ಅವಾಚ್ಯ ಶಬ್ದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷ್ಯ ಇದೆ, ಸರ್ಕಾರ ತನಿಖೆ ನಡೆಸುತ್ತೆ, ಬೇರೆ ತನಿಖೆ ಏಕೆ? : ಸಿಎಂ ಸಿದ್ದರಾಮಯ್ಯ

Published : Dec 23, 2024, 04:52 AM ISTUpdated : Dec 23, 2024, 04:53 AM IST
ಅವಾಚ್ಯ ಶಬ್ದ ಬಳಸಿದ್ದಕ್ಕೆ ನಮ್ಮ ಬಳಿ ಸಾಕ್ಷ್ಯ ಇದೆ, ಸರ್ಕಾರ ತನಿಖೆ ನಡೆಸುತ್ತೆ, ಬೇರೆ ತನಿಖೆ ಏಕೆ? : ಸಿಎಂ ಸಿದ್ದರಾಮಯ್ಯ

ಸಾರಾಂಶ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಿ.ಟಿ. ರವಿ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಡಿಯೋ ಮತ್ತು ಆಡಿಯೋ ಕ್ಲಿಪ್ಪಿಂಗ್‌ಗಳಂತಹ ಸಾಕ್ಷ್ಯಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸ್ ತನಿಖೆ ನಡೆಯುತ್ತಿದ್ದು, ನ್ಯಾಯಾಂಗ ತನಿಖೆಯ ಅಗತ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಲಬುರಗಿ (ಡಿ.23): ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಅವಾಚ್ಯ ಶಬ್ದ ಬಳಸಿದ ಕುರಿತು ವಿಡಿಯೋ, ಆಡಿಯೋ ಕ್ಲಿಪಿಂಗ್ ಸಾಕ್ಷ್ಯ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸಿ.ಟಿ. ರವಿ ಅವಾಚ್ಯ ಶಬ್ದ ಬಳಿಸಿದ್ದು ಸತ್ಯ. ಸದನದ ಸದಸ್ಯರು ಅದಕ್ಕೆ ಸಾಕ್ಷಿ‌ ಇದ್ದಾರೆ ಎಂದು ಸಮರ್ಥಿಸಿಕೊಂಡರು.

ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ಬರುವುದು ನಾಚಿಕೆಗೇಡಿನದ್ದು. ಆ ಪದ ಬಳಸಿರುವುದನ್ನು ಇತರೆ ವಿಧಾನ ಪರಿಷತ್ ಸದಸ್ಯರು ಕೇಳಿಸಿಕೊಂಡಿದ್ದಾರೆ ಎಂದರು.

ಈ ಸಂಚಿನಲ್ಲಿ ಸಿಎಂ ಸಿದ್ದರಾಮಯ್ಯ ಕೈವಾಡ..; ಸಿಟಿ ರವಿ ಸ್ಫೋಟಕ ಹೇಳಿಕೆ!

ಸಿ.ಟಿ. ರವಿ ಪ್ರಕರಣ ಕುರಿತಂತೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ, ನ್ಯಾಯಾಂಗ ತನಿಖೆ ಯಾಕೆ ಬೇಕು? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು. ಇದು ಕ್ರಿಮಿನಲ್ ಅಪರಾಧ ಪ್ರಕರಣ. ಬಿಜೆಪಿಯವರು ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ನ್ಯಾಯಾಂಗ ತನಿಖೆ ಕೇಳುತ್ತಿದ್ದಾರೆ ಎಂದು ಹೇಳಿದರು.

ತನಿಖೆ ನಡೆಯುತ್ತಿದೆ, ಬೇರೆ ತನಿಖೆ ಏಕೆ?

ಸಿ.ಟಿ.ರವಿ ಬಳಸಿದ ಪದ ಅತ್ಯಂತ ಅನಾಗರಿಕವಾದದ್ದು. ಬಿಜೆಪಿಯ ರಾಷ್ಟ್ರೀಯ ಪದಾಧಿಕಾರಿ ಆಗಿದ್ದ ರವಿ ಬಾಯಲ್ಲಿ ಇಂಥಾ ಮಾತು ಬರುವುದು ನಾಚಿಕೆಗೇಡಿನದ್ದು. ಪ್ರಕರಣ ಕುರಿತು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ನ್ಯಾಯಾಂಗ ತನಿಖೆ ಯಾಕೆ ಬೇಕು?

- ಸಿದ್ದರಾಮಯ್ಯ, ಮುಖ್ಯಮಂತ್ರಿ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಯಾಕೆ ಕೇಸ್ ಇಲ್ಲ? ಕೇಂದ್ರದ ವಿರುದ್ಧ ಪ್ರಿಯಾಂಕ್ ಪ್ರಶ್ನೆಗಳ ಸುರಿಮಳೆ!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್