ಕ್ಷೇತ್ರಕ್ಕೆ ಅನ್ಯಾಯ: ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಶಾಸಕ

Published : Mar 09, 2021, 10:31 PM ISTUpdated : Mar 09, 2021, 10:36 PM IST
ಕ್ಷೇತ್ರಕ್ಕೆ ಅನ್ಯಾಯ: ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಶಾಸಕ

ಸಾರಾಂಶ

ಬಿಜೆಪಿಗೆ ಹತ್ತಿರವಾಗುತ್ತಿದ್ದ ಬೇರೆ ಪಕ್ಷದ ಶಾಸಕರೊಬ್ಬರು ಕ್ಷೇತ್ರಕ್ಕೆ ಅನುದಾನದ ವಿಚಾರದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದಿದ್ದಾರೆ.

ಚಾಮರಾಜನಗರ, (ಮಾ.09): ಬಿಎಸ್‌ಪಿಯಿಂದ ಉಚ್ಛಾಟನೆಗೊಂಡ ಶಾಸಕ ಎನ್.ಮಹೇಶ್ ಅವರು ಬಿಜೆಪಿ ಸೇರುತ್ತಾರೆ ಎನ್ನುವ ಮಾತುಗಳಿವೆ ಕೇಳಿಬರುತ್ತಿವೆ. 

ಇದಕ್ಕೆ ಪೂರಕವೆಂಬಂತೆ ಗಾಗಲೇ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ಜೊತೆ ಮೊದಲ ಹಂತದ ಮಾತುಕತೆಗಳು ಮುಗಿದಿದ್ದು, ಬಿಜೆಪಿ ಸೇರ್ಪಡೆಗೆ ಮಹೇಶ್ ತಯಾರಿ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಆದ್ರೆ, ಇದೀಗ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮೇಲೆ ಎನ್‌. ಮಹೇಶ್ ಗರಂ ಆಗಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಹಿರಂಗ ಹೇಳಿಕೆ: ಮತ್ತೋರ್ವ ಶಾಸಕ ಬಿಜೆಪಿ ಸೇರುವುದು ಫಿಕ್ಸ್

ಈ ಸಾಲಿನ ಬಜೆಟ್ ಚಾಮರಾಜನಗರ ಜಿಲ್ಲೆಗೆ ಸಂಬಂಧಪಟ್ಟಂತೆ ಬಹಳ ನಿರಾಶಾದಾಯಕ. ಕಳೆದ ಮೂರು ವರ್ಷಗಳ ಬಜೆಟ್​ನಲ್ಲಿ ನಾವು ಕೇಳಿದ ಯಾವ ಅನುದಾನವನ್ನೂ ನೀಡಿಲ್ಲ ಎಂದು ಮಹೇಶ್ ಬೇಸರಗೊಂಡಿದ್ದಾರೆ.

ಚಾಮರಾಜನಗರ ಹಿಂದುಳಿದ ಜಿಲ್ಲೆ ಎಂದು ಜನರು ಮಾತನಾಡುತ್ತಿರುವುದು ಇದಕ್ಕೇ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಘೋಷಣೆ ಮಾಡಿಲ್ಲ. ಈ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತುವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ