ಪಾಲಿಕೆ ರಿಸಲ್ಟ್ ಹೊರಬಿದ್ದ ಬೆನ್ನಲ್ಲೇ ದಿಲ್ಲಿಯತ್ತ ಸಿಎಂ: ಕುತೂಹಲ ಮೂಡಿಸಿದ ಬೊಮ್ಮಾಯಿ ನಡೆ

Published : Sep 06, 2021, 06:15 PM ISTUpdated : Sep 06, 2021, 06:34 PM IST
ಪಾಲಿಕೆ ರಿಸಲ್ಟ್ ಹೊರಬಿದ್ದ ಬೆನ್ನಲ್ಲೇ ದಿಲ್ಲಿಯತ್ತ ಸಿಎಂ: ಕುತೂಹಲ ಮೂಡಿಸಿದ ಬೊಮ್ಮಾಯಿ ನಡೆ

ಸಾರಾಂಶ

* ಪಾಲಿಕೆ ಎಲೆಕ್ಷನ್ ಫಲಿತಾಂಶ ಪ್ರಕಟ ಬೆನ್ನಲ್ಲೇ ಸಿಎಂ ದಿಲ್ಲಿಗೆ * ನಾಳೆ (ಸೆ.07) ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ ಬೊಮ್ಮಾಯಿ *ಉಳಿದ ನಾಲ್ಕು ಸಚಿವ ಸ್ಥಾನ ಭರ್ತಿ ಬಗ್ಗೆ ನಡ್ಡಾ ಜತೆ ಚರ್ಚೆ ಸಾಧ್ಯತೆ

ಬೆಂಗಳೂರು, (ಸೆ.06): ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನಿರೀಕ್ಷೆ ಮೀರಿ ಸಾಧನೆ ಮಾಡಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದು ಕುತೂಹಲ ಮೂಡಿಸಿದೆ.

ಹೌದು.. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಸೆ.07) ದೆಹಲಿಗೆ ತೆರಳುತ್ತಿದ್ದು, ಸಚಿವ ಸಂಪುಟ ವಿಸ್ತರಣೆ ಸಂಬಂಧ ಕೇಂದ್ರದ ಬಿಜೆಪಿ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸುವ ಸಾಧ್ಯತೆಗಳಿವೆ.

ಶಾ ಮಾತೇ ಅಂತಿಮ: ಬೊಮ್ಮಾಯಿ ನೇತೃತ್ವದಲ್ಲಿ ಎಲೆಕ್ಷನ್‌ ಎಂದ ಸಚಿವ ಸೋಮಶೇಖರ್

ಈ ಮೊದಲೇ ವರಿಷ್ಠರಿಂದ ಭೇಟಿಗೆ ಒಪ್ಪಿಗೆ ಸಿಕ್ಕ ಹಿನ್ನಲೆಯಲ್ಲಿ ಬೊಮ್ಮಾಯಿ ದೆಹಲಿಗೆ ತೆರಳುತ್ತಿದ್ದು, ಸಂಪುಟದಲ್ಲಿ ಖಾಲಿ ಇರುವ 4 ಸ್ಥಾನಗಳ ಭರ್ತಿಯ ಜೊತೆಗೆ ನಿಗಮ ಮಂಡಳಿ ನೇಮಕಾತಿ ಸೇರಿದಂತೆ ರಾಜ್ಯ ರಾಜಕೀಯ ವಿಚಾರ ಹಾಗೂ ಪಕ್ಷ ಸಂಘಟನೆ ಸೇರಿದಂತೆ ಮತ್ತಿತ್ತರ ವಿಚಾರಗಳ ಬಗ್ಗೆ ವರಿಷ್ಠರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಬಾರಿ ದೆಹಲಿ ಭೇಟಿ ಸಂದರ್ಭದಲ್ಲಿ ನಡ್ಡಾ ಅವರನ್ನ ಭೇಟಿಯಾಗಲು ಬೊಮ್ಮಾಯಿ ಅವರಿಗೆ ಸಾಧ್ಯವಾಗಿರಲಿಲ್ಲ. ಇದೀಗ ಸಮಯ ಸಿಕ್ಕಿದ್ದು, ಉಳಿದ ನಾಲ್ಕು ಸಚಿವ ಸ್ಥಾನ ಭರ್ತಿ ಬಗ್ಗೆ ನಡ್ಡಾ ಜತೆ ಚರ್ಚೆ ನಡೆಸುವ ಸಾಧ್ಯತೆ ಇದೆ.

ಇದರ ಜೊತೆ ಕಲಬುರಗಿ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಬಗ್ಗೆ ನಡ್ಡಾಗೆ ತಿಳಿಸಲಿದ್ದಾರೆ. ಒಟ್ಟಿನಲ್ಲಿ ಬೊಮ್ಮಾಯಿ ಅವರ ಈ ಬಾರಿ ದಿಲ್ಲಿ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಿತ್ತೂರು ಕರ್ನಾಟಕ ಹೆಸರಲ್ಲಿ ಪ್ರತ್ಯೇಕ ರಾಜ್ಯವಾಗಲಿ: ಶಾಸಕ ರಾಜು ಕಾಗೆ ಆಗ್ರಹ
ಸಿಎಂ ಸಿದ್ದರಾಮಯ್ಯ ಹೇಳಿಕೆಯೇ ನಮಗೆ ಅಂತಿಮ ಮಾರ್ಗದರ್ಶನ: ಸಚಿವ ದಿನೇಶ್ ಗುಂಡೂರಾವ್