
ಬೆಂಗಳೂರು[ಜ.18] ತೀವ್ರ ಕುತೂಹಲ ಮೂಡಿಸಿರುವ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ.
ಸಂಜೆ 4.30ಕ್ಕೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ. ಮಧ್ಯಾಹ್ನ 3.30ಕ್ಕೆ ಶಾಸಕಾಂಗ ಪಕ್ಷದ ಸಭೆಯನ್ನು ನಿಗದಿ ಮಾಡಲಾಗಿದ್ದು ಒಂದು ಗಂಟೆ ತಡವಾಗಿ ಆರಂಭವಾಗಿದೆ.
ಬಿ.ಸಿ.ಪಾಟೀಲ್ ಪುತ್ರಿಯ ವಿವಾಹ ಸಮಾರಂಭ, ಎಚ್.ಕೆ.ಪಾಟೀಲ ಪದಗ್ರಹಣ ಸಮಾರಂಭದ ಕಾರಣದಿಂದಾಗಿ ಸಭೆ ವಿಳಂಬವಾಗಿದೆ.
ಕಾಂಗ್ರೆಸ್ ಸಭೆಗೆ ಬಾರದ ಶಾಸಕರು ಯಾರ್ಯಾರು?
ಗೈರಾದವರು ಯಾರು?
ಲೆಕ್ಕದಲ್ಲಿ ಇನ್ನೂ 7 ಶಾಸಕರು ಬಾಕಿ ಉಳಿದುಕೊಂಡಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಗೆ ಈವರೆಗೂ 73 ಶಾಸಕರು ಆಗಮಿಸಿದ್ದಾರೆ. ನಾಲ್ವರು ಅತೃಪ್ತ ಶಾಸಕರನ್ನು ಬಿಟ್ಟರೆ ಇನ್ನೂ 3 ಶಾಸಕರು ಇನ್ನೂ ಬಂದಿಲ್ಲ. ಸ್ಪೀಕರ್ ಆಗಿರುವುದರಿಂದ ಕೆ.ಆರ್.ರಮೇಶ್ ಕುಮಾರ್ ಅವರು ಆಗಮಿಸುವುದಿಲ್ಲ.
ಬಿ.ನಾರಾಯಣರಾವ್ ಮತ್ತು ರೂಪಾ ಶಶಿಧರ್ ಸೇರಿ ಗೋಕಾಕ್ ಶಾಸಕ, ಶಾಸಕ ಮಹೇಶ್ ಕುಮಟಳ್ಳಿ, ಡಾ.ಉಮೇಶ್ ಜಾಧವ್, ಬಿ.ನಾಗೇಂದ್ರ ಸೇರಿ ನಾಲ್ವರು ಅತೃಪ್ತ ಶಾಸಕರು ಶಾಸಕಾಂಗ ಸಭೆಗೆ ಆಗಮಿಸಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.