ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ದಿಲ್ಲಿಯಲ್ಲಿ ಸಚಿವರ ಪಟ್ಟಿ ಸಿದ್ಧ?

Published : Aug 01, 2021, 06:56 PM ISTUpdated : Aug 01, 2021, 07:03 PM IST
ಬೊಮ್ಮಾಯಿಗೆ ಹೈಕಮಾಂಡ್ ದಿಢೀರ್ ಬುಲಾವ್: ದಿಲ್ಲಿಯಲ್ಲಿ ಸಚಿವರ ಪಟ್ಟಿ ಸಿದ್ಧ?

ಸಾರಾಂಶ

* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಿಢೀರ್‌ ದೆಹಲಿಗೆ * ಹೈಕಮಾಂಡ್‌ನಿಂದ ಬುಲಾವ್‌ ಬಂದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋದ ಬೊಮ್ಮಾಯಿ * ಸಂಪುಟ ವಿಸ್ತರಣೆ ಸಂಬಂಧ ಚರ್ಚೆ

ಬೆಂಗಳೂರು, (ಆ.01): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ (ಭಾನುವಾರ) ದಿಢೀರ್‌ ದೆಹಲಿಗೆ ತೆರಳಿದ್ದಾರೆ. 

ಹೈಕಮಾಂಡ್‌ನಿಂದ ಬುಲಾವ್‌ ಬಂದ ಹಿನ್ನೆಲೆಯಲ್ಲಿ ನೂತನ ಸಚಿವರ ಪಟ್ಟಿ ಕೈಯಲ್ಲಿ ಹಿಡಿದೇ ಅವರು ದೆಹಲಿಗೆ ಪ್ರಯಾಣ ಬೆಳೆಸಿರುವುದು ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ.

ಬೊಮ್ಮಾಯಿಗೆ ಸಿಎಂ ಪಟ್ಟ ಒಲಿದಿದ್ದು ಹೇಗೆ: ಇಲ್ಲಿದೆ ರಹಸ್ಯ..?
 
ನಾಳೆ (ಸೋಮವಾರ) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ನಾಯಕರನ್ನ ಭೇಟಿಯಾಗಲಿದ್ದು, ಸಚಿವ ಸಂಪುಟಕ್ಕೆ ಅನುಮತಿ ಪಡೆದುಕೊಳ್ಳಲಿದ್ದಾರೆ.

 ಒಂದೆಡೆ, ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿಯನ್ನು ಬಸವರಾಜ ಬೊಮ್ಮಾಯಿ ಸಿದ್ಧಪಡಿಸಿದ್ದಾರೆ. ಮತ್ತೊಂದೆಡೆ, ಪಕ್ಷದ ವತಿಯಿಂದ ಸಚಿವ ಸ್ಥಾನಕ್ಕೆ ಅರ್ಹ ಶಾಸಕರ ಪಟ್ಟಿ ಸಿದ್ಧವಾಗಿದೆ ಎಂದು ತಿಳಿದುಬಂದಿದೆ.ಇದರ ಮಧ್ಯೆ ಹೈಕಮಾಂಡ್ ಯಾವ ಪಟ್ಟಿ ನೀಡುತ್ತೋ ಎನ್ನುವುದು ಕುತೂಹಲ ಮೂಡಿಸಿದೆ.

ಬೊಮ್ಮಾಯಿ ತಂದಿರುವ ಪಟ್ಟಿ ಹಾಗೂ ಹೈಕಮಾಂಡ್ ತನ್ನ ಬಳಿ ಇರುವ ಪಟ್ಟಿಗೆ ತಾಳೆ ಹಾಕಿ ಫೈನಲ್ ಮಾಡಿ ಕಳುಹಿಸಲಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಮಂಗಳವಾರ ಅಥವಾ ಬುಧವಾರ ಸಂಪುಟ ರಚನೆ ಸಾಧ್ಯತೆಯಿದೆ. 

ಇನ್ನು ಬೊಮ್ಮಾಯಿ ಸಂಪುಟದಲ್ಲಿ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಲಿದೆ ಎನ್ನುವುದು ಕುತೂಹಲ ಕೆರಳಿಸಿದೆ. ಇದರ ಮಧ್ಯೆ ಉಪಮುಖ್ಯಮಂತ್ರಿ ಸ್ಥಾನಕ್ಕೂ ಸಹ ತೀವ್ರ ಪೈಪೋಟಿ ಶುರುವಾಗಿದ್ದು, ಹೈಕಮಾಂಡ್, ಜಾತಿವಾರು ಲೆಕ್ಕಾಚಾರದ ಮೇಲೆ 3 ಅಥವಾ 4 ಡಿಸಿಎಂ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!