
ಬೆಂಗಳೂರು, (ಜುಲೈ.21):ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು(ಮಂಗಳವಾರ) ಸಂಜೆ 5 ಗಂಟೆಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಮಾತನಾಡಲಿದ್ದಾರೆ.
ಯೂಟ್ಯೂಬ್ ಮತ್ತು ಫೇಸ್ಬುಕ್ ಲೈವ್ ಮುಖಾಂತರ ಮಾತನಾಡಲಿರುವ ಸಿಎಂ, ಕೊರೋನಾ ನಿರ್ವಹಣೆಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡುವ ಸಾಧ್ಯೆತೆಗಳಿವೆ.
ಸಂಡೇ ಲಾಕ್ಡೌನ್, ರಾತ್ರಿ ಕರ್ಫ್ಯೂ: ಇಂದು ಹೊಸ ಮಾರ್ಗಸೂಚಿ ಪ್ರಕಟ
ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರಿನಲ್ಲಿ ವಿಧಿಸಲಾಗಿರುವು ಲಾಕ್ ಡೌನ್ ಅವಧಿ ಮುಕ್ತಾಯವಾಗಲಿದೆ. ಈ ಹಿನ್ನಲೆಯಲ್ಲಿ ಮಹತ್ವದ ವಿಚಾರಗಳನ್ನು ಜನತೆಗೆ ತಿಳಿಸುವ ಉದ್ದೇಶದಿಂದ ಮಾತನಾಡಬಹುದು ಎಂದು ನಿರೀಕ್ಷಿಸಲಾಗಿದೆ.
ಹೊಸ ಮಾರ್ಗಸೂಚಿ, ಮುಂದಿನ ಹಂತಕ್ಕೆ ತಯಾರಿಗಳು, ಲಾಕ್ಡೌನ್ ಮುಂದುವರಿಸುವ ಇಲ್ಲವೇ ಅಂತ್ಯವಾಗಿಸುವ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಇನ್ನು ಕೊರೋನಾ ನಿಯಂತ್ರಣಕ್ಕೆ ಜನರಿಂದ ಸಹಕಾರ ಕೋರಬಹುದು. ಸಂಕಷ್ಟಕಾಲದಲ್ಲಿ ಸರ್ಕಾರ ಅವ್ಯವಹಾರ ನಡೆಸಿದೆ ಎಂದಿರುವ ಪತಿಪಕ್ಷಗಳ ಆರೋಪಕ್ಕೆ ಸಿಎಂ ಉತ್ತರ ಕೊಡಬಹುದು.
ಒಟ್ಟಿನಲ್ಲಿ ಬಿಎಸ್ ಯಡಿಯೂರಪ್ಪ ಅವರ ಭಾಷಣೆ ತೀವ್ರ ಕುತೂಹಲ ಮೂಡಿಸಿದ್ದು, ಏನೆಲ್ಲಾ ಮಾತನಾಡಲಿದ್ದಾರೆ ಎನ್ನುವುದನ್ನು ಕಾದನೋಡಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.