ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ನೀಡಬೇಕು: ಶಾಸಕ ಸಿ.ಎಸ್.ನಾಡಗೌಡ

Published : Nov 11, 2025, 10:51 AM IST
CS Nadagouda

ಸಾರಾಂಶ

ಸಂಪುಟ ಪುನಾರಚನೆ ವೇಳೆ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಜಾತಿ ಸಮೀಕ್ಷೆಯ ಆಧಾರದ ಮೇಲೆ ಲಿಂಗಾಯತ ಕೋಟಾದಡಿಯಲ್ಲಿ ನನ್ನನ್ನು ಮಂತ್ರಿ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದು ಸಿ.ಎಸ್.ನಾಡಗೌಡ ಹೇಳಿದ್ದಾರೆ.

ಮುದ್ದೇಬಿಹಾಳ (ನ.11): ‘ಸಂಪುಟ ಪುನಾರಚನೆ ವೇಳೆ ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಜಾತಿ ಸಮೀಕ್ಷೆಯ ಆಧಾರದ ಮೇಲೆ ಲಿಂಗಾಯತ ರೆಡ್ಡಿ ಹಾಗೂ ಲಿಂಗಾಯತ ಕೋಟಾದಡಿಯಲ್ಲಿ ನನ್ನನ್ನು ಮಂತ್ರಿ ಮಾಡಬೇಕೆಂದು ಒತ್ತಾಯಿಸುತ್ತೇನೆ’ ಎಂದು ಶಾಸಕ, ಕರ್ನಾಟಕ ಮಾರ್ಜಕ ಮತ್ತು ಸಾಬೂನು ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ (ಅಪ್ಪಾಜಿ) ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನ್ನ ಸುದೀರ್ಘ 45 ವರ್ಷಗಳ ರಾಜಕೀಯ ಅನುಭವ ಹಾಗೂ ಹಿರಿತನದ ಆಧಾರದ ಮೇಲೆ ನನಗೆ ಸೂಕ್ತ ಸ್ಥಾನಮಾನ ಮಾಡಿ ಗೌರವಿಸಬೇಕು. ಸಂಪುಟ ಪುನಾರಚನೆ ವೇಳೆ ನನಗೆ ಸಚಿವ ಸ್ಥಾನ ನೀಡಬೇಕು ಎನ್ನುವುದು ನನ್ನ ಮತಕ್ಷೇತ್ರದ ಜನರ ಒತ್ತಾಯ ಎಂದರು.

ಕಳೆದ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ನಮ್ಮ ಮತಕ್ಷೇತ್ರದ ಜನರಿಗೆ ಕಾಂಗ್ರೆಸ್‌ನ ವರಿಷ್ಠರು ಹಾಗೂ ಮುಖ್ಯಮಂತ್ರಿ ಸಿದ್ರಾಮಯ್ಯನವರು ಮಾತು ಕೊಟ್ಟಿದ್ದು, ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ, ಆರಂಭದಲ್ಲಿ ಅವಕಾಶ ಕೊಡಲಿಲ್ಲ. ಹೀಗಾಗಿ, ಸಂಪುಟ ಪುನಾರಚಣೆ ವೇಳೆ ನನಗೆ ಅವಕಾಶ ನೀಡಬೇಕೆಂದು ನಮ್ಮ ಮತಕ್ಷೇತ್ರದ ಜನರ ಒತ್ತಾಯದ ಕೂಗು ಕೇಳಿ ಬರುತ್ತಿದೆ. ಇಲ್ಲದಿದ್ದರೆ, ಪಕ್ಷದ ಮೇಲೆ ನಮ್ಮ ಕಾರ್ಯಕರ್ತರು ಹಾಗೂ ಮುಖಂಡರು ವಿಶ್ವಾಸ ಕಳೆದುಕೊಳ್ಳುತ್ತಾರೆ. ಆಗ ಪಕ್ಷವೂ ಮುಜುಗರಕ್ಕೆ ಒಳಪಡಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ನನ್ನ ಮತಕ್ಷೇತ್ರದಲ್ಲಿ ನೀರಾವರಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳು ಬಾಕಿ ಉಳಿದಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅವುಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದೇವೆ. ಸದ್ಯ ಅದು ಸಾಧ್ಯವಾಗುತ್ತಿಲ್ಲ. ಒಂದು ಮತಕ್ಷೇತ್ರ ಅಭಿವೃದ್ಧಿಯಾಗಬೇಕಿದ್ದರೆ ಮಂತ್ರಿಯಾಗಿದ್ದರಷ್ಟೇ ಸಾಧ್ಯ ಎನ್ನುವ ಪರಿಸ್ಥಿತಿ ಈಗ ನಿರ್ಮಾಣವಾಗಿದೆ. ಹೀಗಾಗಿ, ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದೇನೆ. ಜಾತಿ ಸಮೀಕ್ಷೆಯ ಆಧಾರದ ಮೇಲೆ ಲಿಂಗಾಯತ ರೆಡ್ಡಿ ಹಾಗೂ ಲಿಂಗಾಯತ ಕೋಟಾದಡಿಯಲ್ಲಿ ನನ್ನನ್ನು ಮಂತ್ರಿ ಮಾಡಬೇಕೆಂದು ಒತ್ತಾಯಿಸುತ್ತೇನೆ ಎಂದು ಮಂತ್ರಿ ಆಸೆಯನ್ನು ತೆರೆದಿಟ್ಟರು.

ನಾನು ಹಿರಿಯ

ಕೈಯಾಗ ಕಂಕಣ ಕಟ್ಟಿಕೊಂಡ ಮೇಲೆ ಏತಕ್ಕಾಗಿ ಕಟ್ಟಿಕೊಂಡಿದ್ದಾರೆ ಅಂತಾ ಎಲ್ಲರಿಗೆ ಗೊತ್ತಾಗುತ್ತದೆ. ಈಗಾಗಲೇ ನಾವು ಕೈಯಾಗ ಕಂಕಣ ಕಟ್ಟಿಕೊಂಡಿದ್ದೇವೆ. ಅಂದರೆ ಅದು ಸಾಧಿಸಬೇಕು ಅಂತಾ ಯಾವ ರಾಜಕಾರಣಿಗಾದರೂ ಇದ್ದೇ ಇರುತ್ತದೆ. ಉನ್ನತ ಮಟ್ಟದ ಭವಿಷ್ಯ ಹೊಂದಬೇಕೆನ್ನುವುದು ಎಲ್ಲರ ಮನಸ್ಸಿನಲ್ಲಿರುತ್ತದೆ. ನಾನು ಲಿಂಗಾಯತರಲ್ಲಿರುವಂತ ಒಳಪಂಗಡದ ಕೋಟಾದಲ್ಲಿ ಸಚಿವ ಸ್ಥಾನ ಕೇಳುತ್ತೇನೆ. ವಿಜಯಪುರ ಜಿಲ್ಲೆಯಲ್ಲಿಯೇ ಅತ್ಯಂತ ಹಿರಿಯ ಶಾಸಕನಾಗಿದ್ದು, ಈ ಬಾರಿ ನನಗೊಂದು ಅವಕಾಶ ಕೊಡಬೇಕೆಂದು ಇವತ್ತೂ ಕೇಳುತ್ತೇನೆ, ನಾಳೆಯೂ ಕೇಳುತ್ತೇನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ರಾಜ್ಯದಲ್ಲಿ ರಾಜಕೀಯ ಹೊಲಸೆದ್ದು, ಎಲ್ಲ ಪಕ್ಷಗಳು ಗಬ್ಬೆದ್ದು ಹೋಗಿವೆ: ಕೆ.ಎಸ್.ಈಶ್ವರಪ್ಪ
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ