
ಬೆಂಗಳೂರು(ಅ. 23) ಆರ್ ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ತಂದೆ ಹನುಮಂತರಾಯಪ್ಪ ಕಾಂಗ್ರೆಸ್ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ್ದಾರೆ. ಬಿಜೆಪಿಯಲ್ಲಿ ಮುನಿರಾಜುಗೌಡ ಗೆ ಟಿಕೆಟ್ ನೀಡಿದ್ರೆ ಈ ಸಭೆ ನಡೆಯುತ್ತಿರಲಿಲ್ಲ. ನಮ್ಮ ಸಮುದಾಯದವರೇ ಮೂರು ಜನ ನಿಂತಿದ್ರೆ, ಯಾರು ಬೇಕಾದರೂ ಗೆಲ್ಲಲಿ ಅಂತ ಸುಮ್ಮನಾಗುತ್ತಿದ್ದೇವು ಎಂದಿದ್ದಾರೆ.
ಬಿಜೆಪಿಯಲ್ಲಿ ಮುನಿರತ್ನ ನಾಯ್ಡುಗೆ ಟಿಕೆಟ್ ಕೊಟ್ಟಿದ್ದಾರೆ. ನನ್ನ ಮಗಳನ್ನ ನಮ್ಮ ಸಮುದಾಯ ಗೆಲ್ಲಿಸಿಕೊಂಡು ಬರಬೇಕು.. ನನ್ನ ಮಗಳಿಗೆ ಸಣ್ಣ ವಯಸ್ಸಿನಲ್ಲೇ ನಡೆಯಬಾರದು ನಡೆದುಹೋಗಿದೆ. ಇಲ್ಲಿ ಎಲ್ಲರಿಂದ ಅವಮಾನ, ನಿಂದನೆಯಿಂದ ವಿದೇಶಕ್ಕೆ ಹೋಗಿ ಉನ್ನತ ವ್ಯಾಸಂಗ ಮಾಡಿದ್ದಳು. ಈಗ ನನ್ನ ಮಗಳು ಆರ್ ಆರ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾಳೆ. ಮುಂದೆ ಡಿ ಕೆ ಶಿವಕುಮಾರ್ ಸಿಎಂ ಆಗಬೇಕಾದ್ರೆ ಎರಡು ಕ್ಷೇತ್ರದಲ್ಲಿ ಗೆಲ್ಲಬೇಕು. ಈ ಸಲವಾದರೂ ನಮ್ಮ ಸಮುದಾಯ ಎಲ್ಲ ಒಗ್ಗಟ್ಟಾಗಬೇಕು ಎಂದರು.
'ಅಶೋಕಣ್ಣ, ಸಿಟಿ ರವಿಅಣ್ಣಗೆ ಪ್ರಮೋಶನ್ ಸಿಗಲಿ'
ಮುನಿರತ್ನ ಯಾವೊಬ್ಬ ಒಕ್ಕಲಿಗ ನಾಯಕನನ್ನ ಬೆಳಿಸಿಲ್ಲ. ಒಕ್ಕಲಿಗರು ಕಂಡ್ರೆ ಅವರಿಗೆ ಆಗಲ್ಲ. ನಮ್ಮ ಸಮುದಾಯದ ಮತಗಳು ಹಂಚಿ ಹೋಗಬಾರದು ಎಂದು ಮನವಿ ಮಾಡಿಕೊಂಡರು.ಡಿಕೆಶಿ ಮುಂದಿನ ಸಿಎಂಳ ಸಭೆಯಲ್ಲಿ ಮಾತನಾಡಿದ ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ಡಿಕೆ ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದು ಅದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.