
ಬೆಂಗಳೂರು, (ಏ.14): ಕರ್ನಾಟಕ ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.
ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಎನ್ನುವ ಮತಿಗೆಟ್ಟ ಅಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ? ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೋಟ್ಯಾಂತರ ಬೆಲೆಯ ಆಸ್ತಿ ಬಂದಿದ್ದು ಹೇಗೆ? ಲೋಕಾಯುಕ್ತ ಕೋರ್ಟಿನಲ್ಲಿ 409,420, 120, 463, 466, 120B ಪ್ರಕರಣಗಳು ಇರುವುದೇಕೆ? ಲೂಟಿ ರವಿ ಉತ್ತರಿಸುವರೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.
ಬಿಜೆಪಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮನಸೋಇಚ್ಛೆ ವಾಗ್ದಾಳಿ!
ಜನತೆ ಸಂಕಷ್ಟದಲ್ಲಿದ್ದಾರೆ, ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಿ ಎನ್ನುವ ಸಿದ್ದರಾಮಯ್ಯನವರ ಸಲಹೆಗೆ ಬುದ್ದಿ ಭ್ರಮಣೆಯಾದವರಂತೆ ಮಾತನಾಡುವ ಡಿಸಿಎಂ ಅಶ್ವಥ್ ನಾರಾಯಣ ಮತ್ತು ಸಿ.ಟಿ.ರವಿ ಅವರೇ, 'ಪಿಎಂ ಕೇರ್ಸ್,ಕೊರೋನಾ ಪ್ಯಾಕೇಜ್, 20 ಲಕ್ಷ ಕೋಟಿ ಪ್ಯಾಕೇಜ್' ಇವೆಲ್ಲ ಎಲ್ಲಿ ಹೋದವು ಎಂದು ಹೇಳಿ, ಇಲ್ಲವೇ ಅವೆಲ್ಲ ಬೋಗಸ್ ಎಂದು ಒಪ್ಪಿಕೊಳ್ಳಿ ತಿರುಗೇಟು ಕೊಟ್ಟಿದೆ.
ರಾಜ್ಯದಲ್ಲಿ ಕೊರೋನಾ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಆಕ್ಸಿಜನ್ ಕೊರತೆ, ವೈದ್ಯರ ಕೊರತೆ, ಆಂಬ್ಯುಲೆನ್ಸ್ ಕೊರತೆ, ಪಿಪಿಇ ಕಿಟ್ ಕೊರತೆ, ಬೆಡ್ಗಳ ಕೊರತೆ, ಐಸಿಯು ಕೊರತೆ, ಸ್ಮಶಾನದಲ್ಲಿ ಜಾಗದ ಕೊರತೆ, ಸರ್ಕಾರಕ್ಕೆ ಮನಿಷ್ಯತ್ವದ ಕೊರತೆ ಬಿಜಪಿ ಸರ್ಕಾರದ ಲಜ್ಜೆಗೆಟ್ಟ ಆಡಳಿತದಲ್ಲಿ ರಾಜ್ಯ ಸ್ಮಶಾನವಾಗುವತ್ತ ಸಾಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.