'ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಕೋಟ್ಯಾಂತರ ಆಸ್ತಿ ಮಾಡಿದ್ದು ಹೇಗೆ?'

By Suvarna NewsFirst Published Apr 14, 2021, 5:06 PM IST
Highlights

ಕರ್ನಾಟಕ ಕಾಂಗ್ರೆಸ್ ನಡೆಸಿರುವ ಟ್ವಿಟ್ಟರ್ ವಾರ್‌ನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ.ರವಿ ಹಾಗೂ ಬಿಜೆಪಿ ವಿರುದ್ಧ ಕಿಡಿಕಾರಿದೆ.

ಬೆಂಗಳೂರು, (ಏ.14): ಕರ್ನಾಟಕ ಕಾಂಗ್ರೆಸ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ  ಸಿ.ಟಿ.ರವಿ ಹಾಗೂ ಬಿಜೆಪಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ.

ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಸಿ.ಟಿ.ರವಿ ಎನ್ನುವ ಮತಿಗೆಟ್ಟ ಅಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ? ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೋಟ್ಯಾಂತರ ಬೆಲೆಯ ಆಸ್ತಿ ಬಂದಿದ್ದು ಹೇಗೆ? ಲೋಕಾಯುಕ್ತ ಕೋರ್ಟಿನಲ್ಲಿ 409,420, 120, 463, 466, 120B ಪ್ರಕರಣಗಳು ಇರುವುದೇಕೆ? ಲೂಟಿ ರವಿ ಉತ್ತರಿಸುವರೇ? ಎಂದು ಕರ್ನಾಟಕ ಕಾಂಗ್ರೆಸ್ ಪ್ರಶ್ನಿಸಿದೆ.

ಬಿಜೆಪಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಮನಸೋಇಚ್ಛೆ ವಾಗ್ದಾಳಿ!

ಚಿಕ್ಕಮಗಳೂರಿನಲ್ಲಿ ಅಬ್ಬೇಪಾರಿಯಂತೆ ತಿರುಗುತ್ತಿದ್ದ ಎನ್ನುವ ಮತಿಗೆಟ್ಟ ಅಸಾಮಿಯ ಖಜಾನೆ ಕೆಲವೇ ವರ್ಷದಲ್ಲಿ ತುಂಬಿದ್ದು ಹೇಗೆ?

ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಕೋಟ್ಯಾಂತರ ಬೆಲೆಯ ಆಸ್ತಿ ಬಂದಿದ್ದು ಹೇಗೆ?

ಲೋಕಾಯುಕ್ತ ಕೋರ್ಟಿನಲ್ಲಿ 409,420, 120, 463, 466, 120B ಪ್ರಕರಣಗಳು ಇರುವುದೇಕೆ?

ಲೂಟಿ ರವಿ ಉತ್ತರಿಸುವರೇ?

— Karnataka Congress (@INCKarnataka)

ಜನತೆ ಸಂಕಷ್ಟದಲ್ಲಿದ್ದಾರೆ, ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಿ ಎನ್ನುವ ಸಿದ್ದರಾಮಯ್ಯನವರ ಸಲಹೆಗೆ ಬುದ್ದಿ ಭ್ರಮಣೆಯಾದವರಂತೆ ಮಾತನಾಡುವ ಡಿಸಿಎಂ ಅಶ್ವಥ್ ನಾರಾಯಣ ಮತ್ತು ಸಿ.ಟಿ.ರವಿ ಅವರೇ, 'ಪಿಎಂ ಕೇರ್ಸ್,ಕೊರೋನಾ ಪ್ಯಾಕೇಜ್, 20 ಲಕ್ಷ ಕೋಟಿ ಪ್ಯಾಕೇಜ್' ಇವೆಲ್ಲ ಎಲ್ಲಿ ಹೋದವು ಎಂದು ಹೇಳಿ, ಇಲ್ಲವೇ ಅವೆಲ್ಲ ಬೋಗಸ್ ಎಂದು ಒಪ್ಪಿಕೊಳ್ಳಿ ತಿರುಗೇಟು ಕೊಟ್ಟಿದೆ.

ಜನತೆ ಸಂಕಷ್ಟದಲ್ಲಿದ್ದಾರೆ, ಪ್ರತಿ ಕುಟುಂಬಕ್ಕೆ 10 ಸಾವಿರ ನೀಡಿ ಎನ್ನುವ ಅವರ ಸಲಹೆಗೆ ಬುದ್ದಿ ಭ್ರಮಣೆಯಾದವರಂತೆ ಮಾತನಾಡುವ ಅವರೇ,

●ಪಿಎಂ ಕೇರ್ಸ್
●ಕರೋನಾ ಪ್ಯಾಕೇಜ್
●20 ಲಕ್ಷ ಕೋಟಿ ಪ್ಯಾಕೇಜ್

ಇವೆಲ್ಲ ಎಲ್ಲಿ ಹೋದವು ಎಂದು ಹೇಳಿ,
ಇಲ್ಲವೇ ಅವೆಲ್ಲ ಬೋಗಸ್ ಎಂದು ಒಪ್ಪಿಕೊಳ್ಳಿ.

— Karnataka Congress (@INCKarnataka)

ರಾಜ್ಯದಲ್ಲಿ ಕೊರೋನಾ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಆಕ್ಸಿಜನ್ ಕೊರತೆ, ವೈದ್ಯರ ಕೊರತೆ, ಆಂಬ್ಯುಲೆನ್ಸ್ ಕೊರತೆ, ಪಿಪಿಇ ಕಿಟ್ ಕೊರತೆ, ಬೆಡ್‌ಗಳ ಕೊರತೆ, ಐಸಿಯು ಕೊರತೆ, ಸ್ಮಶಾನದಲ್ಲಿ ಜಾಗದ ಕೊರತೆ, ಸರ್ಕಾರಕ್ಕೆ ಮನಿಷ್ಯತ್ವದ ಕೊರತೆ ಬಿಜಪಿ ಸರ್ಕಾರದ ಲಜ್ಜೆಗೆಟ್ಟ ಆಡಳಿತದಲ್ಲಿ ರಾಜ್ಯ ಸ್ಮಶಾನವಾಗುವತ್ತ ಸಾಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

ರಾಜ್ಯದಲ್ಲಿ ಕರೋನಾ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ
●ಆಕ್ಸಿಜನ್ ಕೊರತೆ
●ವೈದ್ಯರ ಕೊರತೆ
●ಆಂಬ್ಯುಲೆನ್ಸ್ ಕೊರತೆ
●ಪಿಪಿಇ ಕಿಟ್ ಕೊರತೆ
●ಬೆಡ್‌ಗಳ ಕೊರತೆ
●ICU ಕೊರತೆ
●ಸ್ಮಶಾನದಲ್ಲಿ ಜಾಗದ ಕೊರತೆ
●ಸರ್ಕಾರಕ್ಕೆ ಮನಿಷ್ಯತ್ವದ ಕೊರತೆ ಸರ್ಕಾರದ ಲಜ್ಜೆಗೆಟ್ಟ ಆಡಳಿತದಲ್ಲಿ ರಾಜ್ಯ ಸ್ಮಶಾನವಾಗುವತ್ತ ಸಾಗುತ್ತಿದೆ

— Karnataka Congress (@INCKarnataka)
click me!