'ಕಟೀಲ್​ ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು'

Published : Oct 17, 2021, 08:43 PM IST
'ಕಟೀಲ್​ ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು'

ಸಾರಾಂಶ

* ಕಾಂಗ್ರೆಸ್-ಬಿಜೆಪಿ ನಡುವೆ ಟ್ವಿಟ್ಟರ್ ವಾರ್ * ಬಿಜೆಪಿಯ ಟ್ವೀಟ್​ಗೆ ಪ್ರತ್ಯುತ್ತರ ನೀಡಿ ಟ್ವೀಟ್​ ಮಾಡಿರುವ ಕಾಂಗ್ರೆಸ್ * ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ತಿರುಗೇಟು

ಬೆಂಗಳೂರು, (ಅ.17): ಸಿಂದಗಿ ಹಾಗೂ ಹಾನಗಲ್​​ ಉಪಚುನಾವಣೆಯ (By Election) ಕಾವು ದಿನದಿದ ದಿನಕ್ಕೆ ರಂಗೇರುತ್ತಿದೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ.

ಪ್ರಚಾರದ ಮಧ್ಯೆ  ಮೂರು ಪಕ್ಷಗಳ ನಾಯಕರ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಅದರಲ್ಲೂ ಬಿಜೆಪಿ(BJP) ಹಾಗೂ ಕಾಂಗ್ರೆಸ್9Congress) ನಡುವೆ ಟ್ವಿಟ್ಟರ್ (Twitter) ವಾರ್ ಶುರುವಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ (Nalin Kumar Kateel) ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು ಎಂದು ಆ ಬಾಗದ ಗುಸುಗುಸು, ನಿಜವೇ ಬಿಜೆಪಿ? ಎಂದು ಕಾಂಗ್ರೆಸ್​ ಪ್ರತ್ನಿಸಿದೆ.

ಸಿದ್ದರಾಮಯ್ಯ ವರ್ಸಸ್ ಬಿಜೆಪಿ ನಡುವೆ ಟ್ವೀಟ್ ವಾರ್

ಸಲೀಂ, ಉಗ್ರಪ್ಪ ನಡುವಿನ ವೈರಲ್​ ಸಂಭಾಷಣೆಯನ್ನು ಮುಂದಿಟ್ಟು ಡಿಕೆ ಶಿವಕುಮಾರ್ (DK Shivakumar) ಅವರ ವಿರುದ್ಧ ಟ್ವೀಟ್​ ಮಾಡಿದ್ದ ಬಿಜೆಪಿ, ಕೆಪಿಸಿಸಿ ರಾಜ್ಯಾಧ್ಯಕ್ಷರು ಈಗ ಭ್ರಷ್ಟಾಧ್ಯಕ್ಷ ಎಂದೇ ಕುಖ್ಯಾತರಾಗಿದ್ದಾರೆ. ಅಕ್ರಮ ಸಂಪಾದನೆ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್​ ಯಾತ್ರೆ ಮುಗಿಸಿ ಈಗ ಜಾಮೀನಿನ ಮೇಲೆ ಹೊರಗಿದ್ದಾರೆ. ಪಕ್ಷದ ಕಚೇರಿಗೆ ಭೇಟಿ ನೀಡುವುದಕ್ಕಿಂತ ಡಿಕೆ ಶಿವಕುಮಾರ್ ಅವರು ಹೆಚ್ಚಾಗಿ ಕೋರ್ಟಿಗೆ ಅಲೆದಾಡುತ್ತಿದ್ದಾರೆ ಎಂದು ಟೀಕೆ ಮಾಡಿ ಟ್ವೀಟ್​ ಮಾಡಿತ್ತು.

ಇದಕ್ಕೆ ಬಿಜೆಪಿಯ ಟ್ವೀಟ್​ಗೆ ಪ್ರತ್ಯುತ್ತರ ನೀಡಿ ಟ್ವೀಟ್​ ಮಾಡಿರುವ ಕಾಂಗ್ರೆಸ್​​, ತಮ್ಮದೇ ಪಕ್ಷದ ಬಿಎಸ್​​​ ಯಡಯೂರಪ್ಪ ಅವರನ್ನು ಮತ್ತೊಮ್ಮೆ ಜೈಲಿಗೆ ಕಳಿಸಲು ಐಟಿ ಬಲೆ ಹೆಣೆದಿರುವ ಬಿಜೆಪಿ ಕರ್ನಾಟಕ ವಿಪಕ್ಷದವರನ್ನು ಸಿಲುಕಿಸಲು ಯತ್ನಿಸುವುದು ವಿಶೇಷವೇನಲ್ಲ ಬಿಡಿ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಪಕ್ಷದ ಕಚೇರಿಗೆ ಭೇಟಿ ಕೊಡುವುದಕ್ಕಿಂತ ಮಂಗಳೂರಿನ ಗೆಳತಿಯರ ಹಿಂದೆ ಅಲೆಯುವುದೇ ಹೆಚ್ಚು ಎಂದು ಆ ಬಾಗದ ಗುಸುಗುಸು, ನಿಜವೇ ಬಿಜೆಪಿ? ಎಂದು ಕಾಂಗ್ರೆಸ್​ ಪ್ರತ್ನಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Trade Deal: ಇದು ಒಪ್ಪಂದವಲ್ಲ, ದೇಶಕ್ಕೆ ಬಗೆದ ದ್ರೋಹ! - ಕೇಂದ್ರದ ವಿರುದ್ಧ ಖರ್ಗೆ ಗುಡುಗು
ಫೆ. 4 ರಂದು ಪ್ರಧಾನಿ ಮೇಲೆ ಸಂಸತ್‌ನಲ್ಲಿ ಹಲ್ಲೆ ನಡೆಸಲು ವಿಪಕ್ಷ ಸಂಚು ನಡೆಸಿತ್ತಾ? ವೀಡಿಯೋ ಬಿಡುಗಡೆ ಮಾಡಿದ ಸಚಿವ ಕಿರಣ್ ರಿಜಿಜು