ಬೈ ಎಲೆಕ್ಷನ್ ಫಸ್ಟ್ ರಿಸಲ್ಟ್ ಔಟ್: ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಅರಳಿದ ಕಮಲ

Published : Dec 09, 2019, 10:19 AM ISTUpdated : Dec 09, 2019, 10:31 AM IST
ಬೈ ಎಲೆಕ್ಷನ್ ಫಸ್ಟ್ ರಿಸಲ್ಟ್ ಔಟ್: ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಅರಳಿದ ಕಮಲ

ಸಾರಾಂಶ

15 ಕ್ಷೇತ್ರಗಳ ಉಪಚುನಾವಣೆಯ ಒಂದು ಕ್ಷೇತ್ರದ ರಿಸಲ್ಟ್ ಹೊರಬಿದ್ದಿದೆ. ಕಾಂಗ್ರೆಸ್ ಭದ್ರಕೋಟೆಯಲ್ಲಿ ಕಮಲ ಅರಳಿದ್ದು, ಬಿಜೆಪಿಗೆ ಮೊದಲು ಜಯ ಸಿಕ್ಕಿದೆ.

ಕಾರವಾರ, (ಡಿ.09): ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಭರ್ಜರಿ ಜಯಗಳಿಸಿದ್ದಾರೆ.

ಆರಂಭದಿಂದಲು ಮುನ್ನಡೆ ಕಾಯ್ದುಕೊಂಡಿರುವ ಹೆಬ್ಬಾರ್, ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಅವರನ್ನು 31606 ಮತಗಳ ಅಂತರದಿಂದ ಮಣಿಸಿ ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದರು. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.

LIVE: ಮತ ಎಣಿಕೆ ಆರಂಭ, ಬಿಜೆಪಿಯದ್ದೇ ಪಾರಮ್ಯ

ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಶಿವರಾಮ್ ಹೆಬ್ಬಾರ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರೆ,  ಕಾಂಗ್ರೆಸ್‌ನಿಂದ ಭೀಮಣ್ಣ ನಾಯ್ಕ್ ಕಣದಲ್ಲಿದ್ದರು. ಜೆಡಿಎಸ್‌ ಚೈತ್ರಾ ಗೌಡರನ್ನು ಕಣಕ್ಕಿಳಿಸಿತ್ತು.

ಡಿ.05ರಂದು ನಡೆದ ಉಪಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಲ್ಲಿ 77.53% ಮತದಾನವಾಗಿತ್ತು.

ಪಂಪನ ನಾಡಿನ ಮರಿದುಂಬಿ ಯಾರು? ಬಿಜೆಪಿ, ಕಾಂಗ್ರೆಸ್‌ ಮಧ್ಯೆ ನೇರ ಪೈಪೋಟಿ

2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶಿವರಾಮ್ ಹೆಬ್ಬಾರ್ 66290 ಮತಗಳನ್ನು ಪಡೆಯುವ ಮೂಲಕ ಗೆಲುವು ಸಾಧಿಸಿದ್ದರೆ,  ಬಿಜೆಪಿಯ ವೀರಭದ್ರ ಪಾಟೀಲ್ 64807 ಮತಗಳನ್ನು ಪಡೆದಿದ್ದರು. ಜೆಡಿಎಸ್‌ನ ರವೀಂದ್ರ ನಾಯ್ಕ್ 6224 ಮತಗಳನ್ನು ಪಡೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ