ಅವಕಾಶವಂಚಿತರಿಗೆ ಮುಂದಿನ ಬಾರಿ ಅವಕಾಶ: ಬೊಮ್ಮಾಯಿ

Published : Feb 07, 2020, 08:33 AM ISTUpdated : Feb 07, 2020, 08:34 AM IST
ಅವಕಾಶವಂಚಿತರಿಗೆ ಮುಂದಿನ ಬಾರಿ ಅವಕಾಶ: ಬೊಮ್ಮಾಯಿ

ಸಾರಾಂಶ

ಅವಕಾಶವಂಚಿತರಿಗೆ ಮುಂದಿನ ಬಾರಿ ಅವಕಾಶ: ಬೊಮ್ಮಾಯಿ| ಮಂತ್ರಿಗಿರಿ ವಂಚಿತರಿಗೆ ಅಸಮಾಧಾನ ಆಗಿಲ್ಲ| ಸಣ್ಣಪುಟ್ಟಗೊಂದಲ ಶೀಘ್ರ ಬಗೆಹರಿಯಲಿವೆ

ಬೆಂಗಳೂರು[ಫೆ.07]: ಮುಂದಿನ ಸಚಿವ ಸಂಪುಟ ವಿಸ್ತರಣೆ ವೇಳೆ ಅವಕಾಶ ವಂಚಿತರಿಗೆ ಖಂಡಿತ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜಭವನದ ಬಳಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟದಲ್ಲಿ ಇನ್ನೂ ಕೆಲ ಸ್ಥಾನಗಳು ಖಾಲಿ ಉಳಿದಿವೆ. ಕಾರಣಾಂತರಗಳಿಂದ ವರಿಷ್ಠರು ಈ ಬಾರಿ 10 ಮಂದಿ ಶಾಸಕರನ್ನು ಮಾತ್ರ ಸಂಪುಟಕ್ಕೆ ತೆಗೆದುಕೊಳ್ಳಲು ಅವಕಾಶ ನೀಡಿದರು. ಈ ಸಲ ಯಾರಿಗೆ ಅವಕಾಶ ತಪ್ಪಿದೆಯೋ ಮುಂದಿನ ದಿನಗಳಲ್ಲಿ ಅವರಿಗೆ ಖಂಡಿತ ಅವಕಾಶ ಸಿಕ್ಕೇ ಸಿಗಲಿದೆ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಚಿವ ಸ್ಥಾನದ ವಂಚಿತರು ಅಸಮಾಧಾನಗೊಂಡಿಲ್ಲ. ಏಕೆಂದರೆ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಕೇಂದ್ರದ ವರಿಷ್ಠರು ಎಲ್ಲರೊಂದಿಗೆ ಚರ್ಚಿಸಿಯೇ ತೀರ್ಮಾನ ಕೈಗೊಂಡಿದ್ದಾರೆ. ಇರುವ ಸಣ್ಣಪುಟ್ಟಗೊಂದಲಗಳು ಶೀಘ್ರದಲ್ಲೇ ಬಗೆಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಾಸಕರಾದವರಿಗೆ ಸಹಜವಾಗಿ ಮಂತ್ರಿಯಾಗುವ ಸಹಜ ಆಸೆ ಇರುತ್ತದೆ. ಅದು ತಪ್ಪೂ ಅಲ್ಲ. ವರಿಷ್ಠರು ಪರಿಸ್ಥಿತಿಗೆ ತಕ್ಕಂತೆ ತೀರ್ಮಾನ ಕೈಗೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅವಕಾಶ ವಂಚಿತರ ಪರ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಈ ಬಗ್ಗೆ ಯಾರಿಗೂ ಸಂಶಯ ಬೇಡ. ಇನ್ನು ಸಚಿವ ಸ್ಥಾನ ವಂಚಿತರು ಪ್ರತ್ಯೇಕ ಸಭೆ ನಡೆಸುವಂತಹ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಎಲ್ಲ ಶಾಸಕರೊಂದಿಗೆ ಮುಖ್ಯಮಂತ್ರಿ ನಿರಂತರ ಸಂಪರ್ಕದಲ್ಲಿದ್ದಾರೆ. ಕೊನೆ ಕ್ಷಣದಲ್ಲಿ ಕೈತಪ್ಪಿದವರು ಕೊಂಚ ಬೇಸರಗೊಂಡಿರಬಹುದು. ರಾಜಕೀಯದಲ್ಲಿ ಇವೆಲ್ಲ ಸಹಜ. ರಾಜಕೀಯದಲ್ಲಿ ಏರಿಳಿತಗಳು ಸಾಮಾನ್ಯ. ಶೀಘ್ರದಲ್ಲೇ ಎಲ್ಲವೂ ಬಗೆಹರಿದು ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಲಿದ್ದೇವೆ. ಅಲ್ಲದೆ, ಯಾವುದೇ ಪರಿಸ್ಥಿತಿ ಎದುರಿಸಲು ಮುಖ್ಯಮಂತ್ರಿ ಸಮರ್ಥರಾಗಿದ್ದಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ