ರಾಜ್ಯ ಕಾಂಗ್ರೆಸ್‌ಗೆ ವರಿಷ್ಠರಿಂದ ಭೇಷ್‌

Kannadaprabha News   | Kannada Prabha
Published : Nov 10, 2025, 04:56 AM IST
 Randeep Surjewala

ಸಾರಾಂಶ

‘ಮತಗಳ್ಳತನ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ದೇಶದಲ್ಲಿಯೇ ಮುಂದಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ದಾಖಲೆಯ 1.12 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ಇದರ ಮೂಲಕ ಚುನಾವಣಾ ಆಯೋಗದ ವಿರುದ್ಧ ರಾಜ್ಯದ ಜನರ ಆಕ್ರೋಶ ಬಯಲಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರು : ‘ಮತಗಳ್ಳತನ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ದೇಶದಲ್ಲಿಯೇ ಮುಂದಿದ್ದು, ಜನರಲ್ಲಿ ಜಾಗೃತಿ ಮೂಡಿಸಲು ದಾಖಲೆಯ 1.12 ಕೋಟಿ ಸಹಿ ಸಂಗ್ರಹ ಮಾಡಲಾಗಿದೆ. ಇದರ ಮೂಲಕ ಚುನಾವಣಾ ಆಯೋಗದ ವಿರುದ್ಧ ರಾಜ್ಯದ ಜನರ ಆಕ್ರೋಶ ಬಯಲಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ .

ಕಾಂಗ್ರೆಸ್‌ ಕಾರ್ಯವೈಖರಿ ಶ್ಲಾಘಿಸಿರುವ ಸುರ್ಜೇವಾಲಾ

ಪತ್ರಿಕಾ ಹೇಳಿಕೆ ಮೂಲಕ ರಾಜ್ಯ ಕಾಂಗ್ರೆಸ್‌ ಕಾರ್ಯವೈಖರಿಯನ್ನು ಶ್ಲಾಘಿಸಿರುವ ಸುರ್ಜೇವಾಲಾ, ‘ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ದೇಶಾದ್ಯಂತ ಮತಗಳ್ಳತನ ವಿರುದ್ಧ ಸಹಿ ಸಂಗ್ರಹ ಅಭಿಯಾನ ನಡೆಸಲಾಗಿದೆ. ಅದರಲ್ಲಿ ಕರ್ನಾಟಕ ದೇಶದಲ್ಲಿಯೇ ಅತಿ ಹೆಚ್ಚು ಸಹಿ ಸಂಗ್ರಹಿಸಿ ಮೊದಲ ಸ್ಥಾನ ಗಳಿಸಿದೆ. ಈ ಐತಿಹಾಸಿಕ ಯಶಸ್ಸಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಅಭಿನಂದನೆಗಳು’ ಎಂದಿದ್ದಾರೆ.

ಸಹಿ ಸಂಗ್ರಹಿಸಿ ಅಭಿಯಾನ ಯಶಸ್ವಿ

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿ ಅವರು ಬೆಂಗಳೂರು ಸ್ವಾತಂತ್ರ್ಯ ಉದ್ಯಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ಆಯೋಜಿಸಿ ಮತಗಳ್ಳತನ ವಿರುದ್ಧ ಜಾಗೃತಿ ಮೂಡಿಸಿದ್ದರು. ಅಲ್ಲದೆ, ರಾಹುಲ್‌ ಗಾಂಧಿ ಅವರ ಕರೆ ಮೇರೆಗೆ ಕೆಪಿಸಿಸಿ ವಿವಿಧ ವಿಭಾಗಗಳು ಜನರ ಬಳಿಗೆ ತೆರಳಿ ಅವರಲ್ಲಿ ಜಾಗೃತಿ ಮೂಡಿಸಿ, ಅತಿಹೆಚ್ಚು ಸಹಿ ಸಂಗ್ರಹಿಸಿ, ಅಭಿಯಾನ ಯಶಸ್ವಿಗೊಳಿಸಿವೆ. ಅನ್ಯಾಯದ ವಿಚಾರದಲ್ಲಿ ಕರ್ನಾಟಕ ಮೊದಲಿಗೆ ಧ್ವನಿ ಎತ್ತುತ್ತದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಹೀಗೆ ಸಂಗ್ರಹಿಸಲಾಗಿರುವ ಸಹಿಯನ್ನು ದೆಹಲಿಗೆ ರವಾನಿಸಲಾಗುವುದು. ಜತೆಗೆ ಮತಗಳ್ಳತನ ವಿರುದ್ಧ ನ. 25ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗುವುದು’ ಎಂದು ವಿವರಿಸಿದ್ದಾರೆ.

‘ಚುನಾವಣಾ ಆಯೋಗವು ಮತ ಅಕ್ರಮಗಳಲ್ಲಿ ಭಾಗಿಯಾಗಿದೆ. ಆಯೋಗದ ನಿಷ್ಕ್ರಿಯತೆ ನೋಡಿದರೆ, ಮುಂಬರುವ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳು ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್‌ ಪೇಪರ್‌ ಮೂಲಕ ನಡೆಸಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು’ ಎಂದು ಸಲಹೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!
ಸಿಎಂ ಸಿದ್ದರಾಮಯ್ಯನವರೇ ಮತಿಗೇಡಿಗಳಾಗಿ, ಆದ್ರೆ ಅಧಿಕಾರಕ್ಕಾಗಿ ಲಜ್ಜೆಗೇಡಿಗಳಾಗಬೇಡಿ-ಆರ್. ಅಶೋಕ್ ಟೀಕೆ