿಧಾನಸಭೆ ಅಧಿವೇಶನದಲ್ಲಿ ಭಾಗವಹಿಸಿದ್ದರು. ಇದರಿಂದಾಗಿ ಅಧಿವೇಶನದಲ್ಲಿ ಅವರೊಂದಿಗೆ ಸಂಪರ್ಕಕ್ಕೆ ಬಂದಿದ್ದವರು ಕೂಡ ಕೋವಿಡ್ ತಪಾಸಣೆಗೆ ಒಳಗಾಗಿ ಪ್ರತ್ಯೇಕವಾಗಿರಬೇಕಿದೆ. ಇತ್ತೀಚೆಗೆ ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಪರೀಕ್ಷೆ ಮಾಡಿಸಿಕೊಂಡು ಆರೋಗ್ಯದ ಬಗ್ಗೆ ನಿಗಾ ವಹಿಸುವಂತೆ ಅವರು ಮನವಿ ಮಾಡಿದ್ದಾರೆ.

10ನೇ ಬಾರಿ ಪರೀಕ್ಷೆಯಲ್ಲಿ ರೇಣುಕಾಚಾರ್ಯಗೆ ಕೊರೋನಾ ಶಾಕ್, ಆಸ್ಪತ್ರೆಗೆ ದಾಖಲು

ನವಲಗುಂದ ಶಾಸಕ
ಕಳೆದ‌ ನಾಲ್ಕೈದು ದಿನಗಳಿಂದ ಬೆಂಗಳೂರಲ್ಲೇ ಇದ್ದರು. ಆರೋಗ್ಯದಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದರಿಂದ ಅಪೋಲೋ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿಕೊಂಡಾಗ ಕೊರೋನಾ ದೃಢಪಟ್ಟಿದೆ.

ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಹುಷಾರಾಗಿದ್ದೇನೆ. ನನ್ನ ಸಂಪರ್ಕದಲ್ಲಿ ಬಂದಿರುವವರು ಕೊರೋನಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಕೋರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ಬಂದಿರುವುದನ್ನು ಶಾಸಕರು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?
ಸಿಎಂ ಪುತ್ರ ಯತೀಂದ್ರ ಹೇಳಿಕೆ ವಿವಾದ; ಬೆಳಗಾವಿಯಲ್ಲಿ ಡಿಕೆಶಿ ಅಲರ್ಟ್, ಆಪ್ತರ ಲಂಚ್ ಮೀಟಿಂಗ್!