
ತುಮಕೂರು, (ನ.08): ಸಿದ್ದರಾಮಯ್ಯ ಶಿರಾ ಮತ್ತು ಡಿ.ಕೆ. ಶಿವಕುಮಾರ್ ಆರ್.ಆರ್. ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡಿದ್ದರು. ಡಿ.ಕೆ.ಶಿವಕುಮಾರ್, ಶಿರಾದಲ್ಲಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳುವುದಕ್ಕಿಂತ ಸೋಲಿಸುವುದು ಹೇಗೆ ಎನ್ನುವ ಬಗ್ಗೆ ಹೆಚ್ಚು ತಲೆಬಿಸಿ ಮಾಡಿಕೊಂಡಿದ್ದರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಾಂಬ್ ಸಿಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಅನ್ನು ಸೋಲಿಸುವುದು ಹೇಗೆ ಎನ್ನುವ ಬಗ್ಗೆ ಯೋಚಿಸುತ್ತಿದ್ದರು. ಹೀಗೆ ಕಾಂಗ್ರೆಸ್ನ ಒಳಜಗಳ ಸಹ ಬಿಜೆಪಿಗೆ ಈ ಉಪಚುನಾವಣೆಯಲ್ಲಿ ಅನುಕೂಲವಾಗಿದೆ ಎಂದರು.
'ಚುನಾವಣೆ ಸಮೀಕ್ಷೆಗಳು ಉಲ್ಟಾ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ'
.ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ನಲ್ಲಿ ಕಳೆದು ಹೋಗುವ ಭಯ ಇದೆ. ಈ ಉಪಚುನಾವಣೆಯ ಫಲಿತಾಂಶ ಕಾಂಗ್ರೆಸ್ನ ಬೀದಿ ಜಗಳವನ್ನು ಮತ್ತಷ್ಟು ಬೀದಿಗೆ ತರಲಿದೆ. ಶಿರಾದಲ್ಲಿ 25 ಸಾವಿರಕ್ಕಿಂತ ಹೆಚ್ಚು ಮತಗಳು ಹಾಗೂ ಆರ್.ಆರ್.ನಗರದಲ್ಲಿ 40 ಸಾವಿರ ಮತಗಳಿಂದ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸೋತಿದ್ದೇವೆ ಮತ್ತು ಸೋಲಿನ ಭಯ ಉಂಟಾದಾಗ ಕಾಂಗ್ರೆಸ್ ನಾಯಕರು ಇವಿಎಂ ಸರಿ ಇಲ್ಲ ಎಂದು ದೂರುವರು. ಅನುಮಾನ ವ್ಯಕ್ತಪಡಿಸುವರು. ನಮ್ಮ ಕೈಯಲ್ಲಿಯೇ ಇವಿಎಂ ಇದ್ದಿದ್ದರೆ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಗೆಲ್ಲಲು ಬಿಡುತ್ತಿದ್ದೇವಾ. ಕಾಂಗ್ರೆಸ್ ನಾಯಕರ ಈ ಆರೋಪ ಮತದಾರರಿಗೆ ಮಾಡುವ ಅವಮಾನ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.