ಡಿ.ಕೆ. ಶಿವಕುಮಾರ್ ಭೇಟಿ ಬೆನ್ನಲ್ಲೇ SM ಕೃಷ್ಣರನ್ನ ಭೇಟಿಯಾದ ಯಡಿಯೂರಪ್ಪ

Published : Jan 02, 2019, 10:32 PM IST
ಡಿ.ಕೆ. ಶಿವಕುಮಾರ್ ಭೇಟಿ ಬೆನ್ನಲ್ಲೇ SM ಕೃಷ್ಣರನ್ನ ಭೇಟಿಯಾದ ಯಡಿಯೂರಪ್ಪ

ಸಾರಾಂಶ

ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ನಿನ್ನೆ [ಮಂಗಳವಾರ] ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನ ಭೇಟಿ ಮಾಡಿದ ಬೆನ್ನಲ್ಲೇ ಇಂದು ಬಿ.ಎಸ್. ಯಡಿಯೂರಪ್ಪ ಅವರು ಎಸ್ ಎಮ್ ಕೆ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರು, [ಜ.02]: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗಿನಿಂದ ರಾಜಕೀಯವಾಗಿ ಮೂಲೆ ಗುಂಪಾಗಿರುವ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನ ಇದೀಗ ರಾಜ್ಯ ನಾಯಕರು ಒಬ್ಬೊಬ್ಬರಾಗಿ ಭೇಟಿ ಮಾಡುತ್ತಿದ್ದಾರೆ.

ಇದಕ್ಕೆ ಪೂರಕವೆಂಬಂತೆ ನಿನ್ನೆ ಅಷ್ಟೇ ಹೊಸ ವರ್ಷ ದಿನದಂದು ಸಚಿವ ಡಿ.ಕೆ ಶಿವಕುಮಾರ್ ಅವರು ಎಸ್​.ಎಂ.ಕೃಷ್ಣ ಅವರ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಸರದಿ.

ರಾಜಕೀಯ ಗುರು ಎಸ್‌ಎಂ ಕೃಷ್ಣ ಭೇಟಿ ಮಾಡಿದ ಡಿಕೆಶಿ...ಕಾರಣ?

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಅವರ ಸೂಚನೆಯಂತೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಎಸ್​.ಎಂ.ಕೃಷ್ಣ ಅವರ ನಿವಾಸಕ್ಕೆ ಬುಧವಾರ ಬಿ.ಎಸ್​.ಯಡಿಯೂರಪ್ಪ ಭೇಟಿ ನೀಡಿದ್ದು, ಹೊಸ ವರ್ಷದ ಶುಭಾಶಗಳನ್ನ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ಲೋಕಸಭಾ ಚುನಾವಣೆ ಸಿದ್ಧತೆ ಕುರಿತು ಚರ್ಚೆ ನಡೆಸಿದ್ದು, ಚುನಾವಣಾ ಪ್ರಚಾರದಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುವಂತೆ ಕೃಷ್ಣರಿಗೆ ಬಿಎಸ್​ವೈ ಮನವಿ ‌ಮಾಡಿದ್ದಾರೆ ಎನ್ನಲಾಗಿದೆ.

ಬಿಎಸ್ ವೈ ಮನವಿಗೆ ಸ್ಪಂದಿಸಿರುವ ಕೃಷ್ಣ ಅವರು ಕೆಲವು ಕ್ಷೇತ್ರಗಳಲ್ಲಿ ಬಿಜೆಪಿ ಪರ ಪ್ರಚಾರ ಮಾಡಲು ಸಮ್ಮತಿಸಿದ್ದಾರೆ. 

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್​.ಎಂ.ಕೃಷ್ಣ, ತಾವಾಗಲಿ ತಮ್ಮ ಮಗಳು ಶಾಂಭವಿಯಾಗಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದ ಪರ ಪ್ರಚಾರಕ್ಕೆ ಸೀಮಿತರಾಗುವುದಾಗಿ ಸ್ಪಷ್ಟನೆ ನೀಡಿದರು.

ಒಟ್ಟಿನಲ್ಲಿ ಇಷ್ಟು ದಿನ ಪಕ್ಷದಲ್ಲಿದ್ರೂ ಕ್ಯಾರೆ ಎನ್ನದ ರಾಜ್ಯ ಬಿಜೆಪಿಗೆ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಎಸ್.ಎಂ. ಕೃಷ್ಣ ನೆನಪಾಗಿದ್ದಾರೆ ಎಂದು ಅವರ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ