ಬಿಎಸ್‌ವೈ ದೆಹಲಿ ಬ್ರೇಕಿಂಗ್, ಯಾರಿಗೆಲ್ಲ ಶುಭ ಶುಕ್ರವಾರ?

Published : Jan 30, 2020, 11:32 PM ISTUpdated : Jan 31, 2020, 12:47 PM IST
ಬಿಎಸ್‌ವೈ ದೆಹಲಿ ಬ್ರೇಕಿಂಗ್, ಯಾರಿಗೆಲ್ಲ ಶುಭ ಶುಕ್ರವಾರ?

ಸಾರಾಂಶ

ಸಚಿವ ಸಂಪುಟ ವಿಸ್ತರಣೆ ವಿಚಾರ/ ಬಿಜೆಪಿ ಹಿರಿಯ ನಾಯಕರನ್ನು ಭೇಟಿ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ/ ಶುಕ್ರವಾರವೂ ನಡೆಯಲಿದೆ ಚರ್ಚೆ/ ಬಿಜೆಪಿ ಹೈಕಮಾಂಡ್ ಜತೆ ಇನ್ನೊಂದು ಸುತ್ತಿನ ಮಾತುಕತೆ

ನವದೆಹಲಿ(ಜ. 30)  ಸಚಿವ ಸಂಪುಟ ವಿಸ್ತರಣೆ ಸಂಬಂಧ ನವದೆಹಲಿಗೆ ತೆರಳಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಕೇಂದ್ರದ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾತನಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ವಿಸ್ತ್ರತ ಚರ್ಚೆ ಮಾಡಿದ್ದಾರೆ.

ಅಮಿತ್ ಶಾ ಶುಕ್ರವಾರ  ಅಂದರೆ ಜನವರಿ 31 ರಂದು ಇನ್ನೊಮ್ಮೆ ಭೇಟಿ ನೀಡಿ ಮತ್ತಷ್ಟು ವಿಚಾರಗಳನ್ನು ಚರ್ಚೆ ಮಾಡಲು ಹೇಳಿದ್ದು ಸಿಎಂ ಯಡಿಯೂರಪ್ಪ ದೆಹಲಿಯಲ್ಲೇ ವಾಸ್ತವ್ಯ ಹೂಡಿದ್ದಾರೆ.

ಅಣ್ಣ ರಮೇಶ್‌ ಗೆ ಈ ಖಾತೆ ಕೊಡದಿದ್ದರೆ ನೋಡಿ

ಉಪಚುನಾವಣೆ ಗೆಲುವಿನ ನಂತರ ರಾಜ್ಯದಲ್ಲಿ ಬಿಜೆಪಿ ಬಹುಮತ ಸರ್ಕಾರದ ಹಕ್ಕು ಸ್ಥಾಪಿಸಿದೆ. ಕಳೆದ ಒಂದೂವರೆ ತಿಂಗಳಿನಿಂದ ಸಚಿವ ಸಂಪುಟ ವಿಸ್ತರಣೆ ಚರ್ಚೆ ನಡೆಯುತ್ತಿದ್ದು ಶುಕ್ರವಾರ ಎಲ್ಲ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಿಂದ ಹೊರಬಂದಿದ್ದ 17 ಜನ ಶಾಸಕರು ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಿದ್ದರು. ಬಿಜೆಪಿ ಸೇರಿ ಗೆದ್ದಿರುವ ನೂತನ ಶಾಸಕರು ಮತ್ತು ಮೂಲ ಬಿಜೆಪಿಯ ಸಚಿವ ಆಕಾಂಕ್ಷಿಗಳಿಗೂ ಶುಕ್ರವಾರ ಶುಭ ಶುಕ್ರವಾರವಾಗುವ ಸಾಧ್ಯತೆ ಇದೆ.

ಭೈರತಿ ಮಾತು:

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿ.ಕೆ.ಶಿವಕುಮಾರ್‌ ಒಂದು ಬಾರಿ ಸಿಎಂ ಆಗೇ ಆಗುತ್ತಾರೆ: ಶಾಸಕ ಎಸ್‌.ಟಿ.ಸೋಮಶೇಖರ್‌
ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾದಂತಿದೆ ರಾಜ್ಯದ ಸ್ಥಿತಿ: ಎಂ.ಪಿ.ರೇಣುಕಾಚಾರ್ಯ ಟೀಕೆ