Karnataka By Election 2026: ಬಾಗಲಕೋಟೆಗೆ ಸತೀಶ್‌, ದಾವಣಗೆರೆಗೆ ಲಕ್ಷ್ಮಿ ಉಸ್ತುವಾರಿ, ಎರಡೂ ಕ್ಷೇತ್ರಗಳಿಗೆ ಸ್ಟಾರ್ ಪ್ರಚಾರಕ ಯಾರು?

Kannadaprabha News   | Kannada Prabha
Published : Mar 27, 2026, 08:46 AM IST
Karnataka By Elections 2026

ಸಾರಾಂಶ

Karnataka By Elections ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್, ಬೆಳಗಾವಿಯ ಪ್ರಭಾವಿ ನಾಯಕರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಲಕ್ಷ್ಮಣ ಸವದಿಗೆ ಮಹತ್ವದ ಜವಾಬ್ದಾರಿ ನೀಡಿದೆ.

ಬೆಳಗಾವಿ: ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಉಪ ಚುನಾವಣೆಯ ಕಾವು ಜೋರಾಗಿದೆ. ಇದರ ನಡುವೆಯೇ ಕಾಂಗ್ರೆಸ್ ಹೈಕಮಾಂಡ್ ಈಗ ಉಪ ಕದನ ಏರ್ಪಟ್ಟಿರುವ ಬಾಗಲಕೋಟೆ ಮತ್ತು ದಾವಣಗೆರೆ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಗಡಿ ಜಿಲ್ಲೆಯ ಮೂವರು ಪ್ರಭಾವಿ ನಾಯಕರಿಗೆ ಮಹತ್ವದ ಜವಾಬ್ದಾರಿಗಳನ್ನು ನೀಡಿದೆ. 

ಬಾಗಲಕೋಟೆಗೆ ಸಚಿವ ಸತೀಶ್‌ ಜಾರಕಿಹೊಳಿಗೆ ಸಂಪೂರ್ಣ ಹೊಣೆಗಾರಿಕೆ ನೀಡಲಾಗಿದೆ. ಇನ್ನೊಂದೆಡೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಜವಾಬ್ದಾರಿಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೆಗಲಿಗೆ ಹೊರಿಸಲಾಗಿದೆ. ಇದರ ನಡುವೆ ಇವೆರಡೂ ಕ್ಷೇತ್ರಗಳಲ್ಲಿ ಸ್ಟಾರ್ ಪ್ರಚಾರಕರಾಗಿ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರನ್ನು ನಿಯೋಜಿಸಲಾಗಿದೆ.

ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟವಾಗಿ ಎರಡು ಪ್ರಮುಖ ಸಮೀಕರಣಗಳ ಮೇಲೆ ಗಮನ ಹರಿಸಿದೆ. ಲಿಂಗಾಯತ ಸಮುದಾಯದ ಮತಗಳನ್ನು ಸೆಳೆಯಲು ಸವದಿ, ಅಹಿಂದ ಸಮೀಕರಣವನ್ನು ಗಟ್ಟಿಗೊಳಿಸಲು ಜಾರಕಿಹೊಳಿ, ಹೆಬ್ಬಾಳ್ಕರ್‌ ಕಾರ್ಯತಂತ್ರ ರೂಪಿಸಲಿದ್ದಾರೆ.

ಸಿದ್ದಾರೆ. ಇವೆರಡರ ಸಮನ್ವಯವೇ ಗೆಲುವಿನ ದಿಕ್ಕು ನಿರ್ಧರಿಸುವ ಪ್ರಮುಖ ಅಂಶವಾಗಲಿದೆ ಎನ್ನಲಾಗಿದೆ.

ಆದರೆ, ಕಾಂಗ್ರೆಸ್‌ಗೆ ಬಾಗಲಕೋಟೆಗಿಂದ ದಾವಣಗೆರೆಯೇ ದೊಡ್ಡ ಸವಾಲಾಗಿದೆ. ಸ್ಥಳೀಯ ಮಟ್ಟದಲ್ಲಿ ಗುಂಪು ರಾಜಕೀಯ, ಅಭ್ಯರ್ಥಿ ಆಯ್ಕೆ ಕುರಿತ ಅಸಮಾಧಾನ ಮತ್ತು ವಿರೋಧ ಪಕ್ಷಗಳ ಆಕ್ರಮಣಕಾರಿ ಪ್ರಚಾರ ಈ ಕದನವನ್ನು ಇನ್ನಷ್ಟು ಕಠಿಣಗೊಳಿಸಿದೆ. ವಿಶೇಷವಾಗಿ, ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್‌ನಿಂದ ಬಂಡಾಯವಾಗಿ ಸ್ಪರ್ಧೆ ಮಾಡಿರುವುದೇ ದೊಡ್ಡ ಸವಾಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ನಾಯಕರ ಸಂಘಟನಾ ಸಾಮರ್ಥ್ಯ ಮತ್ತು ಸಮನ್ವಯ ಕೌಶಲ್ಯ ಪ್ರಮುಖ ಅಂಶವಾಗಲಿದೆ.

ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳು ಕೇವಲ ಕ್ಷೇತ್ರಗಳ ಗೆಲುವಿಗೆ ಸೀಮಿತವಾಗದೇ, ಬೆಳಗಾವಿ ಜಿಲ್ಲೆಯ ನಾಯಕರ ರಾಜಕೀಯ ಪ್ರಭಾವವನ್ನು ಪರೀಕ್ಷಿಸುವ ವೇದಿಕೆಯಾಗಿದೆ. ಈ ಕದನದಲ್ಲಿ ಕಾಂಗ್ರೆಸ್ ಸಾಧಿಸುವ ಫಲಿತಾಂಶ ಮುಂದಿನ ರಾಜಕೀಯ ತಂತ್ರಗಳಿಗೆ ದಿಕ್ಸೂಚಿಯಾಗಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಉತ್ತರ ಕೊಡಲು ಡಿಸಿಎಂಗೆ ತಾಕತ್‌ ಇಲ್ಲ: ಮುನಿರತ್ನ, ನಿನ್ನಂತಹ ಪುಡಿ ರೌಡಿಗೆ ನಾನು ಹೆದರಲ್ಲ ಎಂದ ಡಿಕೆಶಿ !
ದಾವಣಗೆರೆಯಲ್ಲಿ ಕಾಂಗ್ರೆಸ್‌ಗೆ ಬಂಡಾಯ ಬಿಸಿ