ದಿಲ್ಲಿಯಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ: ಸಂಪುಟ ವಿಸ್ತರಣೆಯ ಸುಳಿವು

Published : Jul 30, 2021, 09:50 PM IST
ದಿಲ್ಲಿಯಲ್ಲಿ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ: ಸಂಪುಟ ವಿಸ್ತರಣೆಯ ಸುಳಿವು

ಸಾರಾಂಶ

* ದೆಹಲಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿ * ಪ್ರಧಾನಿ ಸೇರಿದಂತೆ ಹಲವು ನಾಯಕರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತು * ಹಲವು ನಾಯಕರ ಭೇಟಿಯ ಅಂಶಗಳನ್ನ ತಿಳಿಸಿದ ಸಿಎಂ  ಬಸವರಾಜ ಬೊಮ್ಮಾಯಿ

ನವದೆಹಲಿ, (ಜು.30): ದೆಹಲಿ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ನಾಯಕರನ್ನ ಭೇಟಿ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಮತ್ತು ಕೋವಿಡ್-19 ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ವಾರದೊಳಗೆ ಸಂಪುಟ ವಿಸ್ತರಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

PM ಮೋದಿ ಭೇಟಿಯಾದ CM ಬೊಮ್ಮಾಯಿಗೆ ಸಿಕ್ತು ಕರ್ನಾಟಕದ ಅಭಿವೃದ್ಧಿ ಭರವಸೆ!

ಮೊದಲ ವಾರದೊಳಗೆ ಕೇಂದ್ರ ವರಿಷ್ಠರ ಅನುಮತಿ ಪಡೆಯುತೇವೆ. ಇಂದಿನ ಸಭೆಯಲ್ಲಿ ಸಂಭಾವ್ಯರ ಪಟ್ಟಿಯ ಬಗ್ಗೆ ಚರ್ಚೆ ನಡೆಸಿಲ್ಲ. ಆದರೆ, ಈ ವಿಚಾರದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವ ಅಗತ್ಯವಿರುವುದಾಗಿ ತಿಳಿಸಿರುವುದಾಗಿ ಅವರು ಸುದ್ದಿಗಾರರಿಗೆ ಹೇಳಿದರು. 
ಕೊವಿಡ್‌ ನಿಯಂತ್ರಣಕ್ಕೆ ರಾಜ್ಯ ಸರ್ಕಾರದಿಂದ ಹೆಚ್ಚು ಒತ್ತು ನೀಡಲಾಗುವುದು. ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಮೈಸೂರು, ದಕ್ಷಿಣ ಕನ್ನಡ ಜಿಲ್ಲಾಡಳಿತಗಳ ಜತೆ ವಿಡಿಯೋ ಕಾನ್ಫರೆನ್ಸ್ ಮಾಡಲಾಗುವುದು. ಪ್ರವಾಹ ಪರಿಸ್ಥಿತಿ ಕುರಿತು ನಾಳೆ ಅಧಿಕಾರಿಗಳ ಜತೆ ಸಭೆ ನಡೆಸಲಾಗುವುದು ಎಂದು ಈ ವೇಳೆ ಅವರು ತಿಳಿಸಿದ್ದಾರೆ.

ನಾಳೆ (ಜು.31)  11 ಗಂಟೆಗೆ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾಗುತ್ತೇನೆ. ಕರ್ನಾಟಕದ ಯೋಜನೆಗಳ ಕುರಿತು ಸಚಿವರ ಜತೆ ಚರ್ಚೆ ನಡೆಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ