CM DK Shivakumar: ಇಂದು ದೆಹಲಿಗೆ ಸಿಎಂ ಡಿಕೆ ದೌಡು; ಮುಖ್ಯಮಂತ್ರಿಯಾಗಿ ಮೊದಲ ಭೇಟಿ!

Kannadaprabha News   | Kannada Prabha
Published : Jun 10, 2026, 06:39 AM IST
Chief Minister DK Shivakumar to visit Delhi today

ಸಾರಾಂಶ

ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ನಂತರ ಡಿ.ಕೆ.ಶಿವಕುಮಾರ್ ಅವರು ಮೊದಲ ಬಾರಿಗೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಎರಡು ದಿನಗಳ ಪ್ರವಾಸದಲ್ಲಿ ಅವರು ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದು, ಎಐಸಿಸಿ ಹಾಗೂ ಇತರ ಕಾಂಗ್ರೆಸ್ ಕಚೇರಿಗಳಿಗೆ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ.

ಬೆಂಗಳೂರು (ಜೂ.10): ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಬುಧವಾರ ಬೆಳಗ್ಗೆ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಿದ ಬಳಿಕ ಮೊದಲ ಬಾರಿಗೆ ದೆಹಲಿಗೆ ತೆರಳುತ್ತಿರುವ ಅವರು, ಬುಧವಾರ ಎಐಸಿಸಿ ಕಚೇರಿ, ಎನ್‌ಎಸ್‌ಯುಐ, ರಾಷ್ಟ್ರೀಯ ಯುವ ಕಾಂಗ್ರೆಸ್‌ ಕಚೇರಿ ಹಾಗೂ ಅಖಿಲ ಭಾರತ ಮಹಿಳಾ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ.

ಬಳಿಕ ಸಂಜೆ ಕರ್ನಾಟಕ ಭವನದಲ್ಲಿ ಐಎಎಎಸ್‌ ಅಧಿಕಾರಿಗಳೊಂದಿಗೆ ಡಿನ್ನರ್‌ ಸಭೆ ನಡೆಸಲಿದ್ದಾರೆ. ಈ ವೇಳೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಸಹ ಜತೆಯಾಗಲಿದ್ದಾರೆ. ಇನ್ನು ಗುರುವಾರ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಬೆಂಗಳೂರಿಗೆ ವಾಪಸಾಗಲಿದ್ದು, ಒಟ್ಟು ಎರಡು ದಿನ ದೆಹಲಿಯಲ್ಲೇ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಮಧ್ಯಪ್ರದೇಶ ‘ಕೈ’ಡ್ರಾಮಾ: ಬಿಜೆಪಿ ಕುದುರೆ ವ್ಯಾಪಾರ ತಪ್ಪಿಸಲು ಬೆಂಗಳೂರಿಗೆ ಬಂದಿದ್ದ ಕೈ ಶಾಸಕರು ಏರ್‌ಪೋರ್ಟ್‌ನಿಂದಲೇ ವಾಪಸ್ ಹೋಗಿದ್ದೇಕೆ?
ರಾಜ್ಯಸಭಾ ಟಿಕೆಟ್‌ಗೆ ಗೌಡರು ಅರ್ಜಿಯನ್ನೇ ಹಾಕಿಲ್ಲ: ಕಾಂಗ್ರೆಸ್‌ನ 'ಮೈತ್ರಿ ಒಡೆಯುವ' ಆಟಕ್ಕೆ ಬ್ರೇಕ್ ಹಾಕಿದ ಹೆಚ್‌ಡಿ ಕುಮಾರಸ್ವಾಮಿ!