
ಬೆಂಗಳೂರು(ಅ. 01) ಬಿಜೆಪಿ ಕೋರ್ ಕಮೀಟಿ ಸಭೆ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಎರಡು ಆಕಾಂಕ್ಷಿಗಳ ಹೆಸರನ್ನು ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ರವಾನೆ ಮಾಡಲಾಗಿದೆ.
ಆರ್ ಆರ್ ನಗರಕ್ಕೆರ ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ಹೆಸರು ರವಾನೆ ಮಾಡಲಾಗಿದೆ. ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವೂ ಚರ್ಚೆ ಆಗಿದೆ. ಕ್ಷೇತ್ರದ ಪರಿಸ್ಥಿತಿ ಮತ್ತು ಸಂಭಾವ್ಯ ಅಭ್ಯರ್ಥಿಗಳ ವಿಚಾರವಾಗಿ ವರದಿ ನೀಡುವಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಗೆ ತಿಳಿಸಲಾಗಿದೆ
ದೋಸ್ತಿ ಸರ್ಕಾರ ಕೆಡವಿದ್ದು ಯಾರು? ಕೊನೆಗೂ 'ಕುಮಾರ' ಉತ್ತರ
ಶಿರಾ ಕ್ಷೇತ್ರಕ್ಕೆ ಮೂರು ಆಕಾಂಕ್ಷಿಗಳ ಹೆಸರನ್ನು ಅಂತಿಮ ಮಾಡಲಾಗಿದೆ. ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ರವಾನೆ ಮಾಡಲಾಗಿದೆ. ಎಸ್.ಆರ್. ಗೌಡ, ಬಿ.ಕೆ. ಮಂಜುನಾಥ್ ಮತ್ತು ರಾಜೇಶ್ ಗೌಡ ಹೆಸರನ್ನು ಕಳುಹಿಸಿ ಕೊಡಲಾಗಿದೆ.
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ಎನ್ ಐಎ ತನಿಖೆಗೆ ಒಪ್ಪಿಸುವ ಸಂಬಂಧ ರಾಜ್ಯ ಸರ್ಕಾರ ಕ್ರಮ ವಹಿಸಬೇಕು. ಎಸ್ ಡಿಪಿಐ ನಿಷೇಧ ಸಂಬಂಧ ರಾಜ್ಯ ಸರ್ಕಾರ ಕಾನೂನಾತ್ಮಕ ಕ್ರಮಗಳತ್ತ ಗಮನ ಹರಿಸಬೇಕು ಎಂಬ ಆಗ್ರಹ ಸಹ ಕೋರ್ ಕಮೀಟಿ ಸಭೆಯಲ್ಲಿ ಕೇಳಿ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.