Cabinet Expansion : ಸಂಪುಟ ವಿಸ್ತರಣೆ,  ಸಿಎಂ ಬೊಮ್ಮಾಯಿ ಸ್ಪಷ್ಟ ಸಂದೇಶ

Published : Dec 07, 2021, 03:58 AM IST
Cabinet Expansion : ಸಂಪುಟ ವಿಸ್ತರಣೆ,  ಸಿಎಂ ಬೊಮ್ಮಾಯಿ ಸ್ಪಷ್ಟ ಸಂದೇಶ

ಸಾರಾಂಶ

* ಬೆಳಗಾವಿ ಕಲಾಪ ಬಳಿಕ  ಸಂಪುಟ ವಿಸ್ತರಣೆ: ಸಿಎಂ * ವರಿಷ್ಠರ ಜತೆ ಚರ್ಚಿಸಿ ವಿಸ್ತರಣೆ ಬಗ್ಗೆ ತೀರ್ಮಾನ * ಸದ್ಯ ಮೇಲ್ಮನೆ ಚುನಾವಣೆ ಮೇಲೆ ನಮ್ಮ ಗಮನ * ಬಿಎಎಸ್ ಯಡಿಯೂರಪ್ಪ ಸಹ ಸುಳಿವು ಕೊಟ್ಟಿದ್ದರು

ಹುಬ್ಬಳ್ಳಿ(ಡಿ. 07)  ರಾಜ್ಯ ಬಿಜೆಪಿಯಲ್ಲಿ(Karnataka BJP) ತೀವ್ರ ಸಂಚಲನ ಮೂಡಿಸಿರುವ ಸಚಿವ ಸಂಪುಟ (Cabinet reshuffle) ವಿಸ್ತರಣೆ ಸದ್ಯಕ್ಕಿಲ್ಲ, ಅದೇನಿದ್ದರೂ ಬೆಳಗಾವಿ ಅಧಿವೇಶನದ ನಂತರದ ಪ್ರಕ್ರಿಯೆ ಎಂಬ ಸುಳಿವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನೀಡಿದ್ದಾರೆ. ಬೆಳಗಾವಿ (Belagavi) ಅಧಿವೇಶನದ ಬಳಿಕವಷ್ಟೇ ಈ ಕುರಿತು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾವು ವಿಧಾನ ಪರಿಷತ್‌ (MLC Election) ಚುನಾವಣೆ ಕುರಿತಷ್ಟೇ ಗಮನ ಕೊಡುತ್ತಿದ್ದೇವೆ. ಆ ಬಳಿಕ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಅದಾದ ನಂತರ ವರಿಷ್ಠರ ಸಲಹೆ ಪಡೆದು ಸಚಿವ ಸಂಪುಟ ವಿಸ್ತರಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಇತ್ತೀಚೆಗೆ ಸುಳಿವು ಕೊಟ್ಟಿದ್ದರು. ಸಚಿವ ಸಂಪುಟಕ್ಕೆ ಯಾರನ್ನು ತೆಗೆದುಕೊಳ್ಳಬೇಕು? ಯಾರನ್ನು ಕೈಬಿಡಬೇಕು ಎಂಬುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ತೀರ್ಮಾನಿಸಲಿದ್ದಾರೆ ಎಂದು ದಾವಣಗೆರೆಯಲ್ಲಿ ಸುದ್ದಿಗಾರರ ಜತೆ ಮಾತನಾಡುವಾಗ ಪ್ರತಿಕ್ರಿಯಿಸಿದ್ದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರು ಮೊದಲಿಗೆ 29 ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದರು. ಆ ಬಳಿಕ ಬೊಮ್ಮಾಯಿ ಅವರು ದೆಹಲಿಗೆ ಭೇಟಿ ಕೊಟ್ಟಾಗಲೆಲ್ಲ ಸಂಪುಟ ವಿಸ್ತರಣೆಯ ಮಾತುಗಳು ಕೇಳಿಬರುತ್ತಲೇ ಇದ್ದವು. ಸ್ವತಃ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಹಿರಂಗವಾಗಿಯೇ ಈ ವಿಚಾರ ಪ್ರಸ್ತಾಪಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಹೊಸ ಮುಖಗಳಿಗೆ ಆದ್ಯತೆ  ನೀಡಲಾಗುತ್ತದೆಯಾ? ಅಥವಾ ವಿಧಾನ ಪರಿಷತ್ ನಲ್ಲಿ ಗೆದ್ದವರಿಗೆ ಮೊದಲ ಸಾರಿ ಸಂಪುಟ್ ಸೇರಲು ಅವಕಾಶ  ಮಾಡಿಕೊಡಲಾಗುತ್ತದೆಯಾ  ಎಂಬ ಪ್ರಶ್ನೆಗಳು ಮೂಡಿವೆ. ಸಚಿವಸ್ಥಾನದ ರೇಸ್ ನಲ್ಲಿರುವ ಕೆಲ ಶಾಸಕರು ಈಗಾಗಲೇ ಸದ್ದಿಲ್ಲದೆ ದೆಹಲಿ ಪ್ರವಾಸವನ್ನು ನಡೆಸಿದ್ದಾರೆ.  ಹಿಂದಿನ ಕಾಂಗ್ರೆಸ್ ನಂತೆ ಈಗ ಬಿಜೆಪಿಯಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ.
 
ಜಿದ್ದಾಜಿದ್ದಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯಲ್ಲಿ ಜೆಡಿಎಸ್‌ (JDS) ಮತ್ತು ಕಾಂಗ್ರೆಸ್‌ (Congress) ಅಭ್ಯರ್ಥಿಗಳು ಮತಬೇಟೆಯಲ್ಲಿ ಜಿದ್ದಾ ಜಿದ್ದಿನ ಪೈಪೋಟಿಗಿಳಿದಿದ್ದಾರೆ. ಗ್ರಾಪಂ ಸದಸ್ಯರನ್ನೇ ಗುರಿಯಾಗಿಸಿಕೊಂಡು ಚುನಾವಣಾ (Election) ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಎರಡೂ ಪಕ್ಷಗಳು ಗೆಲುವಿಗೆ ಶತ ಪ್ರಯತ್ನ ನಡೆಸುತ್ತಿವೆ. ಜೆಡಿಎಸ್‌ , ಕಾಂಗ್ರೆಸ್‌ ಪಕ್ಷಗಳಿಗೆ ಸರಿಸಮನಾಗಿ ಪೈಪೋಟಿ ನೀಡುವುದಕ್ಕೆ ಮುಂದಾಗಿರುವ ಬಿಜೆಪಿ, ಅಬ್ಬರದ ಚುನಾವಣಾ ಪ್ರಚಾರದೊಂದಿಗೆ ಮುನ್ನಡೆಯುತ್ತಿದೆ. 

ಅಖಾಡದಲ್ಲಿ ಹಿಂದಿನವರೇ ಇದ್ದರೂ ಈ ಬಾರಿ ವರಸೆ ಮಾತ್ರ ಬದಲಾಗಿದೆ. ಕಾಂಗ್ರೆಸ್ ನ ಕೆಲ ನಾಯಕರೆ ತಮಗೆ ವಿಧಾನ ಪರಿಷತ್ ಬೇಡ ಎಂದು ಹಿಂದಕ್ಕೆ ಸರಿದಿದ್ದಾರೆ. ಬಿಜೆಪಿ ಸಹ ಅಳೆದು ತೂಗಿ ಟಿಕೆಟ್ ನೀಡಿದೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ
ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ