ದಿಲ್ಲಿಗೆ ಹೋದವರಿಗೆ ಸೂಕ್ತ ಉತ್ತರ ಕೊಟ್ಟಿದ್ದಾರೆ: ಬಿಎಸ್‌ವೈ

Kannadaprabha News   | Asianet News
Published : May 28, 2021, 07:12 AM ISTUpdated : May 28, 2021, 07:29 AM IST
ದಿಲ್ಲಿಗೆ ಹೋದವರಿಗೆ ಸೂಕ್ತ ಉತ್ತರ ಕೊಟ್ಟಿದ್ದಾರೆ: ಬಿಎಸ್‌ವೈ

ಸಾರಾಂಶ

ನನ್ನ ಮುಂದೆ ಇರುವುದು ಕೋವಿಡ್‌ ನಿರ್ವಹಣೆ ಕೆಲಸ ಮಾತ್ರ  ಯಾರೋ ಎಲ್ಲಿಗೋ ಹೋಗಿ ಬಂದಿರಬಹುದು. ಆದರೆ, ಅವರಿಗೆ ಉತ್ತರ ಕೊಟ್ಟು ಕಳಿಸಿದ್ದಾರೆ ದೆಲ್ಲಿಗೆ ಹೋಗಿ ಬಂದವರಿಗೆ ಸಿಎಂ ಯಡಿಯೂರಪ್ಪ ತಿರುಗೇಟು 

 ಬೆಂಗಳೂರು (ಮೇ.28): ನನ್ನ ಮುಂದೆ ಇರುವುದು ಕೋವಿಡ್‌ ನಿರ್ವಹಣೆ ಕೆಲಸ ಮಾತ್ರ. ಯಾರೋ ಎಲ್ಲಿಗೋ ಹೋಗಿ ಬಂದಿರಬಹುದು. ಆದರೆ, ಅವರಿಗೆ ಉತ್ತರ ಕೊಟ್ಟು ಕಳಿಸಿದ್ದಾರಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ದೆಹಲಿಗೆ ತೆರಳಿದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೊರೋನಾ ನಿಯಂತ್ರಿಸುವುದು ಮತ್ತು ಜನ ಹಿತ ಕಾಪಾಡುವುದು ನನ್ನ ಆದ್ಯತೆ. ಕೋವಿಡ್‌ ಎದುರಿಸುವುದು ಮೊದಲ ಕೆಲಸ. ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ. ಸಚಿವರು, ಶಾಸಕರು ಒಟ್ಟಾಗಿ ಈ ಕೋವಿಡ್‌ ಸಮಸ್ಯೆಯನ್ನು ಎದುರಿಸಲು ಆದ್ಯತೆ ನೀಡಬೇಕಿದೆ’ ಎಂದು ಹೇಳಿದರು.

ತಕ್ಷಣ ರಾಜೀನಾಮೆ ಕೊಡಲಿ : ಸಚಿವರೋರ್ವರ ವಿರುದ್ಧ ರೇಣುಕಾಚಾರ್ಯ ಗರಂ ...

‘ನಾಯಕತ್ವ ಬದಲಾವಣೆ ಸಂಬಂಧ ಕೆಲವರು ದೆಹಲಿಗೆ ಹೋಗಿ ಬಂದಿದ್ದಾರಲ್ಲ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದಿರಬಹುದು. ಅವರಿಗೆ ಉತ್ತರ ನೀಡಿ ಕಳುಹಿಸಿದ್ದಾರಲ್ಲ ..’ ಎಂದು ತೀಕ್ಷ್ಣವಾಗಿ ಹೇಳಿದರು. ‘ಶಾಸಕಾಂಗ ಪಕ್ಷದ ಸಭೆ ಕರೆಯುತ್ತೀರಾ?’ ಎಂಬ ಪ್ರಶ್ನೆಗೆ, ‘ಅದರ ಬಗ್ಗೆ ನಿಮ್ಮ (ಮಾಧ್ಯಮ) ಜತೆ ಚರ್ಚಿಸುವ ಅಗತ್ಯ ಇಲ್ಲ’ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಂಡವಾಳ ಆಕರ್ಷಣೆಗೆ ರಾಜ್ಯಗಳ ನಡುವೆ ಸ್ಪರ್ಧೆ ಹೆಚ್ಚಾಗಿದೆ: ಸಚಿವ ಎಂ.ಬಿ.ಪಾಟೀಲ್‌
ಬೀಚ್‌ಗಳಲ್ಲಿ ಮದ್ಯ ಮಾರಾಟಕ್ಕೆ ಪರವಾನಗಿ ಬಗ್ಗೆ ಚರ್ಚೆ: ಡಿ.ಕೆ.ಶಿವಕುಮಾರ್‌