ಕಾಂಗ್ರೆಸ್ ಹಿರಿಯ ನಾಯಕ ನಿಧನ: ಕಳಚಿದ ಮಧ್ಯೆ ಕರ್ನಾಟಕದ ಕೈ ಕೊಂಡಿ..!

Published : Oct 27, 2020, 02:08 PM ISTUpdated : Oct 27, 2020, 02:14 PM IST
ಕಾಂಗ್ರೆಸ್ ಹಿರಿಯ ನಾಯಕ ನಿಧನ: ಕಳಚಿದ ಮಧ್ಯೆ ಕರ್ನಾಟಕದ ಕೈ ಕೊಂಡಿ..!

ಸಾರಾಂಶ

ಕಾಂಗ್ರೆಸ್ ಹಿರಿಯ ಮುಖಂಡರೊಬ್ಬರು ವಿಧಿವಶರಾಗಿದ್ದು, ಅವರಿಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

ದಾವಣಗೆರೆ, (ಅ.27): ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಡಾ.ವೈ.ನಾಗಪ್ಪ (87)  ನಿಧನರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರೂ ಆಗಿದ್ದ ನಾಗಪ್ಪ ಅವರು ಇಂದು (ಮಂಗಳವಾರ) ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಧರಂ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದ ನಾಗಪ್ಪ ಅವರು ಹರಿಹರ ವಿಧಾನ ಸಭಾ ಕ್ಷೇತ್ರದಿಂದ 1989, 1999 ಹಾಗೂ 2004 ರಲ್ಲಿ ಶಾಸಕರಾಗಿ  ಆಯ್ಕೆಯಾಗಿದ್ದರು. 

ಕರ್ನಾಟಕದ MLC ಪುತ್ರ ಹಠಾತ್ ನಿಧನ, ಮಗನ ಮುಖ ನೋಡದ ಸ್ಥಿತಿಯಲ್ಲಿ ತಂದೆ

2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. 2008 ರಲ್ಲಿ ಮತ್ತೆ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಡಾ. ವೈ ನಾಗಪ್ಪ ಪರಾಭವಗೊಂಡಿದ್ದರು. ನಂತರ ಬದಲಾದ ರಾಜಕೀಯದಿಂದ ಮತ್ತು ಅನಾರೋಗ್ಯದಿಂದ  ರಾಜಕಾರಣದಿಂದ ದೂರ ಉಳಿದಿದ್ದರು.

1980 ರಲ್ಲಿ ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದರು. ಪದೇ ಪದೇ ವರ್ಗಾವಣೆ ಮಾಡಿಸಿದಾಗ ಬೇಸತ್ತು ಶಾಸಕರಿಗೆ ಸೆಡ್ಡು ಹೊಡೆದು ರಾಜಕೀಯ ಪ್ರವೇಶಿಸಿದ್ದರು. 

ಮೃತರು ಒಬ್ಬ ಪುತ್ರ, ಮೂವರು ಹೆಣ್ಣುಮಕ್ಕಳು, ಮೊಮ್ಮಕ್ಕಳು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಹರಿಹರದಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗಣ್ಯರ ಸಂತಾಪ
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಾ ಜಿ ಪರಮೇಶ್ವರ ರಾಜ್ಯದ ಸಿಎಂ ಆಗಬೇಕು, ರಾಜಕೀಯದಲ್ಲಿ ಸಂಚಲನ ಮೂಡಿಸೋ ಹೇಳಿಕೆ ಕೊಟ್ಟ ಕೇಂದ್ರ ಸಚಿವ ವಿ. ಸೋಮಣ್ಣ!
ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!