ನೀರವ್‌, ಲಲಿತ್‌ ಹೆಸರಲ್ಲೂ ಮೋದಿ ಇದೆ: ಸಿದ್ದು ಟಾಂಗ್‌

Published : Jul 27, 2023, 10:47 AM ISTUpdated : Jul 27, 2023, 11:10 AM IST
ನೀರವ್‌, ಲಲಿತ್‌ ಹೆಸರಲ್ಲೂ ಮೋದಿ ಇದೆ: ಸಿದ್ದು ಟಾಂಗ್‌

ಸಾರಾಂಶ

ಮೋದಿ ಹೆಸರು ಎತ್ತಿದ್ದಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅನ್ವಯವಾದ ಕ್ರಮ ನಿಮ್ಮ ಮೇಲೆ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿರುವ ಅವರು, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಎಂದು ಪ್ರಶ್ನಿಸಿದ ಸಿದ್ದರಾಮಯ್ಯ. 

ಬೆಂಗಳೂರು(ಜು.27): ‘ವಿರೋಧಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ವನ್ನು ಈಸ್ಟ್‌ ಇಂಡಿಯಾ ಕಂಪನಿ ಮತ್ತು ಇಂಡಿಯನ್‌ ಮುಜಾಹಿದೀನ್‌ಗೆ ಹೋಲಿಸಿರುವ ನರೇಂದ್ರ ಮೋದಿ ಅವರೇ, ಭಾರತೀಯರ ನೂರಾರು ಕೋಟಿ ರು. ತೆರಿಗೆ ಹಣ ಲೂಟಿ ಮಾಡಿ ಓಡಿ ಹೋಗಿರುವ ನೀರವ್‌ ಮೋದಿ, ಲಲಿತ್‌ ಮೋದಿ ಅವರ ಹೆಸರಿನಲ್ಲಿಯೂ ನಿಮ್ಮ ಹೆಸರಿನ ಮೋದಿ ಇದೆಯಲ್ಲಾ? ಅವರನ್ನು ನಿಮ್ಮ ಜತೆ ಹೋಲಿಸಬಹುದಾ?’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಅಲ್ಲದೆ, ಮೋದಿ ಹೆಸರು ಎತ್ತಿದ್ದಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಅನ್ವಯವಾದ ಕ್ರಮ ನಿಮ್ಮ ಮೇಲೆ ಅನ್ವಯವಾಗುವುದಿಲ್ಲವೇ? ಎಂದು ಪ್ರಶ್ನಿಸಿರುವ ಅವರು, ಇಂಡಿಯಾ ಎಂಬ ಸುಂದರ, ಸುಮಧುರ ಮತ್ತು ಪವಿತ್ರ ಹೆಸರಿನ ಬಗ್ಗೆ ನಿಮಗೆ ಯಾಕೆ ಇಷ್ಟೊಂದು ದ್ವೇಷ? ಎಂದು ಪ್ರಶ್ನಿಸಿದ್ದಾರೆ.

'ಇಂಡಿಯಾ' ಒಕ್ಕೂಟದಿಂದ ಮೋದಿಗೆ ನಡುಕ: ಜಗದೀಶ್‌ ಶೆಟ್ಟರ್‌

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ಲಲಿತ್‌ ಮತ್ತು ನೀರವ್‌ ಹೆಸರಲ್ಲಿಯೂ ಮೋದಿ ಇದೆಯಲ್ಲಾ ಎಂಬ ಸಾಮಾನ್ಯ ಪ್ರಶ್ನೆ ಕೇಳಿದ ರಾಹುಲ್‌ಗಾಂಧಿ ವಿರುದ್ದ ಮಾನನಷ್ಟಮೊಕದ್ದಮೆ ಹೂಡಿ, ಎರಡು ವರ್ಷ ಜೈಲು ಶಿಕ್ಷೆ ನೀಡಿ, ಲೋಕಸಭೆಯಿಂದ ಅನರ್ಹಗೊಳಿಸಲಾಯಿತು. ಈಗ ಇಂಡಿಯಾವನ್ನು ಈಸ್ಟ್‌ ಇಂಡಿಯಾ ಕಂಪನಿ ಮತ್ತು ಇಂಡಿಯನ್‌ ಮುಜಾಹಿದೀನ್‌ಗೆ ಹೋಲಿಸಿರುವ ನಿಮ್ಮ ಹೋಲಿಕೆಗೆ ರಾಹುಲ… ಗಾಂಧಿಯವರ ವಿರುದ್ಧದ ಕ್ರಮ ಅನ್ವಯವಾಗುವುದಿಲ್ಲವೇ?’ ಎಂದು ಪ್ರಶ್ನಿಸಿದ್ದಾರೆ.

ಇಂಡಿಯಾ ಎಂಬುದು ಸುಂದರ, ಸುಮಧುರ ಹಾಗೂ ಪವಿತ್ರ ಹೆಸರು. ಇಂಡಿಯಾ ಹೆಸರಿನ ಬಗ್ಗೆ ಇಷ್ಟೊಂದು ಅಸಹನೆ ಹೊಂದಿರುವ ನೀವು, ನಿಮ್ಮದೇ ಸರ್ಕಾರದ ಕಾರ್ಯಕ್ರಮಗಳಾದ ಮೇಕ್‌ ಇನ್‌ ಇಂಡಿಯಾ, ಸ್ಟಾರ್ಚ್‌ ಅಪ್‌ ಇಂಡಿಯಾ, ಸ್ಕಿಲ್‌ ಇಂಡಿಯಾ ಮೊದಲಾದ ಕಾರ್ಯಕ್ರಮಗಳ ಹೆಸರನ್ನೂ ಬದಲಾಯಿಸುವಿರಾ? ಎಂದು ಪ್ರಶ್ನೆ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ