ಸಂಪುಟ ವಿಸ್ತರಣೆಯೋ..ಪುನಾರಚನೆಯೋ... ಎಂಬ ಗೊಂದಲಕ್ಕೆ ತೆರೆ ಎಳೆದ ಸಿಎಂ

Published : Jan 12, 2021, 03:17 PM ISTUpdated : Jan 12, 2021, 03:25 PM IST
ಸಂಪುಟ ವಿಸ್ತರಣೆಯೋ..ಪುನಾರಚನೆಯೋ... ಎಂಬ ಗೊಂದಲಕ್ಕೆ ತೆರೆ ಎಳೆದ ಸಿಎಂ

ಸಾರಾಂಶ

ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.  

ಬೆಂಗಳೂರು, (ಜ.12): ಸಂಪುಟ ಸಂಕಟಕ್ಕೆ ಕೊನೆಗೂ ಬಿಜೆಪಿ ಹೈಕಮಾಂಡ್ ಮುಕ್ತಿ ನೀಡಿದೆ. ಆದ್ರೆ, ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವ ಗೊಂದಲಗಳು ಇದ್ದವು. ಇದೀಗ ಆ ಗೊಂದಲಕ್ಕೆ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ತೆರೆ ಎಳೆದಿದ್ದಾರೆ.

ಇಂದು (ಬುಧವಾರ) ಸುದ್ದಿಗಾರರೊಂದಿಗೆ ಮತನಾಡಿದ ಅವರು, ನಾಳೆ (ಬುಧವಾರ) ಸಂಜೆ 4 ಗಂಟೆಗೆ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ಅಮಾವಾಸ್ಯೆ ಮುಗಿಯಲಿದ್ದು, ನಂತರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.ಈ ಮೂಲಕ ಎಲ್ಲ ವದಂತಿಗಳಿಗೆ ತೆರೆ ಎಳೆದರು. 

ರಾಜ್ಯಪಾಲರಿಗೆ ಸಚಿವರ ಪಟ್ಟಿ ನೀಡಿದ ಸಿಎಂ ; ಸಂಭಾವ್ಯರ ಹೆಸರುಗಳಿವು..!

 ಅನಗತ್ಯವಾಗಿ ಸಂಪುಟದಿಂದ ಇಂಥವರನ್ನೇ ಕೈಬಿಡುತ್ತೇವೆ ಅಥವಾ ಇಂಥವರನ್ನೇ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಬಿಂಬಿಸಬೇಡಿ. ಸಂಜೆ ನಾನೇ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ಈಗ ಮಾಧ್ಯಮಗಳಲ್ಲಿ ಬರುತ್ತಿರುವ ವದಂತಿಗಳು ಸತ್ಯಾಂಶದಿಂದ ಕೂಡಿಲ್ಲ. ಪುನಾರಚನೆಯೋ, ವಿಸ್ತರಣೆಯೋ ಯಾರನ್ನು ತೆಗೆದುಕೊಳ್ಳಲಾಗುತ್ತದೆ ಎಂಬುದನ್ನು ನಾನೇ ಬಹಿರಂಗ ಮಾಡುತ್ತೇನೆ. ದಯವಿಟ್ಟು ಊಹಾಪೋಹಗಳನ್ನು ಹಬ್ಬಿಸಬೇಡಿ ಎಂದು ಸಿಎಂ ಮನವಿ ಮಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ