
ರಾಯಚೂರು, (ಆ.17): ಬಿಜೆಪಿ ಕಲ್ಯಾಣ ಕರ್ನಾಟಕದ ವಿರೋಧಿ ಪಕ್ಷವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ವಾಗ್ದಾಳಿ ನಡೆಸಿದ್ದಾರೆ.
ಕಲಬುರಗಿ ವಿಭಾಗ ಮಟ್ಟದ ಸಭೆ ಹಿನ್ನೆಲೆಯಲ್ಲಿ ಇಂದು ಆ.17) ರಾಯಚೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಲ್ಯಾಣ ಕರ್ನಾಟಕದ ವಿರೋಧಿ ಪಕ್ಷವಾಗಿದೆ. ಬಿಜೆಪಿ ಸದಾಕಾಲವೂ ಕಲ್ಯಾಣ ಕರ್ನಾಟಕವನ್ನ ಕಡೆಗಣನೆ ಮಾಡುತ್ತಲೇ ಬಂದಿದೆ. 15 ನೂರು ಕೋಟಿಯಲ್ಲಿ 630 ಕೋಟಿ ಮಾತ್ರ ಬಿಡುಗಡೆ ಮಾಡಿದೆ. ಕೊರೋನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಕಿಡಿಕಾರಿದರು.
ಸಚಿವರು ಸರ್ಕಾರದಲ್ಲಿ ಚೀಯರ್ ಗರ್ಲ್ಸ್ ರೀತಿ ಆಗ್ತಿದ್ದಾರೆ: ಹರಿಪ್ರಸಾದ್ ಕಿಡಿ
ಕೊರೋನಾದಿಂದ ಮೃತರ ಪ್ರಮಾಣ ಪತ್ರ ಸಹ ಸಿಗುತ್ತಿಲ್ಲ. 371(ಜೆ) ವಿಶೇಷ ಸ್ಥಾನಮಾನ ಈ ಪ್ರದೇಶಕ್ಕೆ ನೀಡಿದ್ದಾರೆ. 371(ಜೆ ) ಅಡಿಯಲ್ಲಿ ನೇಮಕಾತಿಯೂ ಸಹ ಮಾಡುತ್ತಿಲ್ಲ. ಕಳೆದ ವರ್ಷದಿಂದ ಬೆಳೆ ವಿಮೆ ಕೂಡ ಸಹ ರೈತರಿಗೆ ಸಿಕ್ಕಿಲ್ಲ. ಯಡಿಯೂರಪ್ಪಗೆ ಮೋದಿ ಅವಮಾನಿಸಿ ಅಧಿಕಾರದಿಂದ ಕೆಳಗೆ ಇಳಿಸಿದ್ದಾರೆ ಎಂದರು.
ಯಡಿಯೂರಪ್ಪ ಏಕೆ ಅಧಿಕಾರದಿಂದ ಇಳಿಸಿದ್ರೂ ಎಂಬುವುದು ಮೋದಿ ಹೇಳಲಿ. ಕೇವಲ ಕರ್ನಾಟಕದಲ್ಲಿ ಮಂತ್ರಿಗಾಗಿ ನಾಯಕರ ಕಿತ್ತಾಟವೇ ನಡೆದಿದೆ. ರಾಜ್ಯದ ಜನರಿಗೆ ಬಿಜೆಪಿ ಕೊಡುಗೆ ಏನು ಎಂಬುವುದು ಹೇಳಲಿ ಎಂದು ಹಾಕಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.