
ಬೆಂಗಳೂರು(ಅ. 02) ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಹನುಮಂತರಾಯಪ್ಪ ಪುತ್ರಿ ಕಾಂಗ್ರೆಸ್ ಗೆ ಬರೋದು ಪಕ್ಕಾ ಆಗಿದೆ.
ಐಎಎಸ್ ಅಧಿಕಾರಿ ಡಿಕೆ.ರವಿ ಪತ್ನಿ ಕುಸುಮಾರನ್ನು ಕಾಂಗ್ರೆಸ್ ಕರೆತರಲು ಮಾತುಕತೆ ಅಂತ್ಯವಾಗಿದೆ. ಹಿರಿಯ ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆ ಸಫಲವಾಗಿದೆ.
ಹನುಮಂತರಾಯಪ್ಪ ಜೊತೆಗೆ ರಮೇಶ್ ಕುಮಾರ್ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಚುನಾವಣಾ ರಾಜಕಾರಣಕ್ಕೆ ಸೈ ಎಂದಿರುವ ಡಿ.ಕೆ.ರವಿ ಪತ್ನಿ ಕುಸುಮಾ ಆರ್ ಆರ್ ನಗರದಿಂದ ಸ್ಪರ್ಧೆ ಮಾಡುವುದು ನಿಚ್ಚಳವಾಗಿದೆ.
ಆರ್ ಆರ್ ನಗರಕ್ಕೆ ಮುನಿರತ್ನ ಜತೆಗೆ ಬಿಜೆಪಿಯಿಂದ ಮತ್ತೊಂದು ಹೆಸರು
ರಮೇಶ್ ಕುಮಾರ್ ನಿವಾಸದಲ್ಲಿ ನಡೆದ ಮಾತುಕತೆ ಬಳಿಕ ಸಿದ್ಧರಾಮಯ್ಯ ಅವರನ್ನು ಹನುಮಂತರಾಯಪ್ಪಭೇಟಿ ಮಾಡಿದ್ದಾರೆ. ಹನುಮಂತರಾಯಪ್ಪರನ್ನು ಸಿದ್ಧರಾಮಯ್ಯ ನಿವಾಸಕ್ಕೆ ರಮೇಶ್ ಕುಮಾರ್ ಕರೆದುಕೊಂಡು ಬಂದಿದ್ದರು.
ವಿಧಾನಪರಿಷತ್ ಸದಸ್ಯ ನಸೀರ್ ಅಹಮದ್, ರಮೇಶ್ ಕುಮಾರ್ ಸಮ್ಮುಖದಲ್ಲಿ ಮಾತುಕತೆಯಾಗಿದೆ. R R ನಗರ ವಿಧಾನಸಭಾ ಕ್ಷೇತ್ರದ ಟಿಕೆಟ್ ಕುಸುಮಾಗೆ ನೀಡುವಂತೆ ಹನುಮಂತರಾಯಪ್ಪ ಮನವಿ ಮಾಡಿದ್ದಾರೆ. ಪಕ್ಷದಲ್ಲಿ ತಿರ್ಮಾನ ಮಾಡಿ ಹೇಳುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸೋಮವಾರ ನಡೆಯುವ ಪಕ್ಷದ ನಾಯಕರ ಸಮ್ಮುಖದಲ್ಲಿ ಕುಸುಮಾ ಕಾಂಗ್ರೆಸ್ ಸೇರ್ಪಡೆಗೆ ಪ್ಲಾನ್ ಸಿದ್ಧಮಾಡಿಕೊಂಡಿರುವ ಮಾಹಿತಿ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.