
ಬೆಂಗಳೂರು (ಮೇ.27): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದುರ್ಬಲ ಹಾಗೂ ಭ್ರಷ್ಟಮುಖ್ಯಮಂತ್ರಿ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಯತ್ನ ಕೊನೆಯ ಹಂತ ತಲುಪಿದೆ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಡಳಿತ ವೈಫಲ್ಯ ಹಾಗೂ ಕೊರೋನಾ ನಿಯಂತ್ರಣದಲ್ಲಿ ವಿಫಲತೆಯಿಂದಾಗಿ ಮುಖ್ಯಮಂತ್ರಿ ಬದಲಾವಣೆ ಆಗುತ್ತಿದೆ. ಇವರ ಬಳಿ ಯಾರೇ ಮುಖ್ಯಮಂತ್ರಿಯಾದರೂ ಅವರೂ ದುರ್ಬಲ ಮುಖ್ಯಮಂತ್ರಿಯೇ ಆಗುತ್ತಾರೆ ಎಂದು ದೂರಿದರು.
ನಗರಗಳಿಂದ ಹಳ್ಳಿಗೆ ಹೋಗುವ ಜನರ ಮೇಲೆ ನಿಗಾ ಇಡಿ: ಸಿಎಂ! ..
ಯಡಿಯೂರಪ್ಪ ಅವರ ಮೇಲೆ ಸಚಿವರು ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಪಕ್ಷದವರೇ ಅವರ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಶಾಸಕಾಂಗ ಪಕ್ಷದ ಸಭೆಯಲ್ಲಿ ಯಡಿಯೂರಪ್ಪ ಅವರಿಗೆ ಬಹುಮತ ಇಲ್ಲ. ಹೈಕಮಾಂಡ್ಗೂ ಯಡಿಯೂರಪ್ಪ ಅವರ ಬಗ್ಗೆ ದೂರುಗಳು ಹೋಗಿವೆ. ಹೀಗಾಗಿ ಶಾಸಕಾಂಗ ಪಕ್ಷದ ಸಭೆ ಕರೆಯಲು ಹೇಳಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.