'ಬಿಜೆಪಿ ಆಡಳಿತದಲ್ಲಿ ಕಾನೂನು ಎಂಬುದು ಪುಸ್ತಕದ ಬದನೆಕಾಯಿಯಾಗಿದೆ'

Published : Jul 03, 2021, 03:59 PM IST
'ಬಿಜೆಪಿ ಆಡಳಿತದಲ್ಲಿ ಕಾನೂನು ಎಂಬುದು ಪುಸ್ತಕದ ಬದನೆಕಾಯಿಯಾಗಿದೆ'

ಸಾರಾಂಶ

* ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕನ ಕೋಟಿ-ಕೋಟಿ ಡೀಲ್ ಪ್ರಕರಣ * ಅರೆಸ್ಟ್ ಮಾಡಿದ 24 ಗಂಟೆಗಳಲ್ಲಿ ಶ್ರೀರಾಮುಲು ಪಿಎ ರಿಲೀಸ್ * ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು, (ಜುಲೈ.03): ವಂಚನೆ ಪ್ರಕರಣದಲ್ಲಿ ಸಚಿವ ಶ್ರೀರಾಮುಲು ಪಿಎ ಬಂಧಿಸಿದ 24 ಗಂಟೆಯೊಳಗೆ ಬಿಡುಗಡೆಗೊಳಿಸಿದ್ದು ರಾಜ್ಯದಲ್ಲಿ ಪೊಲೀಸರಿಗೆ ಸ್ವತಂತ್ರವಿಲ್ಲದ ವಾತಾವರಣಕ್ಕೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕರ್ನಾಟಕ ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಸಚಿವ ಶ್ರೀರಾಮುಲು ಪಿ ಎ ವಿರುದ್ದ ಎಫ್ ಐಆರ್ ಆಗಿದ್ದರೂ ಕೋರ್ಟಿಗೆ ಹಾಜರುಪಡಿಸದೆ ಬಿಡುಗಡೆಗೊಳಿಸಿದ್ದು ಏಕೆ? ಪ್ರಭಾವ ಬೀರಿದ್ದು ಯಾರು? ಬಿಜೆಪಿ ಆಡಳಿತದಲ್ಲಿ ಕಾನೂನು ಎಂಬುದು ಪುಸ್ತಕದ ಬದನೆಕಾಯಿಯಾಗಿದೆ ಎಂದು ಟೀಕಿಸಿದೆ.

ಅರೆಸ್ಟ್ ಆಗಿದ್ದ ರಾಮುಲು ಆಪ್ತ ರಿಲೀಸ್, ಅನುಮಾನ ಮೂಡಿಸಿದ ಸಿಸಿಬಿ ನಡೆ

ಅರೆಸ್ಟ್ ಮಾಡಿ ಎಂದಾಗ ಅರೆಸ್ಟ್ ಮಾಡುವುದು, ಬಿಡುಗಡೆ ಮಾಡಿ ಎಂದಾಗ ಬಿಡುಗಡೆ ಮಾಡುವುದಕ್ಕೆ ಪೊಲೀಸರು ವಿಜಯೇಂದ್ರ ಮನೆಯ ಕಾಲಾಳುಗಳಂತಗಿದ್ದಾರೆಯೇ? ಎಫ್ ಐಆರ್ ದಾಖಲಾಗಿದ್ದರೂ ಆರೋಪಿಯನ್ನ ಬಿಡುಗಡೆ ಮಾಡುವುದರ ಹಿಂದೆ ಭ್ರಷ್ಟ ಹಣದ “ಸೆಟಲ್ಮೆಂಟ್” ನಡೆದಿರುವಂತಿದೆ. ಬಸವರಾಜ್ ಬೊಮ್ಮಾಯಿ ಅವರೇ, ಪೊಲೀಸ್ ಇಲಾಖೆ ನಿಮ್ಮ ಪಕ್ಷದ ಅನುಕೂಲಕ್ಕೆ ಇರುವುದೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ರಾಜ್ಯದಲ್ಲಿ ಅಧಿಕಾರಿಗಳದ್ದು ಡೀಲಿಂಗ್, ಸಚಿವರದ್ದು ಡೀಲಿಂಗ್, ಸಚಿವರ ಪಿಎಗಳದ್ದೂ ಡೀಲಿಂಗ್. ನಿಮ್ಮ ಪಕ್ಷದ ಈ ಸರ್ಕಾರ ಎಷ್ಟು ಪರ್ಸೆಂಟ್‌ನದ್ದು ಸ್ವಲ್ಪ ಹೇಳಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಟ್ಯಾಗ್ ಮಾಡಿ ವ್ಯಂಗ್ಯವಾಡಿದೆ..

ಅಮಿತ್ ಶಾ ಅವರು ಈ ಹಿಂದೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರವನ್ನು 10 ಪರ್ಸೆಂಟ್ ಎಂದು ಲೇವಡಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ಕಾಂಗ್ರೆಸ್ ಅಮಿತ್ ಶಾಗೆ ತಿರುಗೇಟು ಕೊಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಟಿವಿಕೆ ಪಕ್ಷವೇ ಕಿಂಗ್! ಅಧಿಕಾರ ಗದ್ದುಗೆಗೆ ಮ್ಯಾಜಿಕ್ ನಂಬರ್ ಎಷ್ಟು ಬೇಕು?
Election 2026: ದಳಪತಿ ವಿಜಯ್‌, ಮಮತಾ ಬ್ಯಾನರ್ಜಿ, ಪಳನಿಸ್ವಾಮಿ, ಸ್ಟಾಲಿನ್‌ ಜಾತಕ ಹೇಗಿದೆ? ಯಾರು ಗೆಲ್ತಾರೆ?