ವಿಡಿಯೋ ವೈರಲ್ ಬಿಸಿಯ ನಡುವೆ ಸಿದ್ದರಾಮಯ್ಯ-ಹೆಬ್ಬಾಳ್ಕರ್ ಗಂಭೀರ ಚರ್ಚೆ

Published : Oct 30, 2019, 12:00 AM ISTUpdated : Oct 30, 2019, 12:06 AM IST
ವಿಡಿಯೋ ವೈರಲ್ ಬಿಸಿಯ ನಡುವೆ ಸಿದ್ದರಾಮಯ್ಯ-ಹೆಬ್ಬಾಳ್ಕರ್ ಗಂಭೀರ ಚರ್ಚೆ

ಸಾರಾಂಶ

ಸಿದ್ದರಾಂಯ್ಯ ಮತ್ತು ಬೆಳಗಾವಿ ಮುಖಂಡರ ಮಾತುಕತೆ/ ಉಪಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ/ ಲಕ್ಷ್ಮೀ ಹೆಬ್ಬಾಳ್ಕರ್ ಅವರೊಂದಿಗೂ ಮಾತುಕತೆ/ ನನ್ನ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದ ಸಿದ್ದರಾಮಯ್ಯ

ಬೆಳಗಾವಿ[ಅ. 29] ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ  ಹೆಬ್ಬಾಳ್ಕರ್ ಚರ್ಚೆ ನಡೆಸಿದ್ದಾರೆ.  ಶಾಸಕಿ ಹೆಬ್ಬಾಳ್ಕರ್ ಗೆ  ಅವರೊಂದಿಗೆ ಬುಡಾ ಮಾಜಿ ಅಧ್ಯಕ್ಷ ಯುವರಾಜ್ ಕದಂ ಇದ್ದರು.

ಉಪಚುನಾವಣೆ ಎದುರಿಸುವ ಬಗ್ಗೆ ಮಾಹಿತಿ ಪಡೆಯುತ್ತಿರುವ ಸಿದ್ದರಾಮಯ್ಯ ಅನೇಕ ವಿಚಾರಗಳ ಚರ್ಚೆ ಮಾಡಿದ್ದಾರೆ. ಮಾಜಿ ಸಚಿವರಾದ ಎಂ. ಬಿ.ಪಾಟೀಲ, ವೀರಕುಮಾರ ಪಾಟೀಲ, ಮಾಜಿ ಶಾಸಕ ಅಶೋಕ ಪಟ್ಟಣ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಕುಮಾರಸ್ವಾಮಿ ಹೇಳಿಕೆ ಹಿಂದಿನ ಮರ್ಮವೇನು?:   ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದಕ್ಕೆ ಒಂದರ್ಥದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಜೆಡಿಎಸ್ ಪಕ್ಷದ ಕೆಲವು ಶಾಸಕರು ಪಕ್ಷ ಬಿಡುಬೇಕೆಂಬ ಚರ್ಚೆ ನಡೆಯುತ್ತಿದೆ. ಬಿಜೆಪಿ ಜತೆಗೆ ಇರುತ್ತೇವೆ ಆದರೂ ಯಾರು ಬಿಜೆಪಿಗೆ ಹೋಗಬಾರದು ಅಂತಾ ಹೇಳೊಕೆ ಈ ರೀತಿ ಮಾತನಾಡುತ್ತಿದ್ದಾರೆ ಅನ್ನಿಸುತ್ತದೆ.  ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಅಂತಾ ಹೇಳಲ್ಲ,. ಆದರೆ ಕುಮಾರಸ್ವಾಮಿ ತಮ್ಮ ಶಾಸಕರ ಮೂಗಿಗೆ ತುಪ್ಪ ಹಚ್ಚುವ ಸಲುವಾಗಿ ಆ ರೀತಿ ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಡಿಕೆಶಿ ನಿವಾಸಕ್ಕೆ ಅನರ್ಹ ಶಾಸಕ ದೌಡು

ಕುಮಾರಸ್ವಾಮಿ ರಾಜಕಾರಣಕ್ಕೋಸ್ಕರ ಹೇಳುತ್ತಿದ್ದಾರೆ. ನಾನು ಸಾಮಾಜಿಕ ನ್ಯಾಯದ ಪರವಾಗಿ ಇರುವವನು. ರಾಜಕೀಯ ಕಾರಣಕ್ಕಾಗಿ ಈ ರೀತಿ ಹೇಳುತ್ತಿದ್ದಾರೆ ಹೇಳಿಕೊಳ್ಳಲಿ.  ಕೊನೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ‌.  ಸಿಎಂ‌ ಯಡಿಯೂರಪ್ಪ ಗೆ‌ ಲಿಂಗಾಯತರ ಬೆಂಬಲ, ಮಾಜಿ ಸಿಎಂ ಎಚ್‌ಡಿ‌ಕೆ ಗೆ ಒಕ್ಕಲಿಗರ ಬೆಂಬಲ ಕಮ್ಮಿಯಾಗಿದೆ ಎಂದು ವಿಡಿಯೋ ವೈರಲ್ ವಿಚಾರಕ್ಕೂ ಮಾಜಿ ಸಿಎಂ ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಸೀಕ್ರೆಟ್ ಆಗಿ ಎನೂ‌ ಮಾತಮಾಡುತ್ತಿರಲಿಲ್ಲ ಮಾಜಿ ಶಾಸಕರೊಂದಿಗೆ ಔಪಚಾರಿಕವಾಗಿ ಮಾತನಾಡುತ್ತಿದ್ದೆ.  ಅನೌಪಚಾರಿಕ ಮಾತಾಡಿದ್ದು ರೆಕಾರ್ಡ್ ಮಾಡಿಕೊಳ್ಳುವುದು ಅಪರಾಧ. ಯಾರು ರಿಕಾರ್ಡ್ ಮಾಡಿಕೊಂಡಿದ್ದರೊ ಗೊತ್ತಿಲ್ಲ.  ನಾವು ತಪ್ಪೇನು ಮಾತಾಡಿಲ್ಲ ಮಾಡಿಕೊಳ್ಳಲಿ. 

ಕಳೆದ ಚುನಾವಣೆ ವೇಳೆ ಸಿದ್ದರಾಮಯ್ಯ ಹಿಂದು ಧರ್ಮ ಒಡೆಯುತ್ತಾನೆ, ಲಿಂಗಾಯತ ಧರ್ಮ ಡಿವೈಡ್ ಮಾಡ್ತಾನೆ ಅಂತಾ ಅಪಪ್ರಚಾರ ಮಾಡಿದ್ದರು.  ಹಳೆ ಮೈಸೂರಿನಲ್ಲಿ ಸಿದ್ದರಾಮಯ್ಯ ಒಕ್ಕಲಿಗರ ವಿರುದ್ಧ ಇದಾನೇ ಅಂತಾ ಅಪಪ್ರಚಾರ ಮಾಡಿದ್ದರು. ಈ ಸಾರಿ ಜನರಿಗೆ ಗೊತ್ತಾಗಿದೆ ಜನರು ಬದಲಾವಣೆ ಆಗಿದ್ದಾರೆ ಅಂತಾ ಮಾತಾಡಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಇದನ್ನ ಪಕ್ಷದ ಮುಖಂಡರು ಉಪಯೋಗಿಸಿಕೊಳ್ಳಬೇಕೆಂದು ಹೇಳಿದ್ದೇನೆ. ಈ ವಿಚಾರಕ್ಕೂ ಡಿಕೆ ಶಿವಕುಮಾರ್ ವಿಚಾರಕ್ಕೂ ಸಂಬಂಧವಿಲ್ಲ. ಅನರ್ಹರ ಕುರಿತು ಸುಪ್ರೀಂ ಕೋರ್ಟ್ ನಲ್ಲಿ ವಾದ ಮಂಡನೆಯಾಗಿದೆ. ತೀರ್ಪು ಏನು ಬರುತ್ತೆ ಅಂತಾ ಕಾದು ನೋಡೋಣ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ